Homeಮುಖಪುಟಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ಎಲ್ಲೊ ಒಂದು ಸಣ್ಣ ಘಟನೆ ನಡೆದರೆ ಅದಕ್ಕೆ ಇಡೀ ಮುಸ್ಲಿಂ ಸಮುದಾಯವೇ ಜವಾಬ್ದಾರರು ಅಂತ ಮಾತಾಡಿದರೆ ಅಂತವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.

- Advertisement -
- Advertisement -

ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳು, ಎಲ್ಲಾ ಮುಸ್ಲಿಂ ಶಾಸಕರ ಸಭೆಯನ್ನು ಕರೆದಿದ್ದೆ. ಅವರು ಎಲ್ಲಿಯವರೆಗೆ ಅಂದರೆ ನಾವು ಮಸೀದಿಗಳಲ್ಲಿ ನಮಾಜ್‌ ಮಾಡುವುದಿಲ್ಲ, ನಮ್ಮ ಮನೆಯಲ್ಲಿಯೇ ಮಾಡುತ್ತೇವೆ ಎಂದು ಒಪ್ಪಿಕೊಂಡಿದ್ದಾರೆ. ಅವರು ಸಹಕಾರ ಕೊಡುತ್ತಿದ್ದಾರೆ. ಯಾರೊಬ್ಬರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಕನ್ನಡದ ಖಾಸಗಿ ಸುದ್ದಿವಾಹಿನಿ ಟಿವಿ9ಗೆ ನೀಡಿದ ಸಂದರ್ಭದಲ್ಲಿ ಅವರು, ಎಲ್ಲೊ ಒಂದು ಸಣ್ಣ ಘಟನೆ ನಡೆದರೆ ಅದಕ್ಕೆ ಇಡೀ ಮುಸ್ಲಿಂ ಸಮುದಾಯವೇ ಜವಾಬ್ದಾರರು ಅಂತ ಮಾತಾಡಿದರೆ ಅಂತವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ, ಈ ವಿಚಾರದಲ್ಲಿ ಹಿಂದೆ ಮುಂದೆ ನೋಡುವುದಿಲ್ಲ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ.

ಸಂದರ್ಶನದಲ್ಲಿ ನಿರೂಪಕರು “ಕೊರೊನಾ ವಿರುದ್ಧ ವೈದ್ಯರು, ದಾದಿಯರು ಹೋರಾಟ ಮಾಡುತ್ತಿರುವುದರ ಬಗ್ಗೆ ನೀವು ಹೇಳಿದಿರಿ. ಇನ್ನೊಂದು ಕಡೆ ಗಣತಿಗೆ ಹೋಗುವವರ ಮೇಲೆ ಹಲ್ಲೆಗಳಾಗುತ್ತಿವೆ. ವೈದ್ಯರ ಮೇಲೆ ಹಲ್ಲೆ ಮಾಡುತ್ತಾರೆ. ಓಡಿಸಿಕೊಂಡು ಹೋಗುತ್ತಾರೆ. ಹೆಣ್ಣು ಮಕ್ಕಳು ಡೇಟಾ ಸಂಗ್ರಹಿಸಲು ಹೋದಲ್ಲಿ ಅವರ ಮೇಲೆ ಹಲ್ಲೆ ಪ್ರಯತ್ನ ನಡಯುತ್ತಿದೆ ಯಡಿಯೂರಪ್ಪನವರೆ ಎಂದು ಜೋರು ದನಿಯಲ್ಲಿ ಪ್ರಶ್ನೆ ಕೇಳುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿಗಳು ನಿರೂಪಕರಿಗೂ ಸಹ ಸೂಚ್ಯವಾಗಿ ಎಚ್ಚರಿಕೆ ನೀಡಿದ್ದಾರೆ.

ಆ ಥರ ಒಂದೆರೆಡು ಘಟನೆ ನಡೆದಿದೆ. ಅವರ ಮೇಲೆ ನಾವು ಕ್ರಮವನ್ನು ತೆಗೆದುಕೊಂಡಿದ್ದೇವೆ. ನಾನು ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮೇಲೆ ದೂರಬೇಡಿ ಎಂದು ಮನವಿ ಮಾಡುತ್ತೇನೆ. ಆದರೆ ಇಡೀ ಮುಸ್ಲಿಂ ಸಮುದಾಯದ ವಿರುದ್ಧವೇ ಜವಾಬ್ದಾರರು ಎಂದು ನೀವು ಮಾತನಾಡಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟವಾಗಿ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪನವರ ಈ ಸ್ಪಷ್ಟ ನಿಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಬೇಧ ಮರೆತು ಪ್ರಶಂಸೆ ವ್ಯಕ್ತವಾಗಿದೆ.


ಇದನ್ನೂ ಓದಿ: ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂದು ಯಡಿಯೂರಪ್ಪ ಅವರು ಹೇಳಿಕೆಯನ್ನು ನೀಡಿದರು ಮುಸ್ಲಿಂ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡಬಾರದು ಅಂತ. ಆದರೆ ಟಿವಿಯಲ್ಲಿ ಮಾತ್ರ ಅದನ್ನು ಒತ್ತಿ ಒತ್ತಿ ಹೇಳಿ ಜಾಸ್ತಿ ಪ್ರಸಾರ ಮಾಡತ್ತಿದ್ದಾರೆ ಮೊದಲು ಅವರನ್ನು ಹದ್ದುಬಸ್ತಿನಲ್ಲಿ ಇಡೋ ಆದೇಶ ಮಾಡಬೇಕು. ಸತ್ಯ ವಿಷಯದಲ್ಲಿ ಯಾವ ಕಾರ್ಯಕ್ರಮ ಇರೊದಿಲ್ಲ. ಆದರೆ ಸುಳ್ಳು ಸುದ್ದಿ ಇದ್ದರೆ ಅದನ್ನು ಬೇರೆ ಬೇರೆ ರೂಪದಲ್ಲಿ ದಿನಾ ಇಡೀ ಚರ್ಚೆ ಮಾಡೊದು ನಿಲ್ಲಿಸಲು ಆದೇಶ ಕೊಡಬೇಕು.

  2. Shrikant Achar ji you have suggested good but media wants it instead of 24×7 Gov’t should issue time table to media to air only good things 50% of mind poisoning will be stopped

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....