Homeಅಂತರಾಷ್ಟ್ರೀಯನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ನಡೆಸಿದ ಅಧ್ಯಯನಕ್ಕೆ ಮೂರು ವಿಜ್ಞಾನಿಗಳಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಘೋಷಿಸಿದೆ

- Advertisement -
- Advertisement -

ಮಹಿಳಾ ವಿಜ್ಞಾನಿ ಸೇರಿ ವಿಶ್ವದ ಆಳ ಗರ್ಭದಲ್ಲಿರುವ ರಹಸ್ಯಗಳನ್ನು ಅನಾವರಣ ಮಾಡಿದ ಮೂವರು ಭೌತವಿಜ್ಞಾನಿಗಳಿಗೆ ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸ್‌ ನೀಡುವ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರ ಲಭಿಸಿದೆ.

ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ರೋಜರ್‌ ಪೆನ್ರೋಸ್‌, ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಸಾಪೇಕ್ಷ ಸಿದ್ದಾಂತವನ್ನು ಅನ್ವೇಷಿಸುವುದಕ್ಕೆ ಗಣಿತದ ವಿನೂತನ ಪದ್ಧತಿಯನ್ನು ಕಂಡುಕೊಂಡವರು. ಈ ಪದ್ಧತಿಯ ಮೂಲಕ ಕಪ್ಪು ಕುಳಿ(black hole) ರೂಪ ಪಡೆಯುವ ಬಗೆಯನ್ನು ವಿವರಿಸಿದರು. ಇವರಿಗೆ ಪ್ರಶಸ್ತ್ರಿಯ ಒಂದು ಭಾಗವನ್ನು ನೀಡಲಾಗುತ್ತಿದೆ.

1965ರಲ್ಲಿ ರೋಜರ್‌ ಕಪ್ಪು ಕುಳಿಗಳು ನಿಜಕ್ಕೂ ಸೃಷ್ಟಿಯಾಗಬಹುದೆಂದು ನಿರೂಪಿಸಿದರು ಹಾಗೂ ಆ ಬಗ್ಗೆ ವಿವರವಾಗಿ ಉಲ್ಲೇಖಿಸಿದರು.

ಜರ್ಮನಿಯ ಮ್ಯಾಕ್ಸ್‌ಪ್ಲಾಂಕ್‌ ಇನ್‌ಸ್ಟ್ರಿಟ್ಯೂಟ್‌ ಆಫ್‌ ಎಕ್ಸ್‌ಟ್ರಾಟೆರಿಸ್ಟ್ರಿಯಲ್‌ ಫಿಸಿಕ್ಸ್‌ನಲ್ಲಿ ನಿರ್ದೇಶಕರಾಗಿರುವ ರೀನ್‌ಹಾರ್ಡ್‌ ಗೆಂಜೆಲ್‌ ಮತ್ತು ಲಾಸ್‌ ಏಂಜೆಲಿಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಆಂಡ್ರಿಯಾ ಘೆಜ್‌ ಪ್ರಶಸ್ತಿಯ ಇನ್ನೊಂದು ಭಾಗವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೂತನ ಹೆಪಟೈಟಿಸ್‌ ‘ಸಿ’ ವೈರಸ್‌ ಬಗೆಗಿನ ಸಂಶೋಧನೆಗೆ 2020ರ ನೊಬೆಲ್‌ ಪ್ರಶಸ್ತಿ

ತೊಂಬತ್ತರ ದಶಕದಿಂದ ಈ ಇಬ್ಬರು ವಿಜ್ಞಾನಿಗಳು ತಮ್ಮದೇ ತಂಡದ ಮೂಲಕ ನಮ್ಮ ಸೌರಮಂಡಲದಲ್ಲಿರುವ ಮಿಲ್ಕಿ ವೇ ಗೆಲಾಕ್ಸಿಯನ್ನು ಅಧ್ಯಯನ ಮಾಡಲಾರಂಭಿಸಿದರು. ಈ ಇಬ್ಬರು ವಿಜ್ಞಾನಿಗಳ ತಂಡವು ಗೆಲಾಕ್ಸಿಯ ಕೇಂದ್ರದಲ್ಲಿ, ಅದೃಶ್ಯವೂ ಹಾಗೂ ಅತ್ಯಂತ ಭಾರತದ ಕಾಯವಿರುವುದನ್ನು ಗುರುತಿಸಿತು. ಇದು ಗೆಲಾಕ್ಸಿಯ ನಕ್ಷತ್ರಗಳನ್ನು ನಿಯಂತ್ರಿಸುತ್ತದೆ ಎಂಬುದು ತಿಳಿಯಿತು.

40 ಲಕ್ಷ ಸೂರ್ಯರ ಸಾಂದ್ರತೆಯನ್ನ ಒಟ್ಟು ಮಾಡಿದರೆ ಆಗಬಹುದಾದ ದೊಡ್ಡದಾದ ಕಾಯವಿದು ಎಂಬುದನ್ನು ಗೆಂಜೆಲ್‌ ಮತ್ತು ಘೆಜ್‌ ತಂಡಗಳು ಕಂಡುಕೊಂಡವು.

ವಿಶೇಷವೆಂದರೆ ಘೆಜ್‌ ಭೌತಶಾಸ್ತ್ರದಲ್ಲಿ ನೊಬೆಲ್‌ ಗೌರವಕ್ಕೆ ಭಾಜನರಾದ ನಾಲ್ಕನೆಯ ಮಹಿಳಾ ವಿಜ್ಞಾನಿಯಾಗಿದ್ದಾರೆ. 1903ರಲ್ಲಿ ಪೊಲ್ಯಾಂಡಿನ ಮೇರಿ ಸ್ಕೊಲೊಡೋಸ್ಕ್‌, 1963ರಲ್ಲಿ ಅಮೆರಿಕದ ಮಾರಿಯಾ ಗೋಪರ್ಟ್‌ ಮೇಯರ್‌, 2018ರಲ್ಲಿ ಕೆನಡಾದ ಡೊನಾ ಸ್ಟ್ರಿಕ್‌ಲ್ಯಾಂಡ್‌ ಈ ಗೌರವಕ್ಕೆ ಪಾತ್ರರಾಗಿದ್ದರು.

ಕೃಪೆ: ಟೆಕ್ ಕನ್ನಡ


 

ಇದನ್ನೂ ಓದಿ: ಕೊರೋನಾ – ಭಾರತದ ಆರ್ಥಿಕತೆ: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು ಏನೇಳ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...