Homeಮುಖಪುಟಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ಎಲ್ಲೊ ಒಂದು ಸಣ್ಣ ಘಟನೆ ನಡೆದರೆ ಅದಕ್ಕೆ ಇಡೀ ಮುಸ್ಲಿಂ ಸಮುದಾಯವೇ ಜವಾಬ್ದಾರರು ಅಂತ ಮಾತಾಡಿದರೆ ಅಂತವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.

- Advertisement -
- Advertisement -

ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳು, ಎಲ್ಲಾ ಮುಸ್ಲಿಂ ಶಾಸಕರ ಸಭೆಯನ್ನು ಕರೆದಿದ್ದೆ. ಅವರು ಎಲ್ಲಿಯವರೆಗೆ ಅಂದರೆ ನಾವು ಮಸೀದಿಗಳಲ್ಲಿ ನಮಾಜ್‌ ಮಾಡುವುದಿಲ್ಲ, ನಮ್ಮ ಮನೆಯಲ್ಲಿಯೇ ಮಾಡುತ್ತೇವೆ ಎಂದು ಒಪ್ಪಿಕೊಂಡಿದ್ದಾರೆ. ಅವರು ಸಹಕಾರ ಕೊಡುತ್ತಿದ್ದಾರೆ. ಯಾರೊಬ್ಬರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಕನ್ನಡದ ಖಾಸಗಿ ಸುದ್ದಿವಾಹಿನಿ ಟಿವಿ9ಗೆ ನೀಡಿದ ಸಂದರ್ಭದಲ್ಲಿ ಅವರು, ಎಲ್ಲೊ ಒಂದು ಸಣ್ಣ ಘಟನೆ ನಡೆದರೆ ಅದಕ್ಕೆ ಇಡೀ ಮುಸ್ಲಿಂ ಸಮುದಾಯವೇ ಜವಾಬ್ದಾರರು ಅಂತ ಮಾತಾಡಿದರೆ ಅಂತವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ, ಈ ವಿಚಾರದಲ್ಲಿ ಹಿಂದೆ ಮುಂದೆ ನೋಡುವುದಿಲ್ಲ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ.

ಸಂದರ್ಶನದಲ್ಲಿ ನಿರೂಪಕರು “ಕೊರೊನಾ ವಿರುದ್ಧ ವೈದ್ಯರು, ದಾದಿಯರು ಹೋರಾಟ ಮಾಡುತ್ತಿರುವುದರ ಬಗ್ಗೆ ನೀವು ಹೇಳಿದಿರಿ. ಇನ್ನೊಂದು ಕಡೆ ಗಣತಿಗೆ ಹೋಗುವವರ ಮೇಲೆ ಹಲ್ಲೆಗಳಾಗುತ್ತಿವೆ. ವೈದ್ಯರ ಮೇಲೆ ಹಲ್ಲೆ ಮಾಡುತ್ತಾರೆ. ಓಡಿಸಿಕೊಂಡು ಹೋಗುತ್ತಾರೆ. ಹೆಣ್ಣು ಮಕ್ಕಳು ಡೇಟಾ ಸಂಗ್ರಹಿಸಲು ಹೋದಲ್ಲಿ ಅವರ ಮೇಲೆ ಹಲ್ಲೆ ಪ್ರಯತ್ನ ನಡಯುತ್ತಿದೆ ಯಡಿಯೂರಪ್ಪನವರೆ ಎಂದು ಜೋರು ದನಿಯಲ್ಲಿ ಪ್ರಶ್ನೆ ಕೇಳುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿಗಳು ನಿರೂಪಕರಿಗೂ ಸಹ ಸೂಚ್ಯವಾಗಿ ಎಚ್ಚರಿಕೆ ನೀಡಿದ್ದಾರೆ.

ಆ ಥರ ಒಂದೆರೆಡು ಘಟನೆ ನಡೆದಿದೆ. ಅವರ ಮೇಲೆ ನಾವು ಕ್ರಮವನ್ನು ತೆಗೆದುಕೊಂಡಿದ್ದೇವೆ. ನಾನು ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮೇಲೆ ದೂರಬೇಡಿ ಎಂದು ಮನವಿ ಮಾಡುತ್ತೇನೆ. ಆದರೆ ಇಡೀ ಮುಸ್ಲಿಂ ಸಮುದಾಯದ ವಿರುದ್ಧವೇ ಜವಾಬ್ದಾರರು ಎಂದು ನೀವು ಮಾತನಾಡಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟವಾಗಿ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪನವರ ಈ ಸ್ಪಷ್ಟ ನಿಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಬೇಧ ಮರೆತು ಪ್ರಶಂಸೆ ವ್ಯಕ್ತವಾಗಿದೆ.


ಇದನ್ನೂ ಓದಿ: ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂದು ಯಡಿಯೂರಪ್ಪ ಅವರು ಹೇಳಿಕೆಯನ್ನು ನೀಡಿದರು ಮುಸ್ಲಿಂ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡಬಾರದು ಅಂತ. ಆದರೆ ಟಿವಿಯಲ್ಲಿ ಮಾತ್ರ ಅದನ್ನು ಒತ್ತಿ ಒತ್ತಿ ಹೇಳಿ ಜಾಸ್ತಿ ಪ್ರಸಾರ ಮಾಡತ್ತಿದ್ದಾರೆ ಮೊದಲು ಅವರನ್ನು ಹದ್ದುಬಸ್ತಿನಲ್ಲಿ ಇಡೋ ಆದೇಶ ಮಾಡಬೇಕು. ಸತ್ಯ ವಿಷಯದಲ್ಲಿ ಯಾವ ಕಾರ್ಯಕ್ರಮ ಇರೊದಿಲ್ಲ. ಆದರೆ ಸುಳ್ಳು ಸುದ್ದಿ ಇದ್ದರೆ ಅದನ್ನು ಬೇರೆ ಬೇರೆ ರೂಪದಲ್ಲಿ ದಿನಾ ಇಡೀ ಚರ್ಚೆ ಮಾಡೊದು ನಿಲ್ಲಿಸಲು ಆದೇಶ ಕೊಡಬೇಕು.

  2. Shrikant Achar ji you have suggested good but media wants it instead of 24×7 Gov’t should issue time table to media to air only good things 50% of mind poisoning will be stopped

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...