Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...