Homeಅಂತರಾಷ್ಟ್ರೀಯಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

- Advertisement -
- Advertisement -

ಭೀಮಾ ಕೊರೆಗಾಂವ್‌ನ ರಾಜಕೀಯ ಖೈದಿಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಿಕ್ಷಣ ತಜ್ಞರು, ಯುರೋಪಿಯನ್ ಯೂನಿಯನ್ ಸಂಸದರು, ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಇತರ ಭಾರತೀಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಭಾರತದ ಜೈಲುಗಳ ಶೋಚನೀಯವಾದ ನೈರ್ಮಲ್ಯ ಪರಿಸ್ಥಿತಿಯಲ್ಲಿ ಮಾನವ ಹಕ್ಕುಗಳ ಹೋರಾಟಗಾರರನ್ನು ಬಂಧಿಸುವುದು ಮತ್ತು ಸೂಕ್ತವಾದ ವೈದ್ಯಕೀಯ ಆರೈಕೆಯ ನೀಡದೆ ಇರುವುದರ ಬಗ್ಗೆ ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಬಂಧಿತರಾಗಿರುವ ರಾಜಕೀಯ ಕೈದಿಗಳು ಹೊಸ ಮತ್ತು ಹೆಚ್ಚು ತೀವ್ರವಾದ ಕೊರೊನಾ ವೈರಸ್ ರೋಗಕ್ಕೆ ತುತ್ತಾಗುವ ಅಪಾಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಭಾರತದ ರಾಜಕೀಯ ಕೈದಿಗಳಿಗೂ ಸೇರಿ, ಇತರ ಕೈದಿಗಳನ್ನು ಬಿಡುಗಡೆ ಮಾಡುವ ತಾತ್ಕಾಲಿಕ ಆಡಳಿತಾತ್ಮಕ ಆದೇಶವನ್ನು ನೀಡಬೇಕು ಎಂದು ಪತ್ರವು ಕೋರಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಅಂತಾರಾಷ್ಟ್ರೀಯ ಖ್ಯಾತಿಯ ಗಣ್ಯರು ಈ ಪತ್ರಕ್ಕೆ ಸಹಿ ಹಾಕಿದ್ದು, ಅವುಗಳಲ್ಲಿ ಖ್ಯಾತ ಶೈಕ್ಷಣಿಕ ಮತ್ತು ಭಾಷಾಶಾಸ್ತ್ರಜ್ಞ ನೋಮ್ ಚೋಮ್ಸ್ಕಿ, ಅನಿಯಂತ್ರಿತ ಬಂಧನ ಕುರಿತ ವಿಶ್ವಸಂಸ್ಥೆಯ ಕಾರ್ಯನಿರತ ಗುಂಪಿನ ಮಾಜಿ ಅಧ್ಯಕ್ಷ ಜೋಸ್ ಆಂಟೋನಿಯೊ ಗುವೇರಾ-ಬರ್ಮಡೆಜ್, ನೊಬೆಲ್ ಪ್ರಶಸ್ತಿ ವಿಜೇತರರಾದ ಓಲ್ಗಾ ಟೋಕಾರ್ಜುಕ್ ಮತ್ತು ವೋಲ್ ಸೊಯಿಂಕಾ, ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪಾರ್ಥಾ ಚಟರ್ಜಿ, ಬ್ರೌನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಶುತೋಷ್ ವರ್ಶ್ನಿ, ಮಾನವ ಹಕ್ಕುಗಳ ಕಾರ್ಯಕರ್ತ ಶಾಹಿದುಲ್ ಆಲಂ, ದಿ ಗಾರ್ಡಿಯನ್ ಯುಕೆ ಮಾಜಿ ಪ್ರಧಾನ ಸಂಪಾದಕ ಅಲನ್ ರಸ್ಬ್ರಿಡ್ಜರ್ ಮತ್ತು ಪತ್ರಕರ್ತ ನವೋಮಿ ಕ್ಲೈನ್ ಸಹಾಕಿದ್ದಾರೆ.

ನೀರು ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯಿರುವ ಕಿಕ್ಕಿರಿದ ಕಾರಾಗೃಹಗಳು ರಾಜಕೀಯ ಕೈದಿಗಳಿಗೆ ಗಂಭೀರ ಆರೋಗ್ಯದ ಅಪಾಯ ಉಂಟುಮಾಡುತ್ತವೆ ಎಂದು ಪತ್ರದಲ್ಲಿ ಸೂಚಿಸಲಾಗಿದೆ. ಈ ರಾಜಕೀಯ ಕೈದಿಗಳಲ್ಲಿ ಹಲವರು ಈಗಾಗಲೇ ಕೊರೊನಾಗೆ ತುತ್ತಾಗಿದ್ದರು ಮತ್ತು ಅವರ ಆರೋಗ್ಯದ ಕುರಿತು ನಿರ್ಲಕ್ಷ್ಯ ತಾಳುವ ಬಗ್ಗೆ ಆರೋಪಗಳೂ ಕೇಳಿ ಬಂದಿತ್ತು.

ಭೀಮಾ ಕೊರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧೀರ್ ಧವಾಲೆ, ದಲಿತ ಹಕ್ಕುಗಳ ಹೋರಾಟಗಾರ ಮಹೇಶ್ ರೌತ್, ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯ ವಿಭಾಗದ ಮುಖ್ಯಸ್ಥರಾಗಿದ್ದ ಶೋಮಾ ಸೇನ್, ವಕೀಲರಾದ ಅರುಣ್ ಫೆರೇರಾ ಮತ್ತು ವಕೀಲೆ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಕ್ರಾಂತಿಕಾರಿ ಬರಹಗಾರ ವರವರ ರಾವ್, ಸಾಮಾಜಿಕ ಹೋರಾಟಗಾರ ವೆರ್ನಾನ್ ಗೊನ್ಸಾಲ್ವೆಸ್, ಕೈದಿಗಳ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗ್ಯಾಡ್ಲಿಂಗ್, ಫಾದರ್ ಸ್ಟಾನ್ ಸ್ವಾಮಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹನಿ ಬಾಬು, ವಿದ್ವಾಂಸ ಮತ್ತು ದಲಿತ ಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ, ನಾಗರಿಕ ಸ್ವಾತಂತ್ರ್ಯ ಹೋರಾಟಗಾರ ಗೌತಮ್ ನವಲಖಾ , ಕಬೀರ್ ಕಲಾ ಮಂಚ್‌ನ ಸದಸ್ಯರಾದ ಸಾಗರ್ ಗೂರ್ಖೆ, ರಮೇಶ್ ಘೈಚೋರ್ ಮತ್ತು ಜ್ಯೋತಿ ಜಗ್ತಾಪ್ ಸೇರಿ ಒಟ್ಟು 16 ಜನರು ಬಂಧನದಲ್ಲಿದ್ದಾರೆ.

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...