Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...