Homeಮುಖಪುಟಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

ಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

- Advertisement -
- Advertisement -

ಮೇಘಾಲಯದಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗುರುವಾರ ಮತ್ತೊಮ್ಮೆ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ. ”ರಾಜ್ಯದಲ್ಲಿ ಗೋಮಾಂಸ ತಿನ್ನಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ” ಎಂದು ಪುನರುಚ್ಚರಿಸಿದ್ದಾರೆ. ಗೋಮಾಂಸ ತಿನ್ನುವುದನ್ನು ಇಲ್ಲಿಯ ಜನರ ಜೀವನಶೈಲಿಯಾಗಿದೆ ಅದನ್ನು “ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಮಾವ್ರಿಯವರು ಹೇಳಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗೋಮಾಂಸ ತಿನ್ನುವುದರ ಬಗ್ಗೆ ಮಾತನಾಡಿದ್ದರು. ಇದೀಗ ಮತ್ತೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಈ ಬಗ್ಗೆ ಮಾತನಾಡಿದ್ದು, ”ಬೇರೆ ರಾಜ್ಯಗಳು  ಗೋಮಾಂಸ ನಿಷೇಧ ಕಾಯ್ದೆಯನ್ನು ಅಂಗೀಕರಿಸಿದ ನಿರ್ಣಯದ ಬಗ್ಗೆ ನಾನು ಹೇಳಿಕೆ ನೀಡಲು ಸಾಧ್ಯವಿಲ್ಲ. ನಾವು ಮೇಘಾಲಯದಲ್ಲಿ ಇದ್ದೇವೆ, ಎಲ್ಲರೂ ಗೋಮಾಂಸ ತಿನ್ನುತ್ತಾರೆ ಮತ್ತು ಯಾವುದೇ ನಿರ್ಬಂಧವಿಲ್ಲ. ನಾನು ಕೂಡ ಗೋಮಾಂಸ ತಿನ್ನುತ್ತೇನೆ. ಮೇಘಾಲಯದಲ್ಲಿ ಯಾವುದೇ ನಿಷೇಧವಿಲ್ಲ. ಇದು ಜನರ ಜೀವನಶೈಲಿಯಾಗಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತದಲ್ಲಿಯೂ ಅಂತಹ ನಿಯಮವಿಲ್ಲ. ಕೆಲವು ರಾಜ್ಯಗಳು ಕೆಲವು ಕಾಯಿದೆಗಳನ್ನು ಜಾರಿಗೆ ತಂದಿವೆ. ಮೇಘಾಲಯದಲ್ಲಿ ನಮ್ಮಲ್ಲಿ ಕಸಾಯಿಖಾನೆ ಇದೆ, ಅಲ್ಲಿ ಎಲ್ಲರೂ ಹಸು ಅಥವಾ ಹಂದಿಯನ್ನು ಮಾರುಕಟ್ಟೆಗೆ ತರುತ್ತಾರೆ” ಎಂದು ಮಾವ್ರಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ಈ ಬಾರಿ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದ ಮಾವ್ರಿ, ಕೇಸರಿ ಪಕ್ಷ ಕ್ರಿಶ್ಚಿಯನ್ ವಿರೋಧಿ ಎಂಬ ಆರೋಪವನ್ನು ತಳ್ಳಿಹಾಕಿದರು. ರಾಜಕೀಯ ಪ್ರಚಾರಕ್ಕಾಗಿ ಇಂತಹ ಆರೋಪಗಳನ್ನೆಲ್ಲಾ ಮಾಡುತ್ತಾರೆ ಎಂದರು.

ದೇಶದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಎನ್‌ಡಿಎ ಸರ್ಕಾರ ಇದ್ದು, ಯಾವುದೇ ಚರ್ಚ್‌ಗಳ ಮೇಲೆ ದಾಳಿಗಳಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಗೋವಾ, ನಾಗಾಲ್ಯಾಂಡ್‌ನಂತಹ ರಾಜ್ಯಗಳು ನಿಮಗೆ ಸಾಕ್ಷಿಯಾಗಿವೆ, ಅಲ್ಲಿ ಬಿಜೆಪಿ ಕ್ರಿಶ್ಚಿಯನ್‌ರ ವಿರೋಧಿಯಾಗಿಲ್ಲ ಎಂದು ಅವರು ಹೇಳಿದರು. ”ನಾನು ಸಹ ಕ್ರಿಶ್ಚಿಯನ್  ಆದರೆ, ಬಿಜೆಪಿ ನಾಯಕರು ಯಾರೂ ನನಗೆ ಎಂದಿಗೂ ಚರ್ಚ್‌ಗೆ ಹೋಗಬೇಡಿ ಎಂದು ಹೇಳುವುದಿಲ್ಲ..” ಎಂದರು.

”2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಮೇಘಾಲಯದ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಸಮೀಕ್ಷೆಯ ಪ್ರಕಾರ, ನಾವು ಸ್ಪಷ್ಟಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ ಎಂದು ಅವರು ಹೇಳಿದರು.

ಮೇಘಾಲಯ ವಿಧಾನಸಭಾ ಚುನಾವಣೆ ಸೋಮವಾರ ನಡೆಯಲಿದೆ. ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರದ ಸಂದರ್ಭದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ, ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...