Homeಮುಖಪುಟಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

- Advertisement -
- Advertisement -

ರಷ್ಯಾದ ಸ್ವತಂತ್ರ ಪತ್ರಿಕೆಯಾದ ‘ನೊವಾಯಾ ಗೆಜೆಟಾ’ದ ಸಂಪಾದಕರು ತಮಗೆ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧದಿಂದ ಸ್ಥಳಾಂತರಗೊಂಡ ಮಕ್ಕಳಿಗೆ ಸಹಾಯ ಮಾಡಲು ಹರಾಜು ಹಾಕಲು ಮುಂದಾಗಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಉಕ್ರೇನ್ ಮೇಲಿನ ಆಕ್ರಮಣದ ನಂತರದಲ್ಲಿ ಸಾಕಷ್ಟು ಸವಾಲುಗಳ ನಡುವೆ ವ್ಲಾಡಿಮಿರ್ ಪುಟಿನ್ ಅವರ ಸರ್ಕಾರವನ್ನು ಟೀಕಿಸುವ ಕೊನೆಯ ಪ್ರಮುಖ ಸ್ವತಂತ್ರ ಮಾಧ್ಯಮವನ್ನು ಡಿಮಿಟ್ರಿ ಮುರಾಟೋವ್ ಮುನ್ನಡೆಸಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಮುರಾಟೋವ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ತಮಗೆ ದೊರೆತ 500,000 ಡಾಲರ್‌ ಬಹುಮಾನದ ಹಣವನ್ನು ನಿರಾಶ್ರಿತ ಮಕ್ಕಳ ಭವಿಷ್ಯ ರೂಪಿಸಲು ಚಾರಿಟಿಗೆ ದಾನ ಮಾಡುವುದಾಗಿ ಘೋಷಿಸಿದರು. 23-ಕ್ಯಾರಟ್ ಚಿನ್ನದ ನೊಬೆಲ್ ಪದಕವನ್ನು ನ್ಯೂಯಾರ್ಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಗೆ ವಿಶ್ವ ನಿರಾಶ್ರಿತರ ದಿನದಂದು ಮಾರಾಟ ಮಾಡಲಿದ್ದಾರೆ. ಹರಾಜಿನಲ್ಲಿ ಬರುವ ಎಲ್ಲಾ ಹಣವೂ ಯುನಿಸೆಫ್‌ಗೆ ನೀಡಲಾಗುತ್ತಿದೆ. ಉಕ್ರೇನ್‌ನ ನಿರಾಶ್ರಿತ ಮಕ್ಕಳಿಗೆ ಸಹಾಯ ಮಾಡಲಾಗುತ್ತದೆ.

ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮುರಾಟೋವ್ ಮಾತನಾಡುತ್ತಾ, ರಷ್ಯಾದ ಆಕ್ರಮಣದಿಂದ ಸ್ಥಳಾಂತರಗೊಂಡ 14 ಮಿಲಿಯನ್ ಉಕ್ರೇನಿಯನ್ನರ ಪರ ಒಲವು ತೋರಿಸಿದರು. ಈ ಸ್ಥಳಾಂತರವನ್ನು “ದುರಂತ” ಎಂದು ಕರೆದಿದ್ದರು.

“ನಿರಾಶ್ರಿತರ ಸಂಖ್ಯೆಯನ್ನು ನೋಡಿದರೆ, ನಾವು ಮೂಲತಃ ಮೂರನೇ ಮಹಾಯುದ್ಧದಲ್ಲಿದ್ದೇವೆ. ಇದು ಸ್ಥಳೀಯವಾದ ಸಂಘರ್ಷವಲ್ಲ” ಎಂದಿದ್ದರು. “ಪ್ರಮಾದವಾಗಿದೆ. ನಾವು ಅದನ್ನು ಕೊನೆಗೊಳಿಸಬೇಕಾಗಿದೆ” ಎಂದಿದ್ದರು.

ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1993 ರಲ್ಲಿ ಸ್ಥಾಪಿತವಾದ ನೊವಾಯಾ ಗೆಜೆಟಾ, ರಷ್ಯಾದ ಒಳಗೆ ಮತ್ತು ಹೊರಗೆ ಭ್ರಷ್ಟಾಚಾರವನ್ನು ಹೊರಗೆಳೆಯಿತು. ಚೆಚೆನ್ಯಾದಲ್ಲಿ ಸುದೀರ್ಘ ಯುದ್ಧಗಳ ಕುರಿತು ತನಿಖಾ ವರದಿ ಮಾಡಿತು. ಮುರಾಟೋವ್ ಅವರು ನೊಬೆಲ್‌ ಪ್ರಶಸ್ತಿಯನ್ನು ತಮ್ಮ ಕೆಲಸದ ಕೆಲಸದ ಕಾರಣಕ್ಕೆ ಹತ್ಯೆಯಾದ ಪತ್ರಿಕೆಯ ಆರು ಪತ್ರಕರ್ತರಿಗೆ ಅರ್ಪಿಸಿದರು.

“ನಾನು ಉಕ್ರೇನ್‌ನಿಂದ ಬರೆಯುತ್ತಿದ್ದೇನೆ. ನಾನು ಕಳೆದ ಆರು ತಿಂಗಳಿಂದ ಅಲ್ಲಿದ್ದೇನೆ. ಸಂಘರ್ಷದ ನಿರ್ಮಾಣ ಮತ್ತು ಯುದ್ಧದ ಕಠೋರ ವಾಸ್ತವತೆಯ ಬಗ್ಗೆ ವರದಿ ಮಾಡಿದ್ದೇನೆ. ಇದು ನನ್ನ 30 ವರ್ಷಗಳ ವೃತ್ತಿಜೀವನದ ಅತ್ಯಂತ ತೀವ್ರವಾದ ಸಮಯ. ಡಿಸೆಂಬರ್‌ನಲ್ಲಿ ನಾನು ಉಕ್ರೇನಿಯನ್ ಸೈನ್ಯದೊಂದಿಗೆ ಡೊನೆಟ್ಸ್‌ಕ್ನ ಪ್ರದೇಶಗಳಿವೆ ಭೇಟಿ ಮಾಡಿದ್ದೇನೆ. ಜನವರಿಯಲ್ಲಿ ನಾನು ಮರಿಯುಪೋಲ್ಗೆ ಹೋದೆ. ನಂತರ ಕ್ರೈಮಿಯಾಗೆ ಬಂದೆ. ಫೆಬ್ರವರಿ 24 ರಂದು ರಷ್ಯಾದ ಬಾಂಬ್‌ಗಳು ಬಿದ್ದಾಗ ನಾನು ಉಕ್ರೇನಿಯನ್ ರಾಜಧಾನಿಯಲ್ಲಿ ಇತರ ಸಹೋದ್ಯೋಗಿಗಳೊಂದಿಗೆ ಇದ್ದೆ” ಎಂದಿದ್ದರು.

“1945ರ ನಂತರದಲ್ಲಿ ಯುರೋಪಿನಲ್ಲಿ ನಡೆದ ಅತಿ ದೊಡ್ಡ ಯುದ್ಧವಾಗಿದೆ. ಇದು ಉಕ್ರೇನಿಯನ್ನರಿಗೆ ಅಸ್ತಿತ್ವದ ಹೋರಾಟವಾಗಿದೆ. ಈ ಯುದ್ಧವು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಅದನ್ನು ಕವರ್ ಮಾಡಲು ನಮ್ಮ ವರದಿಗಾರರು ಮತ್ತು ಸಂಪಾದಕೀಯ ತಂಡವು ಉದ್ದೇಶಿಸಿದೆ. ಯುದ್ಧದಲ್ಲಿ ಸಿಕ್ಕಿಬಿದ್ದವರ ಕಥೆಗಳನ್ನು, ಅಂತಾರಾಷ್ಟ್ರೀಯ ಆಯಾಮವನ್ನು ಹೇಳಲು ನಾವು ಬದ್ಧರಾಗಿದ್ದೇವೆ” ಎಂದಿದ್ದರು ಮುರಾಟೋವ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...