Homeಮುಖಪುಟಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

ಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

- Advertisement -
- Advertisement -

ಮೇಘಾಲಯದಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗುರುವಾರ ಮತ್ತೊಮ್ಮೆ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ. ”ರಾಜ್ಯದಲ್ಲಿ ಗೋಮಾಂಸ ತಿನ್ನಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ” ಎಂದು ಪುನರುಚ್ಚರಿಸಿದ್ದಾರೆ. ಗೋಮಾಂಸ ತಿನ್ನುವುದನ್ನು ಇಲ್ಲಿಯ ಜನರ ಜೀವನಶೈಲಿಯಾಗಿದೆ ಅದನ್ನು “ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಮಾವ್ರಿಯವರು ಹೇಳಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗೋಮಾಂಸ ತಿನ್ನುವುದರ ಬಗ್ಗೆ ಮಾತನಾಡಿದ್ದರು. ಇದೀಗ ಮತ್ತೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಈ ಬಗ್ಗೆ ಮಾತನಾಡಿದ್ದು, ”ಬೇರೆ ರಾಜ್ಯಗಳು  ಗೋಮಾಂಸ ನಿಷೇಧ ಕಾಯ್ದೆಯನ್ನು ಅಂಗೀಕರಿಸಿದ ನಿರ್ಣಯದ ಬಗ್ಗೆ ನಾನು ಹೇಳಿಕೆ ನೀಡಲು ಸಾಧ್ಯವಿಲ್ಲ. ನಾವು ಮೇಘಾಲಯದಲ್ಲಿ ಇದ್ದೇವೆ, ಎಲ್ಲರೂ ಗೋಮಾಂಸ ತಿನ್ನುತ್ತಾರೆ ಮತ್ತು ಯಾವುದೇ ನಿರ್ಬಂಧವಿಲ್ಲ. ನಾನು ಕೂಡ ಗೋಮಾಂಸ ತಿನ್ನುತ್ತೇನೆ. ಮೇಘಾಲಯದಲ್ಲಿ ಯಾವುದೇ ನಿಷೇಧವಿಲ್ಲ. ಇದು ಜನರ ಜೀವನಶೈಲಿಯಾಗಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತದಲ್ಲಿಯೂ ಅಂತಹ ನಿಯಮವಿಲ್ಲ. ಕೆಲವು ರಾಜ್ಯಗಳು ಕೆಲವು ಕಾಯಿದೆಗಳನ್ನು ಜಾರಿಗೆ ತಂದಿವೆ. ಮೇಘಾಲಯದಲ್ಲಿ ನಮ್ಮಲ್ಲಿ ಕಸಾಯಿಖಾನೆ ಇದೆ, ಅಲ್ಲಿ ಎಲ್ಲರೂ ಹಸು ಅಥವಾ ಹಂದಿಯನ್ನು ಮಾರುಕಟ್ಟೆಗೆ ತರುತ್ತಾರೆ” ಎಂದು ಮಾವ್ರಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ಈ ಬಾರಿ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದ ಮಾವ್ರಿ, ಕೇಸರಿ ಪಕ್ಷ ಕ್ರಿಶ್ಚಿಯನ್ ವಿರೋಧಿ ಎಂಬ ಆರೋಪವನ್ನು ತಳ್ಳಿಹಾಕಿದರು. ರಾಜಕೀಯ ಪ್ರಚಾರಕ್ಕಾಗಿ ಇಂತಹ ಆರೋಪಗಳನ್ನೆಲ್ಲಾ ಮಾಡುತ್ತಾರೆ ಎಂದರು.

ದೇಶದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಎನ್‌ಡಿಎ ಸರ್ಕಾರ ಇದ್ದು, ಯಾವುದೇ ಚರ್ಚ್‌ಗಳ ಮೇಲೆ ದಾಳಿಗಳಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಗೋವಾ, ನಾಗಾಲ್ಯಾಂಡ್‌ನಂತಹ ರಾಜ್ಯಗಳು ನಿಮಗೆ ಸಾಕ್ಷಿಯಾಗಿವೆ, ಅಲ್ಲಿ ಬಿಜೆಪಿ ಕ್ರಿಶ್ಚಿಯನ್‌ರ ವಿರೋಧಿಯಾಗಿಲ್ಲ ಎಂದು ಅವರು ಹೇಳಿದರು. ”ನಾನು ಸಹ ಕ್ರಿಶ್ಚಿಯನ್  ಆದರೆ, ಬಿಜೆಪಿ ನಾಯಕರು ಯಾರೂ ನನಗೆ ಎಂದಿಗೂ ಚರ್ಚ್‌ಗೆ ಹೋಗಬೇಡಿ ಎಂದು ಹೇಳುವುದಿಲ್ಲ..” ಎಂದರು.

”2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಮೇಘಾಲಯದ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಸಮೀಕ್ಷೆಯ ಪ್ರಕಾರ, ನಾವು ಸ್ಪಷ್ಟಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ ಎಂದು ಅವರು ಹೇಳಿದರು.

ಮೇಘಾಲಯ ವಿಧಾನಸಭಾ ಚುನಾವಣೆ ಸೋಮವಾರ ನಡೆಯಲಿದೆ. ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರದ ಸಂದರ್ಭದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ, ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...