Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...