Homeಮುಖಪುಟ'ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..'; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

- Advertisement -
- Advertisement -

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ‘ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು’. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.

ಮುಟ್ಟಿನ ರಜೆ ನಿಯಮಗಳನ್ನು ರಾಜ್ಯ ಸರ್ಕಾರಗಳು ರೂಪಿಸಲು ನಿರ್ದೇಶನ ಕೋರಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು, “ಇಂತಹ ಕಾನೂನು ‘ದುಡಿಯುವ ಮಹಿಳೆಯರಲ್ಲಿ ಮಾನಸಿಕ ಭಯ ಅಥವಾ ಕೀಳರಿಮೆ ಉಂಟುಮಾಡುತ್ತದೆ… ಅವರು ಪುರುಷರಿಗಿಂತ ‘ಕಡಿಮೆ’ ಎಂಬ ಭಾವನೆಯನ್ನು ಉಂಟುಮಾಡುತ್ತದೆ” ಎಂದು ಎಂದು ಅಭಿಪ್ರಾಯಪಟ್ಟರು.

“ಈ ಬಗ್ಗೆ ಜಾಗೃತಿ ಮತ್ತು ಸಂವೇದನೆ ಮೂಡಿಸುವುದು ಬೇರೆ. ಆದರೆ, ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಕಾನೂನನ್ನು ಜಾರಿಗೆ ತಂದ ತಕ್ಷಣ, ಯಾರೂ ಅವರನ್ನು ನೇಮಿಸಿಕೊಳ್ಳುವುದಿಲ್ಲ, ನಿಮಗೆ ಉದ್ಯೋಗದಾತರ ಮನಸ್ಥಿತಿ ತಿಳಿದಿಲ್ಲ. ನಾವು ಅಂತಹ ಕಾನೂನನ್ನು ಜಾರಿಗೊಳಿಸಿದರೆ ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ” ಎಂದು ಅವರು ಅರ್ಜಿದಾರರಿಗೆ ಎಚ್ಚರಿಸಿದರು.

ನಿರ್ದಿಷ್ಟವಾಗಿ ಹೇಳುವುದಾದರೆ, ವಿದ್ಯಾರ್ಥಿನಿಯರಾಗಿರಲಿ ಅಥವಾ ಕೆಲಸ ಮಾಡುವ ವೃತ್ತಿಪರರಾಗಿರಲಿ, ಮುಟ್ಟಿನ ಸಮಯದಲ್ಲಿ ರಜೆ ನೀಡುವುದನ್ನು ಖಚಿತಪಡಿಸಬೇಕು ಎಂದು ಅರ್ಜಿದಾರರು ಬಯಸಿದ್ದರು. ಆದರೆ, ಅಂತಹ ಮನವಿಗಳು “ಭಯವನ್ನು ಸೃಷ್ಟಿಸಲು ಮಾಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಘೋಷಿಸಿದರು.

“ಉದ್ಯೋಗದಾತರು ಮಹಿಳೆಯರನ್ನು ಕೀಳಾಗಿ ನೋಡುತ್ತಾರೆ, ಮುಟ್ಟು ಅವರಿಗೆ ‘ಕೆಟ್ಟ’ ಸಂಗತಿಯಾಗಿದೆ” ಎಂದು ಎಂದು ಹೇಳಿದರು. 

ಈ ವೇಳೆ ಕೇರಳ ಸರ್ಕಾರದ ನಿರ್ಧಾರವನ್ನು ನೆನಪಿಸಿದ ಹಿರಿಯ ವಕೀಲ ಎಂ.ಆರ್. ಶಂಶಾದ್, “2013 ರಲ್ಲಿ ಕೇರಳ ಸರ್ಕಾರವು ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಮುಟ್ಟಿನ ರಜೆಯನ್ನು ಮಂಜೂರು ಮಾಡಿತ್ತು” ಎಂಬುದನ್ನು ನೆನಪಿಸಿದರು. ಆಗ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಈ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಬದ್ಧತೆಯ ಭಾಗವಾಗಿದೆ” ಎಂದು ಹೇಳಿದ್ದರು ಎಂದರು.

“ಖಾಸಗಿ ಕಂಪನಿಗಳು ಇದೇ ರೀತಿಯ ಸಡಿಲಿಕೆಗಳನ್ನು ನೀಡಿವೆ” ಎಂದು ಶಂಶಾದ್ ಗಮನಸೆಳೆದರು.

ಆದರೆ, “ಇವು ಸ್ವಯಂಪ್ರೇರಿತ ಕ್ರಮಗಳು” ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು. “ನೀವು ಕಾನೂನಿನಲ್ಲಿ ಕಡ್ಡಾಯ ಎಂದು ಹೇಳಿದ ತಕ್ಷಣ, ಯಾರೂ ಅವರಿಗೆ ಉದ್ಯೋಗ ನೀಡುವುದಿಲ್ಲ, ಯಾರೂ ಅವರನ್ನು ನ್ಯಾಯಾಂಗ ಅಥವಾ ಸರ್ಕಾರಿ ಉದ್ಯೋಗಗಳಲ್ಲಿ ತೆಗೆದುಕೊಳ್ಳುವುದಿಲ್ಲ. ವೃತ್ತಿಜೀವನ ಮುಗಿದಿದೆ, ‘ನೀವು ಮನೆಯಲ್ಲಿಯೇ ಕುಳಿತುಕೊಳ್ಳಿ…’ ಎಂದು ಅವರು ಹೇಳುತ್ತಾರೆ” ಎಂದರು. 

ಜನವರಿಯಲ್ಲಿ ಸುಪ್ರೀಂ ಕೋರ್ಟ್ ಮುಟ್ಟಿನ ನೈರ್ಮಲ್ಯದ ಬಗ್ಗೆ ನಿರ್ಣಾಯಕ ತೀರ್ಪು ನೀಡಿತು. ಅದು ‘ಹೆಣ್ಣು ಮಗುವಿನ ಜೀವನ, ಘನತೆ, ಆರೋಗ್ಯ ಮತ್ತು ಶಿಕ್ಷಣದ ಹಕ್ಕಿನ ಅವಿಭಾಜ್ಯ ಅಂಗ’ ಎಂದು ಹೇಳಿತ್ತು. 

ಸಂವಿಧಾನದ 21ನೇ ವಿಧಿಯಡಿಯಲ್ಲಿ ಹುಡುಗಿಯರು ಮತ್ತು ಮಹಿಳೆಯರ ಆರೋಗ್ಯದ ಹಕ್ಕನ್ನು ರಕ್ಷಿಸಲು ಸರ್ಕಾರಗಳು ಸಕಾರಾತ್ಮಕ ಬಾಧ್ಯತೆಯನ್ನು ಹೊಂದಿವೆ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರ ಪೀಠ ಹೇಳಿದ್ದಲ್ಲದೆ. ಉಚಿತ ಸ್ಯಾನಿಟರಿ ನ್ಯಾಪ್ಕಿನ್‌ಗಳು, ಕ್ರಿಯಾತ್ಮಕ ಲಿಂಗ-ಪ್ರತ್ಯೇಕ ಶೌಚಾಲಯಗಳು ಮತ್ತು ಮುಟ್ಟಿನ ಆರೋಗ್ಯ ಜಾಗೃತಿ ಅಭಿಯಾನಗಳನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಎಲ್ಲಾ ಸರ್ಕಾರಗಳಿಗೆ ಕಡ್ಡಾಯ ನಿರ್ದೇಶನಗಳನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...