Homeಅಂತರಾಷ್ಟ್ರೀಯಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

- Advertisement -
- Advertisement -

ಭೀಮಾ ಕೊರೆಗಾಂವ್‌ನ ರಾಜಕೀಯ ಖೈದಿಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಿಕ್ಷಣ ತಜ್ಞರು, ಯುರೋಪಿಯನ್ ಯೂನಿಯನ್ ಸಂಸದರು, ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಇತರ ಭಾರತೀಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಭಾರತದ ಜೈಲುಗಳ ಶೋಚನೀಯವಾದ ನೈರ್ಮಲ್ಯ ಪರಿಸ್ಥಿತಿಯಲ್ಲಿ ಮಾನವ ಹಕ್ಕುಗಳ ಹೋರಾಟಗಾರರನ್ನು ಬಂಧಿಸುವುದು ಮತ್ತು ಸೂಕ್ತವಾದ ವೈದ್ಯಕೀಯ ಆರೈಕೆಯ ನೀಡದೆ ಇರುವುದರ ಬಗ್ಗೆ ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಬಂಧಿತರಾಗಿರುವ ರಾಜಕೀಯ ಕೈದಿಗಳು ಹೊಸ ಮತ್ತು ಹೆಚ್ಚು ತೀವ್ರವಾದ ಕೊರೊನಾ ವೈರಸ್ ರೋಗಕ್ಕೆ ತುತ್ತಾಗುವ ಅಪಾಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಭಾರತದ ರಾಜಕೀಯ ಕೈದಿಗಳಿಗೂ ಸೇರಿ, ಇತರ ಕೈದಿಗಳನ್ನು ಬಿಡುಗಡೆ ಮಾಡುವ ತಾತ್ಕಾಲಿಕ ಆಡಳಿತಾತ್ಮಕ ಆದೇಶವನ್ನು ನೀಡಬೇಕು ಎಂದು ಪತ್ರವು ಕೋರಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಅಂತಾರಾಷ್ಟ್ರೀಯ ಖ್ಯಾತಿಯ ಗಣ್ಯರು ಈ ಪತ್ರಕ್ಕೆ ಸಹಿ ಹಾಕಿದ್ದು, ಅವುಗಳಲ್ಲಿ ಖ್ಯಾತ ಶೈಕ್ಷಣಿಕ ಮತ್ತು ಭಾಷಾಶಾಸ್ತ್ರಜ್ಞ ನೋಮ್ ಚೋಮ್ಸ್ಕಿ, ಅನಿಯಂತ್ರಿತ ಬಂಧನ ಕುರಿತ ವಿಶ್ವಸಂಸ್ಥೆಯ ಕಾರ್ಯನಿರತ ಗುಂಪಿನ ಮಾಜಿ ಅಧ್ಯಕ್ಷ ಜೋಸ್ ಆಂಟೋನಿಯೊ ಗುವೇರಾ-ಬರ್ಮಡೆಜ್, ನೊಬೆಲ್ ಪ್ರಶಸ್ತಿ ವಿಜೇತರರಾದ ಓಲ್ಗಾ ಟೋಕಾರ್ಜುಕ್ ಮತ್ತು ವೋಲ್ ಸೊಯಿಂಕಾ, ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪಾರ್ಥಾ ಚಟರ್ಜಿ, ಬ್ರೌನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಶುತೋಷ್ ವರ್ಶ್ನಿ, ಮಾನವ ಹಕ್ಕುಗಳ ಕಾರ್ಯಕರ್ತ ಶಾಹಿದುಲ್ ಆಲಂ, ದಿ ಗಾರ್ಡಿಯನ್ ಯುಕೆ ಮಾಜಿ ಪ್ರಧಾನ ಸಂಪಾದಕ ಅಲನ್ ರಸ್ಬ್ರಿಡ್ಜರ್ ಮತ್ತು ಪತ್ರಕರ್ತ ನವೋಮಿ ಕ್ಲೈನ್ ಸಹಾಕಿದ್ದಾರೆ.

ನೀರು ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯಿರುವ ಕಿಕ್ಕಿರಿದ ಕಾರಾಗೃಹಗಳು ರಾಜಕೀಯ ಕೈದಿಗಳಿಗೆ ಗಂಭೀರ ಆರೋಗ್ಯದ ಅಪಾಯ ಉಂಟುಮಾಡುತ್ತವೆ ಎಂದು ಪತ್ರದಲ್ಲಿ ಸೂಚಿಸಲಾಗಿದೆ. ಈ ರಾಜಕೀಯ ಕೈದಿಗಳಲ್ಲಿ ಹಲವರು ಈಗಾಗಲೇ ಕೊರೊನಾಗೆ ತುತ್ತಾಗಿದ್ದರು ಮತ್ತು ಅವರ ಆರೋಗ್ಯದ ಕುರಿತು ನಿರ್ಲಕ್ಷ್ಯ ತಾಳುವ ಬಗ್ಗೆ ಆರೋಪಗಳೂ ಕೇಳಿ ಬಂದಿತ್ತು.

ಭೀಮಾ ಕೊರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧೀರ್ ಧವಾಲೆ, ದಲಿತ ಹಕ್ಕುಗಳ ಹೋರಾಟಗಾರ ಮಹೇಶ್ ರೌತ್, ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯ ವಿಭಾಗದ ಮುಖ್ಯಸ್ಥರಾಗಿದ್ದ ಶೋಮಾ ಸೇನ್, ವಕೀಲರಾದ ಅರುಣ್ ಫೆರೇರಾ ಮತ್ತು ವಕೀಲೆ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಕ್ರಾಂತಿಕಾರಿ ಬರಹಗಾರ ವರವರ ರಾವ್, ಸಾಮಾಜಿಕ ಹೋರಾಟಗಾರ ವೆರ್ನಾನ್ ಗೊನ್ಸಾಲ್ವೆಸ್, ಕೈದಿಗಳ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗ್ಯಾಡ್ಲಿಂಗ್, ಫಾದರ್ ಸ್ಟಾನ್ ಸ್ವಾಮಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹನಿ ಬಾಬು, ವಿದ್ವಾಂಸ ಮತ್ತು ದಲಿತ ಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ, ನಾಗರಿಕ ಸ್ವಾತಂತ್ರ್ಯ ಹೋರಾಟಗಾರ ಗೌತಮ್ ನವಲಖಾ , ಕಬೀರ್ ಕಲಾ ಮಂಚ್‌ನ ಸದಸ್ಯರಾದ ಸಾಗರ್ ಗೂರ್ಖೆ, ರಮೇಶ್ ಘೈಚೋರ್ ಮತ್ತು ಜ್ಯೋತಿ ಜಗ್ತಾಪ್ ಸೇರಿ ಒಟ್ಟು 16 ಜನರು ಬಂಧನದಲ್ಲಿದ್ದಾರೆ.

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...