Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...