Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...