Homeಅಂಕಣಗಳುಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

- Advertisement -
- Advertisement -

[ದೇಶದ ಜೈಲುಗಳಲ್ಲಿ ಕೊಳೆಯುತ್ತಿರುವ ದಲಿತರು ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಪ್ರಮಾಣ ಶೇ.51]

ಭರತ ಭೂಮಿಯಲ್ಲಿ ಬಡವರಾಗಿ ಹುಟ್ಟುವುದು ಅಪರಾಧ. ದಲಿತರು ಮತ್ತು ಆದಿವಾಸಿಗಳಾಗಿ ಜನಿಸುವುದು ನೂರುಪಟ್ಟು ಅಪರಾಧ. ದಲಿತರಾಗಿ ರೈತ-ಕಾರ್ಮಿಕರ ಹಕ್ಕುಗಳ ಪರವಾಗಿ ದನಿಯೆತ್ತುವುದೆಂದರೆ ಅವಹೇಳನ, ಬಂಧನ, ಅಪನಿಂದೆ, ಚಿತ್ರಹಿಂಸೆಗಳಿಗೆ ಆಹ್ವಾನ ನೀಡಿದಂತೆಯೇ. ಪಂಜಾಬ್-ಹರಿಯಾಣ ಹೈಕೋರ್ಟಿನಿಂದ ಮೊನ್ನೆ ಜಾಮೀನು ಪಡೆದು 44 ದಿನಗಳ ಬಂಧನದಿಂದ ಹೊರಬಿದ್ದ ನೌದೀಪ್ ಕೌರ್ ಬಡವರಷ್ಟೇ ಅಲ್ಲ ದಲಿತರು. ಮೇಲಾಗಿ ರೈತ ಕಾರ್ಮಿಕರ ಹಕ್ಕುಗಳಿಗೆ ಹೋರಾಡುವ ದಿಟ್ಟ ಹೆಣ್ಣುಮಗಳು.

ಈಕೆಯ ತಾಯಿ ಅಕ್ಕ ತಂಗಿ ಎಲ್ಲ ಹೋರಾಟಗಾರರೇ. ಹುಟ್ಟು ಮತ್ತು ಬಡತನದ ಕಾರಣ ಎದುರಿಸಿದ ದಬ್ಬಾಳಿಕೆಯೇ ಹೋರಾಟವನ್ನು ಕಲಿಸಿಕೊಟ್ಟಿದೆ. ನೌದೀಪ್ ಅಕ್ಕ ರಾಜವೀರ್ ಕೌರ್ ಕೂಡ ಆಂದೋಲನಗಳಲ್ಲಿ ಸಕ್ರಿಯವಾಗಿರುವ ಹೆಣ್ಣುಮಗಳು. ದೆಹಲಿ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ.

ಅನ್ಯಾಯದ ವಿರುದ್ಧ ಸಿಡಿದೇಳುವ ದಿಟ್ಟತನ ನೌದೀಪ್‌ಗೆ ರಕ್ತಗತ. ತಾಯಿ ಪಂಜಾಬಿನ ಮುಖ್ತಸರ್ ಸಾಹೀಬ್‌ನ ಖೇತ್ ಯೂನಿಯನ್ ಸದಸ್ಯೆ. ಹೋರಾಟಗಳಿಂದಾಗಿ ಜೈಲು ಪಾಲಾಗಿದ್ದಾಕೆ. ತಮ್ಮ ಹಳ್ಳಿಯಲ್ಲಿ ಭೂಹೀನ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿದ ಮೇಲ್ಜಾತಿಯ ಜಮೀನುದಾರನ ವಿರುದ್ಧ ಪ್ರತಿಭಟಿಸಿದಾಕೆ. ಪರಿಣಾಮವಾಗಿ ಈ ಕುಟುಂಬ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಿ ತೆಲಂಗಾಣಕ್ಕೆ ವಲಸೆ ಹೋಗಬೇಕಾಯಿತು. ತಂದೆ ಹೈದರಾಬಾದಿನಲ್ಲಿ ವಾಹನ ಚಾಲಕ. ನೌದೀಪ್ ಓದುಬರೆಹಕ್ಕೆ ಅಡಚಣೆಯಾಯಿತು. 12ನೆಯ ತರಗತಿಯನ್ನು ಮುಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ಪೂರೈಸಬೇಕಾಯಿತು. 2019ರಲ್ಲಿ ದೆಹಲಿಗೆ ಬಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ಓದಬಯಸಿದರು.

ಅಕ್ಕ ರಾಜವೀರ್ ಜೊತೆ ವಿಶ್ವವಿದ್ಯಾಲಯದ ಭಗತ್ ಸಿಂಗ್ ವಿದ್ಯಾರ್ಥಿ ಐಕ್ಯವೇದಿಕೆಯ ಸದಸ್ಯೆಯಾಗಿ ಪೌರತ್ವ ಕಾಯಿದೆ ತಿದ್ದುಪಡಿಯ ವಿರುದ್ಧದ ಹೋರಾಟ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು. ದೇಶದ್ರೋಹದ ಆರೋಪ ಹೊತ್ತು ಜೈಲು ಪಾಲಾಗಿರುವ ವಿದ್ಯಾರ್ಥಿ ನಾಯಕಿಯರಾದ ದೇವಾಂಗನಾ ಕಾಲಿತಾ ಮತ್ತು ನತಾಶಾ ನರ್ವಾಲ್ ಸಂಗದಲ್ಲಿ ಹೋರಾಡಿದವರು. ಹಣಕಾಸಿನ ಬಿಕ್ಕಟ್ಟಿನ ಕಾರಣ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ ಕೈಗಾರಿಕೆ ಪ್ರದೇಶದ ಕಂಪನಿಯೊಂದನ್ನು ಸೇರಿದರು. ಅಲ್ಲಿ ಕಾರ್ಮಿಕರ ಶೋಷಣೆ ಮತ್ತು ಅವಮಾನ ಕಂಡು ಆಕೆಯ ಮನಸು ಕುದಿಯಿತು. ಕನಿಷ್ಠ ಕೂಲಿ ಕಾಯಿದೆಯ ಪ್ರಕಾರ ಕೂಲಿದರಗಳನ್ನು ನೀಡುವಂತೆ ಆಗ್ರಹಿಸಿದರು. ಮತ್ತು ಮಹಿಳೆಯರು ಪುರುಷರಿಗೆ ಸಮಾನವಾಗಿ ಕೆಲಸ ಮಾಡಿದಲ್ಲಿ ಅವರಿಗೂ ಸಮಾನ ವೇತನ ಸಲ್ಲಬೇಕೆಂಬ ಬೇಡಿಕೆ ಇಟ್ಟರು.

ಓವರ್ ಟೈಮ್‌ಗೆ ಪ್ರತ್ಯೇಕವಾಗಿ ಕೂಲಿ ಪಾವತಿಗಾಗಿ ಒತ್ತಾಯಿಸಿದರು. ಈ ದಿಸೆಯಲ್ಲಿ ಮಜದೂರ್ ಅಧಿಕಾರ್ ಸಂಘಟನೆಯನ್ನು ಸೇರಿದರು. ಸಮೀಪದ ಸಿಂಘು ಗಡಿಯಲ್ಲಿ ಜರುಗಿದ್ದ ರೈತ ಹೋರಾಟವನ್ನು ಬೆಂಬಲಿಸಿ 1,200 ಮಂದಿ ಕಾರ್ಮಿಕರನ್ನು ಸಂಘಟಿಸಿ ಮೆರವಣಿಗೆ ನಡೆಸಿದರು. ನಿತ್ಯ 300 ಮಂದಿ ಕಾರ್ಮಿಕರು ರೈತರ ಪರವಾಗಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿದ್ದರು ನೌದೀಪ್. ಕುಂಡ್ಲಿ ಕೈಗಾರಿಕೆಗಳು ಕಾರ್ಮಿಕರನ್ನು ಮನಬಂದಂತೆ ನಡೆಸಿಕೊಳ್ಳುತ್ತಿದ್ದು, ರೈತ ಆಂದೋಲನವನ್ನು ಬೆಂಬಲಿಸಿದ ಕಾರಣಕ್ಕಾಗಿ ಅನೇಕ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿವೆ. ಹೀಗೆ ಬಂಧನಕ್ಕೆ ಮುನ್ನವೇ ನೌದೀಪ್ ಕೂಡ ಉದ್ಯೋಗ ಕಳೆದುಕೊಳ್ಳಬೇಕಾಗಿತ್ತು.

PC : Sabrang India

ಉತ್ತರಪ್ರದೇಶ, ಬಿಹಾರ, ಪಂಜಾಬಿನಿಂದ ಉದ್ಯೋಗ ಅರಸಿ ವಲಸೆ ಬಂದಿರುವ ಎರಡು ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಕುಂಡ್ಲಿ ಕೈಗಾರಿಕೆ ಪ್ರದೇಶದಲ್ಲಿ ಕೂಲಿಗಾಗಿ ಸೇರಿದ್ದಾರೆ. ಇವರ ಪೈಕಿ ವಿಶೇಷವಾಗಿ ಭೂಹೀನ ರೈತರು, ಬಡರೈತರು, ದಲಿತರು, ಮುಸಲ್ಮಾನರದೇ ದೊಡ್ಡ ಸಂಖ್ಯೆ.

ಪುರುಷ ಪೊಲೀಸರು ರಾತ್ರಿಯ ವೇಳೆ ನೌದೀಪ್ ಅವರನ್ನು ಕುಂಡ್ಲಿ ಕೈಗಾರಿಕೆ ಪ್ರದೇಶದ ನಿರ್ಜನ ಪ್ರದೇಶಕ್ಕೆ ಎಳೆದೊಯ್ಯುತ್ತಾರೆ. ಥಳಿಸಿ ಚಿತ್ರಹಿಂಸೆ ನೀಡುತ್ತಾರೆ. ವ್ಯಾನಿನಲ್ಲಿ, ಪೊಲೀಸ್ ಠಾಣೆಯಲ್ಲಿ ಮತ್ತೆ ಮತ್ತೆ ಥಳಿಸುತ್ತಾರೆ, ಗುಪ್ತಾಂಗಗಳ ಮೇಲೆ ಲಾಠಿ ಬೂಟುಗಳಿಂದ ಬಾರಿಸುತ್ತಾರೆ. ರಕ್ತಸ್ರಾವವಾಗುತ್ತದೆ. ಇಬ್ಬಿಬ್ಬರು ಮೈಮೇಲೆ ಕುಳಿತು ಖಾಲಿ ಕಾಗದದ ಮೇಲೆ ಬಲವಂತವಾಗಿ ರುಜು ಹಾಕಿಸಿಕೊಳ್ಳುತ್ತಾರೆ. ಜಾತಿಯ ಹೆಸರಿಡಿದು ಅಶ್ಲೀಲ ಬೈಗುಳ ಬೈಯ್ಯುತ್ತಾರೆ. ತಲೆಗೂದಲು ಹಿಡಿದು ಎಳೆದಾಡಿದ್ದಾರೆ. ಕಪಾಳಕ್ಕೆ ಬಾರಿಸಿದ್ದಾರೆ. ಕೆಲ ದಿನಗಳ ಕಾಲ ನಡೆದಾಡುವುದೂ ನೌದೀಪ್‌ಗೆ ದುಸ್ತರವಾಗಿದೆ. ಚರಂಡಿ ಗಟಾರ ಸ್ವಚ್ಛ ಮಾಡುವ ಕುಲದಲ್ಲಿ ಹುಟ್ಟಿದ ನೀನು ರೈತ- ಕಾರ್ಮಿಕ ಪ್ರತಿಭಟನೆಗೆ ಯಾಕೆ ಬಂದಿದ್ದೀ ಎಂದು ಅವಹೇಳನ ಮಾಡಿದ್ದಾರೆ. ಮತ್ತು ಥಳಿಸಿದ ಮತ್ತು ನಿಂದಿಸಿದ ಆರೋಪಗಳನ್ನು ಎಂದಿನಂತೆ ತಳ್ಳಿ ಹಾಕಿದ್ದಾರೆ ಕೂಡ.

ಆಕೆಯೊಂದಿಗೆ ದಸ್ತಗಿರಿಯಾದ ಮತ್ತೊಬ್ಬ ಯುವ ಕಾರ್ಮಿಕ ಹೋರಾಟಗಾರ ಶಿವಕುಮಾರ್ ಅವರನ್ನೂ ಚಿತ್ರಹಿಂಸೆಗೆ ಗುರಿಪಡಿಸಲಾಗಿದೆ. ಎಡಗೈ ಮತ್ತು ಬಲಪಾದದಲ್ಲಿ ಮೂಳೆಗಳು ಮುರಿದಿವೆ. ನೌದೀಪ್‌ಗೆ ಎರಡು ಸಲ ಜಾಮೀನು ನಿರಾಕರಿಸಲಾಗುತ್ತದೆ. ಮಂದ ದೃಷ್ಟಿಯ ಆತ ಕನ್ನಡಕವನ್ನು ಧರಿಸಲು ಕೂಡ ಅವಕಾಶ ಕೊಡದೆ ಅಪಹರಿಸಿ ಹಲವು ದಿನಗಳ ಕಾಲ ಅನಧಿಕೃತ ಬಂಧನದಲ್ಲಿ ಇರಿಸಿ ಚಿತ್ರಹಿಂಸೆ ನೀಡಿದ್ದಾರೆ. ಇಲ್ಲಿಯವರೆಗೆ ಆತನ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.

ಕಾರ್ಮಿಕರು ಮತ್ತು ರೈತರು ದೈಹಿಕ ಶ್ರಮವನ್ನೇ ನಂಬಿ ಬದುಕುವ ಶ್ರಮಜೀವಿಗಳು. ಇಬ್ಬರೂ ಉತ್ಪಾದಕರು. ರೈತ ಹೊಲಗದ್ದೆಗಳಲ್ಲಿ ಉತ್ಪಾದಿಸಿದರೆ, ಕಾರ್ಮಿಕರು ಗಿರಣಿಗಳಲ್ಲಿ ಉತ್ಪಾದನೆಯಲ್ಲಿ ತೊಡಗಿಕೊಂಡವರು. ಸರ್ಕಾರಗಳು ಈ ಇಬ್ಬರ ಹಕ್ಕುಗಳನ್ನೂ ಬಿಕರಿಗಿಟ್ಟಿದೆ. ಸರ್ಕಾರಿ ಉದ್ಯಮಗಳು ಕಂಪನಿಗಳನ್ನು ಮಾರಾಟಕ್ಕಿಡಲಾಗಿದೆ. ಹೀಗಾಗಿ ಇಬ್ಬರೂ ಒಟ್ಟಾಗಿ ಹೋರಾಡಬೇಕಿದೆ. ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದಿದ್ದರೆ, ರೈತರ ವಿರೋಧೀ ಕಾನೂನುಗಳನ್ನು ರದ್ದು ಮಾಡದೆ ಹೋದರೆ ನಾವು ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ನಿಲ್ಲಿಸುತ್ತೇವೆ. ಕಂಪನಿಗಳಿಗೆ ಬೀಗ ಹಾಕಿಸುತ್ತೇವೆ ಎಂಬ ನೌದೀಪ್ ಹೇಳಿಕೆ ಕಾರ್ಖಾನೆಗಳ ಮಾಲೀಕರನ್ನು ಕೆರಳಿಸಿತ್ತು.

ದಲಿತ ಜಾತಿ ಮತ್ತು ಬಡವರ್ಗಕ್ಕೆ ಸೇರಿದ ಕಾರಣವೇ ಮುಖ್ಯವಾಹಿನಿ ಮಾಧ್ಯಮಗಳು ನೌದೀಪ್ ಅವರ ಬಂಧನ ಮತ್ತು ಚಿತ್ರಹಿಂಸೆಯನ್ನು ನಿರ್ಲಕ್ಷಿಸಿದವು. ಭಾರತದಲ್ಲಿ ದಲಿತರು ಆದಿವಾಸಿಗಳು ಹಾಗೂ ಮುಸಲ್ಮಾನರ ಪ್ರಮಾಣ ಶೇ.39. ದೇಶದ ಜೈಲು ಪಾಲಾಗಿರುವ ಬಂದಿಗಳು ಮತ್ತು ವಿಚಾರಣಾಧೀನ ಕೈದಿಗಳ ಪೈಕಿ ಈ ಸಮುದಾಯಗಳ ಪ್ರಮಾಣ ಶೇ.51.

ಶೋಷಣೆ, ಬಡತನ, ಪೂರ್ವಗ್ರಹಗಳು, ಅನಕ್ಷರತೆ, ತಾರತಮ್ಯಕ್ಕೆ ಬಲಿಯಾಗುತ್ತಿರುವ, ದನಿ ಸತ್ತ ಜನಸಮುದಾಯಗಳಿವು.

ಇತ್ತೀಚೆಗೆ ಬಿಡುಗಡೆಯಾದ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ ಸರ್ಕಾರಿ ಅಂಕಿಅಂಶ ಕಟುಸತ್ಯದ ಕತೆಯನ್ನು ಕಿರುಚಿ ಹೇಳುತ್ತಿದೆ. ಉಳ್ಳವರ ಕಿವಿಗಳ ಮೇಲೆ ಅದು ಬೀಳುತ್ತಿಲ್ಲ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...