Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...