Homeಮುಖಪುಟಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

ಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

- Advertisement -
- Advertisement -

ಮೇಘಾಲಯದಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗುರುವಾರ ಮತ್ತೊಮ್ಮೆ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ. ”ರಾಜ್ಯದಲ್ಲಿ ಗೋಮಾಂಸ ತಿನ್ನಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ” ಎಂದು ಪುನರುಚ್ಚರಿಸಿದ್ದಾರೆ. ಗೋಮಾಂಸ ತಿನ್ನುವುದನ್ನು ಇಲ್ಲಿಯ ಜನರ ಜೀವನಶೈಲಿಯಾಗಿದೆ ಅದನ್ನು “ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಮಾವ್ರಿಯವರು ಹೇಳಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗೋಮಾಂಸ ತಿನ್ನುವುದರ ಬಗ್ಗೆ ಮಾತನಾಡಿದ್ದರು. ಇದೀಗ ಮತ್ತೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಈ ಬಗ್ಗೆ ಮಾತನಾಡಿದ್ದು, ”ಬೇರೆ ರಾಜ್ಯಗಳು  ಗೋಮಾಂಸ ನಿಷೇಧ ಕಾಯ್ದೆಯನ್ನು ಅಂಗೀಕರಿಸಿದ ನಿರ್ಣಯದ ಬಗ್ಗೆ ನಾನು ಹೇಳಿಕೆ ನೀಡಲು ಸಾಧ್ಯವಿಲ್ಲ. ನಾವು ಮೇಘಾಲಯದಲ್ಲಿ ಇದ್ದೇವೆ, ಎಲ್ಲರೂ ಗೋಮಾಂಸ ತಿನ್ನುತ್ತಾರೆ ಮತ್ತು ಯಾವುದೇ ನಿರ್ಬಂಧವಿಲ್ಲ. ನಾನು ಕೂಡ ಗೋಮಾಂಸ ತಿನ್ನುತ್ತೇನೆ. ಮೇಘಾಲಯದಲ್ಲಿ ಯಾವುದೇ ನಿಷೇಧವಿಲ್ಲ. ಇದು ಜನರ ಜೀವನಶೈಲಿಯಾಗಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತದಲ್ಲಿಯೂ ಅಂತಹ ನಿಯಮವಿಲ್ಲ. ಕೆಲವು ರಾಜ್ಯಗಳು ಕೆಲವು ಕಾಯಿದೆಗಳನ್ನು ಜಾರಿಗೆ ತಂದಿವೆ. ಮೇಘಾಲಯದಲ್ಲಿ ನಮ್ಮಲ್ಲಿ ಕಸಾಯಿಖಾನೆ ಇದೆ, ಅಲ್ಲಿ ಎಲ್ಲರೂ ಹಸು ಅಥವಾ ಹಂದಿಯನ್ನು ಮಾರುಕಟ್ಟೆಗೆ ತರುತ್ತಾರೆ” ಎಂದು ಮಾವ್ರಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ಈ ಬಾರಿ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದ ಮಾವ್ರಿ, ಕೇಸರಿ ಪಕ್ಷ ಕ್ರಿಶ್ಚಿಯನ್ ವಿರೋಧಿ ಎಂಬ ಆರೋಪವನ್ನು ತಳ್ಳಿಹಾಕಿದರು. ರಾಜಕೀಯ ಪ್ರಚಾರಕ್ಕಾಗಿ ಇಂತಹ ಆರೋಪಗಳನ್ನೆಲ್ಲಾ ಮಾಡುತ್ತಾರೆ ಎಂದರು.

ದೇಶದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಎನ್‌ಡಿಎ ಸರ್ಕಾರ ಇದ್ದು, ಯಾವುದೇ ಚರ್ಚ್‌ಗಳ ಮೇಲೆ ದಾಳಿಗಳಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಗೋವಾ, ನಾಗಾಲ್ಯಾಂಡ್‌ನಂತಹ ರಾಜ್ಯಗಳು ನಿಮಗೆ ಸಾಕ್ಷಿಯಾಗಿವೆ, ಅಲ್ಲಿ ಬಿಜೆಪಿ ಕ್ರಿಶ್ಚಿಯನ್‌ರ ವಿರೋಧಿಯಾಗಿಲ್ಲ ಎಂದು ಅವರು ಹೇಳಿದರು. ”ನಾನು ಸಹ ಕ್ರಿಶ್ಚಿಯನ್  ಆದರೆ, ಬಿಜೆಪಿ ನಾಯಕರು ಯಾರೂ ನನಗೆ ಎಂದಿಗೂ ಚರ್ಚ್‌ಗೆ ಹೋಗಬೇಡಿ ಎಂದು ಹೇಳುವುದಿಲ್ಲ..” ಎಂದರು.

”2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಮೇಘಾಲಯದ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಸಮೀಕ್ಷೆಯ ಪ್ರಕಾರ, ನಾವು ಸ್ಪಷ್ಟಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ ಎಂದು ಅವರು ಹೇಳಿದರು.

ಮೇಘಾಲಯ ವಿಧಾನಸಭಾ ಚುನಾವಣೆ ಸೋಮವಾರ ನಡೆಯಲಿದೆ. ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರದ ಸಂದರ್ಭದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ, ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...