Homeಮುಖಪುಟಕೇಜ್ರಿವಾಲರನ್ನು "ಭಯೋತ್ಪಾದಕ" ಎಂದು ಯಾರೂ ಕರೆಯುತ್ತಿಲ್ಲ : ಉಲ್ಟಾ ಹೊಡೆದ ಬಿಜೆಪಿ ನಾಯಕ

ಕೇಜ್ರಿವಾಲರನ್ನು “ಭಯೋತ್ಪಾದಕ” ಎಂದು ಯಾರೂ ಕರೆಯುತ್ತಿಲ್ಲ : ಉಲ್ಟಾ ಹೊಡೆದ ಬಿಜೆಪಿ ನಾಯಕ

- Advertisement -
- Advertisement -

ದೆಹಲಿ ಚುನಾವಣೆ ಕಾವು ಹೆಚ್ಚಾದಂತೆ ಬಿಜೆಪಿ ನಾಯಕರ ಮಾತು ಬದಲಾಗುತ್ತಿದೆ. ಸದ್ಯಕ್ಕೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಮನೋಜ್ ತಿವಾರಿ ”ಮುಖ್ಯಮಂತ್ರಿ ಕೇಜ್ರಿವಾಲನ್ನು ಯಾರೂ ಭಯೋತ್ಪಾದಕ ಎನ್ನುತ್ತಿಲ್ಲ” ಎಂದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರತಿಭಟಿಸುವವರ ವಿರುದ್ಧ ಬಿಜೆಪಿಯ ಕೆಲವರು ಬಳಸುತ್ತಿರುವ “ಗೋಲಿ ಮಾರೊ” ಘೋಷಣೆಗಳನ್ನು ಬಳಸುವುದು ತಪ್ಪು ಎಂದು ಮನೋಜ್ ತಿವಾರಿ ಒಪ್ಪಿಕೊಂಡಿದ್ದಾರೆ. ಆದರೆ ಪೊಲೀಸರು ಹೇಳುವಂತೆ, ಶಾಹೀನ್ ಬಾಗ್ ಮೇಲೆ ಗುಂಡು ಹಾರಿಸಿದವರು ಮುಖ್ಯಮಂತ್ರಿ ಕೇಜ್ರಿವಾಲ್‌ರವರ ಆಮ್ ಆದ್ಮಿ ಪಕ್ಷಕ್ಕೆ ಸೇರಿದವರು.” ಎಂದಿದ್ದಾರೆ.

ಜೊತೆಗೆ ಮುಖ್ಯಮಂತ್ರಿಯನ್ನು ತಮ್ಮ ಪಕ್ಷದವರು “ಭಯೋತ್ಪಾದಕ” ಎಂದು ಕರೆಯುತ್ತಾರೆ ಎಂಬುದನ್ನು ಅವರು ನಿರಾಕರಿಸಿದ್ದಾರೆ.

“ಗೋಲಿ ಮಾರೊ ಘೋಷಣೆಗಳನ್ನು ಕೂಗುವುದು ಸರಿಯಲ್ಲ. ಅಪರಾಧಿಗಳನ್ನು ಮತ್ತು ರಾಷ್ಟ್ರ ವಿರೋಧಿಗಳನ್ನು ಶಿಕ್ಷಿಸಲು ನ್ಯಾಯಾಂಗ ವ್ಯವಸ್ಥೆ ಇದೆ “ಎಂದು ಮನೋಜ್ ತಿವಾರಿ NDTVಯ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ದೆಹಲಿಯ ಚುನಾವಣಾ ಸಂಧರ್ಭದಲ್ಲಿ ಪ್ರಬಲ ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಎಎಪಿ ಶಾಹಿನ್ ಬಾಗ್ ಶೂಟೌಟ್ ಪ್ರಕರಣದಲ್ಲಿ ನಿನ್ನೆಯ ಪೊಲೀಸ್ ಹೇಳಿಕೆಯಿಂದ ಪರಸ್ಪರ ಬೆರಳು ತೋರಿಸುತ್ತಿವೆ.

“ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದ ಗೃಹ ಸಚಿವಾಲಯದ ಆದೇಶಗಳನ್ನು ಪೊಲೀಸರು ನಿರ್ವಹಿಸುತ್ತಿದ್ದಾರೆ” ಎಂದು ಎಎಪಿ ಹೇಳಿದ್ದರೆ, “ಅವರು ಏನು ಮಾಡುತ್ತಿದ್ದಾರೆಂದು ಪೊಲೀಸ್ ತನಿಖೆಯಿಂದ ಸಾಬೀತಾಗಿದೆ” ಎಂದು ಬಿಜೆಪಿ ಹೇಳಿದೆ.

ಸಂಸದ ಪ್ರವೇಶ್‌ ವರ್ಮಾ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಬಿಜೆಪಿ ನಾಯಕರ ಒಂದು ಭಾಗವು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರನ್ನು ಭಯೋತ್ಪಾದಕ ಎಂದು ಹೇಳಿದ್ದನ್ನು ಇಲ್ಲಿ ನಾವು ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...