Homeಅಂಕಣಗಳುಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

- Advertisement -
- Advertisement -

[ದೇಶದ ಜೈಲುಗಳಲ್ಲಿ ಕೊಳೆಯುತ್ತಿರುವ ದಲಿತರು ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಪ್ರಮಾಣ ಶೇ.51]

ಭರತ ಭೂಮಿಯಲ್ಲಿ ಬಡವರಾಗಿ ಹುಟ್ಟುವುದು ಅಪರಾಧ. ದಲಿತರು ಮತ್ತು ಆದಿವಾಸಿಗಳಾಗಿ ಜನಿಸುವುದು ನೂರುಪಟ್ಟು ಅಪರಾಧ. ದಲಿತರಾಗಿ ರೈತ-ಕಾರ್ಮಿಕರ ಹಕ್ಕುಗಳ ಪರವಾಗಿ ದನಿಯೆತ್ತುವುದೆಂದರೆ ಅವಹೇಳನ, ಬಂಧನ, ಅಪನಿಂದೆ, ಚಿತ್ರಹಿಂಸೆಗಳಿಗೆ ಆಹ್ವಾನ ನೀಡಿದಂತೆಯೇ. ಪಂಜಾಬ್-ಹರಿಯಾಣ ಹೈಕೋರ್ಟಿನಿಂದ ಮೊನ್ನೆ ಜಾಮೀನು ಪಡೆದು 44 ದಿನಗಳ ಬಂಧನದಿಂದ ಹೊರಬಿದ್ದ ನೌದೀಪ್ ಕೌರ್ ಬಡವರಷ್ಟೇ ಅಲ್ಲ ದಲಿತರು. ಮೇಲಾಗಿ ರೈತ ಕಾರ್ಮಿಕರ ಹಕ್ಕುಗಳಿಗೆ ಹೋರಾಡುವ ದಿಟ್ಟ ಹೆಣ್ಣುಮಗಳು.

ಈಕೆಯ ತಾಯಿ ಅಕ್ಕ ತಂಗಿ ಎಲ್ಲ ಹೋರಾಟಗಾರರೇ. ಹುಟ್ಟು ಮತ್ತು ಬಡತನದ ಕಾರಣ ಎದುರಿಸಿದ ದಬ್ಬಾಳಿಕೆಯೇ ಹೋರಾಟವನ್ನು ಕಲಿಸಿಕೊಟ್ಟಿದೆ. ನೌದೀಪ್ ಅಕ್ಕ ರಾಜವೀರ್ ಕೌರ್ ಕೂಡ ಆಂದೋಲನಗಳಲ್ಲಿ ಸಕ್ರಿಯವಾಗಿರುವ ಹೆಣ್ಣುಮಗಳು. ದೆಹಲಿ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ.

ಅನ್ಯಾಯದ ವಿರುದ್ಧ ಸಿಡಿದೇಳುವ ದಿಟ್ಟತನ ನೌದೀಪ್‌ಗೆ ರಕ್ತಗತ. ತಾಯಿ ಪಂಜಾಬಿನ ಮುಖ್ತಸರ್ ಸಾಹೀಬ್‌ನ ಖೇತ್ ಯೂನಿಯನ್ ಸದಸ್ಯೆ. ಹೋರಾಟಗಳಿಂದಾಗಿ ಜೈಲು ಪಾಲಾಗಿದ್ದಾಕೆ. ತಮ್ಮ ಹಳ್ಳಿಯಲ್ಲಿ ಭೂಹೀನ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿದ ಮೇಲ್ಜಾತಿಯ ಜಮೀನುದಾರನ ವಿರುದ್ಧ ಪ್ರತಿಭಟಿಸಿದಾಕೆ. ಪರಿಣಾಮವಾಗಿ ಈ ಕುಟುಂಬ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಿ ತೆಲಂಗಾಣಕ್ಕೆ ವಲಸೆ ಹೋಗಬೇಕಾಯಿತು. ತಂದೆ ಹೈದರಾಬಾದಿನಲ್ಲಿ ವಾಹನ ಚಾಲಕ. ನೌದೀಪ್ ಓದುಬರೆಹಕ್ಕೆ ಅಡಚಣೆಯಾಯಿತು. 12ನೆಯ ತರಗತಿಯನ್ನು ಮುಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ಪೂರೈಸಬೇಕಾಯಿತು. 2019ರಲ್ಲಿ ದೆಹಲಿಗೆ ಬಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ಓದಬಯಸಿದರು.

ಅಕ್ಕ ರಾಜವೀರ್ ಜೊತೆ ವಿಶ್ವವಿದ್ಯಾಲಯದ ಭಗತ್ ಸಿಂಗ್ ವಿದ್ಯಾರ್ಥಿ ಐಕ್ಯವೇದಿಕೆಯ ಸದಸ್ಯೆಯಾಗಿ ಪೌರತ್ವ ಕಾಯಿದೆ ತಿದ್ದುಪಡಿಯ ವಿರುದ್ಧದ ಹೋರಾಟ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು. ದೇಶದ್ರೋಹದ ಆರೋಪ ಹೊತ್ತು ಜೈಲು ಪಾಲಾಗಿರುವ ವಿದ್ಯಾರ್ಥಿ ನಾಯಕಿಯರಾದ ದೇವಾಂಗನಾ ಕಾಲಿತಾ ಮತ್ತು ನತಾಶಾ ನರ್ವಾಲ್ ಸಂಗದಲ್ಲಿ ಹೋರಾಡಿದವರು. ಹಣಕಾಸಿನ ಬಿಕ್ಕಟ್ಟಿನ ಕಾರಣ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ ಕೈಗಾರಿಕೆ ಪ್ರದೇಶದ ಕಂಪನಿಯೊಂದನ್ನು ಸೇರಿದರು. ಅಲ್ಲಿ ಕಾರ್ಮಿಕರ ಶೋಷಣೆ ಮತ್ತು ಅವಮಾನ ಕಂಡು ಆಕೆಯ ಮನಸು ಕುದಿಯಿತು. ಕನಿಷ್ಠ ಕೂಲಿ ಕಾಯಿದೆಯ ಪ್ರಕಾರ ಕೂಲಿದರಗಳನ್ನು ನೀಡುವಂತೆ ಆಗ್ರಹಿಸಿದರು. ಮತ್ತು ಮಹಿಳೆಯರು ಪುರುಷರಿಗೆ ಸಮಾನವಾಗಿ ಕೆಲಸ ಮಾಡಿದಲ್ಲಿ ಅವರಿಗೂ ಸಮಾನ ವೇತನ ಸಲ್ಲಬೇಕೆಂಬ ಬೇಡಿಕೆ ಇಟ್ಟರು.

ಓವರ್ ಟೈಮ್‌ಗೆ ಪ್ರತ್ಯೇಕವಾಗಿ ಕೂಲಿ ಪಾವತಿಗಾಗಿ ಒತ್ತಾಯಿಸಿದರು. ಈ ದಿಸೆಯಲ್ಲಿ ಮಜದೂರ್ ಅಧಿಕಾರ್ ಸಂಘಟನೆಯನ್ನು ಸೇರಿದರು. ಸಮೀಪದ ಸಿಂಘು ಗಡಿಯಲ್ಲಿ ಜರುಗಿದ್ದ ರೈತ ಹೋರಾಟವನ್ನು ಬೆಂಬಲಿಸಿ 1,200 ಮಂದಿ ಕಾರ್ಮಿಕರನ್ನು ಸಂಘಟಿಸಿ ಮೆರವಣಿಗೆ ನಡೆಸಿದರು. ನಿತ್ಯ 300 ಮಂದಿ ಕಾರ್ಮಿಕರು ರೈತರ ಪರವಾಗಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿದ್ದರು ನೌದೀಪ್. ಕುಂಡ್ಲಿ ಕೈಗಾರಿಕೆಗಳು ಕಾರ್ಮಿಕರನ್ನು ಮನಬಂದಂತೆ ನಡೆಸಿಕೊಳ್ಳುತ್ತಿದ್ದು, ರೈತ ಆಂದೋಲನವನ್ನು ಬೆಂಬಲಿಸಿದ ಕಾರಣಕ್ಕಾಗಿ ಅನೇಕ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿವೆ. ಹೀಗೆ ಬಂಧನಕ್ಕೆ ಮುನ್ನವೇ ನೌದೀಪ್ ಕೂಡ ಉದ್ಯೋಗ ಕಳೆದುಕೊಳ್ಳಬೇಕಾಗಿತ್ತು.

PC : Sabrang India

ಉತ್ತರಪ್ರದೇಶ, ಬಿಹಾರ, ಪಂಜಾಬಿನಿಂದ ಉದ್ಯೋಗ ಅರಸಿ ವಲಸೆ ಬಂದಿರುವ ಎರಡು ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಕುಂಡ್ಲಿ ಕೈಗಾರಿಕೆ ಪ್ರದೇಶದಲ್ಲಿ ಕೂಲಿಗಾಗಿ ಸೇರಿದ್ದಾರೆ. ಇವರ ಪೈಕಿ ವಿಶೇಷವಾಗಿ ಭೂಹೀನ ರೈತರು, ಬಡರೈತರು, ದಲಿತರು, ಮುಸಲ್ಮಾನರದೇ ದೊಡ್ಡ ಸಂಖ್ಯೆ.

ಪುರುಷ ಪೊಲೀಸರು ರಾತ್ರಿಯ ವೇಳೆ ನೌದೀಪ್ ಅವರನ್ನು ಕುಂಡ್ಲಿ ಕೈಗಾರಿಕೆ ಪ್ರದೇಶದ ನಿರ್ಜನ ಪ್ರದೇಶಕ್ಕೆ ಎಳೆದೊಯ್ಯುತ್ತಾರೆ. ಥಳಿಸಿ ಚಿತ್ರಹಿಂಸೆ ನೀಡುತ್ತಾರೆ. ವ್ಯಾನಿನಲ್ಲಿ, ಪೊಲೀಸ್ ಠಾಣೆಯಲ್ಲಿ ಮತ್ತೆ ಮತ್ತೆ ಥಳಿಸುತ್ತಾರೆ, ಗುಪ್ತಾಂಗಗಳ ಮೇಲೆ ಲಾಠಿ ಬೂಟುಗಳಿಂದ ಬಾರಿಸುತ್ತಾರೆ. ರಕ್ತಸ್ರಾವವಾಗುತ್ತದೆ. ಇಬ್ಬಿಬ್ಬರು ಮೈಮೇಲೆ ಕುಳಿತು ಖಾಲಿ ಕಾಗದದ ಮೇಲೆ ಬಲವಂತವಾಗಿ ರುಜು ಹಾಕಿಸಿಕೊಳ್ಳುತ್ತಾರೆ. ಜಾತಿಯ ಹೆಸರಿಡಿದು ಅಶ್ಲೀಲ ಬೈಗುಳ ಬೈಯ್ಯುತ್ತಾರೆ. ತಲೆಗೂದಲು ಹಿಡಿದು ಎಳೆದಾಡಿದ್ದಾರೆ. ಕಪಾಳಕ್ಕೆ ಬಾರಿಸಿದ್ದಾರೆ. ಕೆಲ ದಿನಗಳ ಕಾಲ ನಡೆದಾಡುವುದೂ ನೌದೀಪ್‌ಗೆ ದುಸ್ತರವಾಗಿದೆ. ಚರಂಡಿ ಗಟಾರ ಸ್ವಚ್ಛ ಮಾಡುವ ಕುಲದಲ್ಲಿ ಹುಟ್ಟಿದ ನೀನು ರೈತ- ಕಾರ್ಮಿಕ ಪ್ರತಿಭಟನೆಗೆ ಯಾಕೆ ಬಂದಿದ್ದೀ ಎಂದು ಅವಹೇಳನ ಮಾಡಿದ್ದಾರೆ. ಮತ್ತು ಥಳಿಸಿದ ಮತ್ತು ನಿಂದಿಸಿದ ಆರೋಪಗಳನ್ನು ಎಂದಿನಂತೆ ತಳ್ಳಿ ಹಾಕಿದ್ದಾರೆ ಕೂಡ.

ಆಕೆಯೊಂದಿಗೆ ದಸ್ತಗಿರಿಯಾದ ಮತ್ತೊಬ್ಬ ಯುವ ಕಾರ್ಮಿಕ ಹೋರಾಟಗಾರ ಶಿವಕುಮಾರ್ ಅವರನ್ನೂ ಚಿತ್ರಹಿಂಸೆಗೆ ಗುರಿಪಡಿಸಲಾಗಿದೆ. ಎಡಗೈ ಮತ್ತು ಬಲಪಾದದಲ್ಲಿ ಮೂಳೆಗಳು ಮುರಿದಿವೆ. ನೌದೀಪ್‌ಗೆ ಎರಡು ಸಲ ಜಾಮೀನು ನಿರಾಕರಿಸಲಾಗುತ್ತದೆ. ಮಂದ ದೃಷ್ಟಿಯ ಆತ ಕನ್ನಡಕವನ್ನು ಧರಿಸಲು ಕೂಡ ಅವಕಾಶ ಕೊಡದೆ ಅಪಹರಿಸಿ ಹಲವು ದಿನಗಳ ಕಾಲ ಅನಧಿಕೃತ ಬಂಧನದಲ್ಲಿ ಇರಿಸಿ ಚಿತ್ರಹಿಂಸೆ ನೀಡಿದ್ದಾರೆ. ಇಲ್ಲಿಯವರೆಗೆ ಆತನ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.

ಕಾರ್ಮಿಕರು ಮತ್ತು ರೈತರು ದೈಹಿಕ ಶ್ರಮವನ್ನೇ ನಂಬಿ ಬದುಕುವ ಶ್ರಮಜೀವಿಗಳು. ಇಬ್ಬರೂ ಉತ್ಪಾದಕರು. ರೈತ ಹೊಲಗದ್ದೆಗಳಲ್ಲಿ ಉತ್ಪಾದಿಸಿದರೆ, ಕಾರ್ಮಿಕರು ಗಿರಣಿಗಳಲ್ಲಿ ಉತ್ಪಾದನೆಯಲ್ಲಿ ತೊಡಗಿಕೊಂಡವರು. ಸರ್ಕಾರಗಳು ಈ ಇಬ್ಬರ ಹಕ್ಕುಗಳನ್ನೂ ಬಿಕರಿಗಿಟ್ಟಿದೆ. ಸರ್ಕಾರಿ ಉದ್ಯಮಗಳು ಕಂಪನಿಗಳನ್ನು ಮಾರಾಟಕ್ಕಿಡಲಾಗಿದೆ. ಹೀಗಾಗಿ ಇಬ್ಬರೂ ಒಟ್ಟಾಗಿ ಹೋರಾಡಬೇಕಿದೆ. ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದಿದ್ದರೆ, ರೈತರ ವಿರೋಧೀ ಕಾನೂನುಗಳನ್ನು ರದ್ದು ಮಾಡದೆ ಹೋದರೆ ನಾವು ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ನಿಲ್ಲಿಸುತ್ತೇವೆ. ಕಂಪನಿಗಳಿಗೆ ಬೀಗ ಹಾಕಿಸುತ್ತೇವೆ ಎಂಬ ನೌದೀಪ್ ಹೇಳಿಕೆ ಕಾರ್ಖಾನೆಗಳ ಮಾಲೀಕರನ್ನು ಕೆರಳಿಸಿತ್ತು.

ದಲಿತ ಜಾತಿ ಮತ್ತು ಬಡವರ್ಗಕ್ಕೆ ಸೇರಿದ ಕಾರಣವೇ ಮುಖ್ಯವಾಹಿನಿ ಮಾಧ್ಯಮಗಳು ನೌದೀಪ್ ಅವರ ಬಂಧನ ಮತ್ತು ಚಿತ್ರಹಿಂಸೆಯನ್ನು ನಿರ್ಲಕ್ಷಿಸಿದವು. ಭಾರತದಲ್ಲಿ ದಲಿತರು ಆದಿವಾಸಿಗಳು ಹಾಗೂ ಮುಸಲ್ಮಾನರ ಪ್ರಮಾಣ ಶೇ.39. ದೇಶದ ಜೈಲು ಪಾಲಾಗಿರುವ ಬಂದಿಗಳು ಮತ್ತು ವಿಚಾರಣಾಧೀನ ಕೈದಿಗಳ ಪೈಕಿ ಈ ಸಮುದಾಯಗಳ ಪ್ರಮಾಣ ಶೇ.51.

ಶೋಷಣೆ, ಬಡತನ, ಪೂರ್ವಗ್ರಹಗಳು, ಅನಕ್ಷರತೆ, ತಾರತಮ್ಯಕ್ಕೆ ಬಲಿಯಾಗುತ್ತಿರುವ, ದನಿ ಸತ್ತ ಜನಸಮುದಾಯಗಳಿವು.

ಇತ್ತೀಚೆಗೆ ಬಿಡುಗಡೆಯಾದ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ ಸರ್ಕಾರಿ ಅಂಕಿಅಂಶ ಕಟುಸತ್ಯದ ಕತೆಯನ್ನು ಕಿರುಚಿ ಹೇಳುತ್ತಿದೆ. ಉಳ್ಳವರ ಕಿವಿಗಳ ಮೇಲೆ ಅದು ಬೀಳುತ್ತಿಲ್ಲ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...