Homeಅಂಕಣಗಳುಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

- Advertisement -
- Advertisement -

[ದೇಶದ ಜೈಲುಗಳಲ್ಲಿ ಕೊಳೆಯುತ್ತಿರುವ ದಲಿತರು ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಪ್ರಮಾಣ ಶೇ.51]

ಭರತ ಭೂಮಿಯಲ್ಲಿ ಬಡವರಾಗಿ ಹುಟ್ಟುವುದು ಅಪರಾಧ. ದಲಿತರು ಮತ್ತು ಆದಿವಾಸಿಗಳಾಗಿ ಜನಿಸುವುದು ನೂರುಪಟ್ಟು ಅಪರಾಧ. ದಲಿತರಾಗಿ ರೈತ-ಕಾರ್ಮಿಕರ ಹಕ್ಕುಗಳ ಪರವಾಗಿ ದನಿಯೆತ್ತುವುದೆಂದರೆ ಅವಹೇಳನ, ಬಂಧನ, ಅಪನಿಂದೆ, ಚಿತ್ರಹಿಂಸೆಗಳಿಗೆ ಆಹ್ವಾನ ನೀಡಿದಂತೆಯೇ. ಪಂಜಾಬ್-ಹರಿಯಾಣ ಹೈಕೋರ್ಟಿನಿಂದ ಮೊನ್ನೆ ಜಾಮೀನು ಪಡೆದು 44 ದಿನಗಳ ಬಂಧನದಿಂದ ಹೊರಬಿದ್ದ ನೌದೀಪ್ ಕೌರ್ ಬಡವರಷ್ಟೇ ಅಲ್ಲ ದಲಿತರು. ಮೇಲಾಗಿ ರೈತ ಕಾರ್ಮಿಕರ ಹಕ್ಕುಗಳಿಗೆ ಹೋರಾಡುವ ದಿಟ್ಟ ಹೆಣ್ಣುಮಗಳು.

ಈಕೆಯ ತಾಯಿ ಅಕ್ಕ ತಂಗಿ ಎಲ್ಲ ಹೋರಾಟಗಾರರೇ. ಹುಟ್ಟು ಮತ್ತು ಬಡತನದ ಕಾರಣ ಎದುರಿಸಿದ ದಬ್ಬಾಳಿಕೆಯೇ ಹೋರಾಟವನ್ನು ಕಲಿಸಿಕೊಟ್ಟಿದೆ. ನೌದೀಪ್ ಅಕ್ಕ ರಾಜವೀರ್ ಕೌರ್ ಕೂಡ ಆಂದೋಲನಗಳಲ್ಲಿ ಸಕ್ರಿಯವಾಗಿರುವ ಹೆಣ್ಣುಮಗಳು. ದೆಹಲಿ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ.

ಅನ್ಯಾಯದ ವಿರುದ್ಧ ಸಿಡಿದೇಳುವ ದಿಟ್ಟತನ ನೌದೀಪ್‌ಗೆ ರಕ್ತಗತ. ತಾಯಿ ಪಂಜಾಬಿನ ಮುಖ್ತಸರ್ ಸಾಹೀಬ್‌ನ ಖೇತ್ ಯೂನಿಯನ್ ಸದಸ್ಯೆ. ಹೋರಾಟಗಳಿಂದಾಗಿ ಜೈಲು ಪಾಲಾಗಿದ್ದಾಕೆ. ತಮ್ಮ ಹಳ್ಳಿಯಲ್ಲಿ ಭೂಹೀನ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿದ ಮೇಲ್ಜಾತಿಯ ಜಮೀನುದಾರನ ವಿರುದ್ಧ ಪ್ರತಿಭಟಿಸಿದಾಕೆ. ಪರಿಣಾಮವಾಗಿ ಈ ಕುಟುಂಬ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಿ ತೆಲಂಗಾಣಕ್ಕೆ ವಲಸೆ ಹೋಗಬೇಕಾಯಿತು. ತಂದೆ ಹೈದರಾಬಾದಿನಲ್ಲಿ ವಾಹನ ಚಾಲಕ. ನೌದೀಪ್ ಓದುಬರೆಹಕ್ಕೆ ಅಡಚಣೆಯಾಯಿತು. 12ನೆಯ ತರಗತಿಯನ್ನು ಮುಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ಪೂರೈಸಬೇಕಾಯಿತು. 2019ರಲ್ಲಿ ದೆಹಲಿಗೆ ಬಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ಓದಬಯಸಿದರು.

ಅಕ್ಕ ರಾಜವೀರ್ ಜೊತೆ ವಿಶ್ವವಿದ್ಯಾಲಯದ ಭಗತ್ ಸಿಂಗ್ ವಿದ್ಯಾರ್ಥಿ ಐಕ್ಯವೇದಿಕೆಯ ಸದಸ್ಯೆಯಾಗಿ ಪೌರತ್ವ ಕಾಯಿದೆ ತಿದ್ದುಪಡಿಯ ವಿರುದ್ಧದ ಹೋರಾಟ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು. ದೇಶದ್ರೋಹದ ಆರೋಪ ಹೊತ್ತು ಜೈಲು ಪಾಲಾಗಿರುವ ವಿದ್ಯಾರ್ಥಿ ನಾಯಕಿಯರಾದ ದೇವಾಂಗನಾ ಕಾಲಿತಾ ಮತ್ತು ನತಾಶಾ ನರ್ವಾಲ್ ಸಂಗದಲ್ಲಿ ಹೋರಾಡಿದವರು. ಹಣಕಾಸಿನ ಬಿಕ್ಕಟ್ಟಿನ ಕಾರಣ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ ಕೈಗಾರಿಕೆ ಪ್ರದೇಶದ ಕಂಪನಿಯೊಂದನ್ನು ಸೇರಿದರು. ಅಲ್ಲಿ ಕಾರ್ಮಿಕರ ಶೋಷಣೆ ಮತ್ತು ಅವಮಾನ ಕಂಡು ಆಕೆಯ ಮನಸು ಕುದಿಯಿತು. ಕನಿಷ್ಠ ಕೂಲಿ ಕಾಯಿದೆಯ ಪ್ರಕಾರ ಕೂಲಿದರಗಳನ್ನು ನೀಡುವಂತೆ ಆಗ್ರಹಿಸಿದರು. ಮತ್ತು ಮಹಿಳೆಯರು ಪುರುಷರಿಗೆ ಸಮಾನವಾಗಿ ಕೆಲಸ ಮಾಡಿದಲ್ಲಿ ಅವರಿಗೂ ಸಮಾನ ವೇತನ ಸಲ್ಲಬೇಕೆಂಬ ಬೇಡಿಕೆ ಇಟ್ಟರು.

ಓವರ್ ಟೈಮ್‌ಗೆ ಪ್ರತ್ಯೇಕವಾಗಿ ಕೂಲಿ ಪಾವತಿಗಾಗಿ ಒತ್ತಾಯಿಸಿದರು. ಈ ದಿಸೆಯಲ್ಲಿ ಮಜದೂರ್ ಅಧಿಕಾರ್ ಸಂಘಟನೆಯನ್ನು ಸೇರಿದರು. ಸಮೀಪದ ಸಿಂಘು ಗಡಿಯಲ್ಲಿ ಜರುಗಿದ್ದ ರೈತ ಹೋರಾಟವನ್ನು ಬೆಂಬಲಿಸಿ 1,200 ಮಂದಿ ಕಾರ್ಮಿಕರನ್ನು ಸಂಘಟಿಸಿ ಮೆರವಣಿಗೆ ನಡೆಸಿದರು. ನಿತ್ಯ 300 ಮಂದಿ ಕಾರ್ಮಿಕರು ರೈತರ ಪರವಾಗಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿದ್ದರು ನೌದೀಪ್. ಕುಂಡ್ಲಿ ಕೈಗಾರಿಕೆಗಳು ಕಾರ್ಮಿಕರನ್ನು ಮನಬಂದಂತೆ ನಡೆಸಿಕೊಳ್ಳುತ್ತಿದ್ದು, ರೈತ ಆಂದೋಲನವನ್ನು ಬೆಂಬಲಿಸಿದ ಕಾರಣಕ್ಕಾಗಿ ಅನೇಕ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿವೆ. ಹೀಗೆ ಬಂಧನಕ್ಕೆ ಮುನ್ನವೇ ನೌದೀಪ್ ಕೂಡ ಉದ್ಯೋಗ ಕಳೆದುಕೊಳ್ಳಬೇಕಾಗಿತ್ತು.

PC : Sabrang India

ಉತ್ತರಪ್ರದೇಶ, ಬಿಹಾರ, ಪಂಜಾಬಿನಿಂದ ಉದ್ಯೋಗ ಅರಸಿ ವಲಸೆ ಬಂದಿರುವ ಎರಡು ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಕುಂಡ್ಲಿ ಕೈಗಾರಿಕೆ ಪ್ರದೇಶದಲ್ಲಿ ಕೂಲಿಗಾಗಿ ಸೇರಿದ್ದಾರೆ. ಇವರ ಪೈಕಿ ವಿಶೇಷವಾಗಿ ಭೂಹೀನ ರೈತರು, ಬಡರೈತರು, ದಲಿತರು, ಮುಸಲ್ಮಾನರದೇ ದೊಡ್ಡ ಸಂಖ್ಯೆ.

ಪುರುಷ ಪೊಲೀಸರು ರಾತ್ರಿಯ ವೇಳೆ ನೌದೀಪ್ ಅವರನ್ನು ಕುಂಡ್ಲಿ ಕೈಗಾರಿಕೆ ಪ್ರದೇಶದ ನಿರ್ಜನ ಪ್ರದೇಶಕ್ಕೆ ಎಳೆದೊಯ್ಯುತ್ತಾರೆ. ಥಳಿಸಿ ಚಿತ್ರಹಿಂಸೆ ನೀಡುತ್ತಾರೆ. ವ್ಯಾನಿನಲ್ಲಿ, ಪೊಲೀಸ್ ಠಾಣೆಯಲ್ಲಿ ಮತ್ತೆ ಮತ್ತೆ ಥಳಿಸುತ್ತಾರೆ, ಗುಪ್ತಾಂಗಗಳ ಮೇಲೆ ಲಾಠಿ ಬೂಟುಗಳಿಂದ ಬಾರಿಸುತ್ತಾರೆ. ರಕ್ತಸ್ರಾವವಾಗುತ್ತದೆ. ಇಬ್ಬಿಬ್ಬರು ಮೈಮೇಲೆ ಕುಳಿತು ಖಾಲಿ ಕಾಗದದ ಮೇಲೆ ಬಲವಂತವಾಗಿ ರುಜು ಹಾಕಿಸಿಕೊಳ್ಳುತ್ತಾರೆ. ಜಾತಿಯ ಹೆಸರಿಡಿದು ಅಶ್ಲೀಲ ಬೈಗುಳ ಬೈಯ್ಯುತ್ತಾರೆ. ತಲೆಗೂದಲು ಹಿಡಿದು ಎಳೆದಾಡಿದ್ದಾರೆ. ಕಪಾಳಕ್ಕೆ ಬಾರಿಸಿದ್ದಾರೆ. ಕೆಲ ದಿನಗಳ ಕಾಲ ನಡೆದಾಡುವುದೂ ನೌದೀಪ್‌ಗೆ ದುಸ್ತರವಾಗಿದೆ. ಚರಂಡಿ ಗಟಾರ ಸ್ವಚ್ಛ ಮಾಡುವ ಕುಲದಲ್ಲಿ ಹುಟ್ಟಿದ ನೀನು ರೈತ- ಕಾರ್ಮಿಕ ಪ್ರತಿಭಟನೆಗೆ ಯಾಕೆ ಬಂದಿದ್ದೀ ಎಂದು ಅವಹೇಳನ ಮಾಡಿದ್ದಾರೆ. ಮತ್ತು ಥಳಿಸಿದ ಮತ್ತು ನಿಂದಿಸಿದ ಆರೋಪಗಳನ್ನು ಎಂದಿನಂತೆ ತಳ್ಳಿ ಹಾಕಿದ್ದಾರೆ ಕೂಡ.

ಆಕೆಯೊಂದಿಗೆ ದಸ್ತಗಿರಿಯಾದ ಮತ್ತೊಬ್ಬ ಯುವ ಕಾರ್ಮಿಕ ಹೋರಾಟಗಾರ ಶಿವಕುಮಾರ್ ಅವರನ್ನೂ ಚಿತ್ರಹಿಂಸೆಗೆ ಗುರಿಪಡಿಸಲಾಗಿದೆ. ಎಡಗೈ ಮತ್ತು ಬಲಪಾದದಲ್ಲಿ ಮೂಳೆಗಳು ಮುರಿದಿವೆ. ನೌದೀಪ್‌ಗೆ ಎರಡು ಸಲ ಜಾಮೀನು ನಿರಾಕರಿಸಲಾಗುತ್ತದೆ. ಮಂದ ದೃಷ್ಟಿಯ ಆತ ಕನ್ನಡಕವನ್ನು ಧರಿಸಲು ಕೂಡ ಅವಕಾಶ ಕೊಡದೆ ಅಪಹರಿಸಿ ಹಲವು ದಿನಗಳ ಕಾಲ ಅನಧಿಕೃತ ಬಂಧನದಲ್ಲಿ ಇರಿಸಿ ಚಿತ್ರಹಿಂಸೆ ನೀಡಿದ್ದಾರೆ. ಇಲ್ಲಿಯವರೆಗೆ ಆತನ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.

ಕಾರ್ಮಿಕರು ಮತ್ತು ರೈತರು ದೈಹಿಕ ಶ್ರಮವನ್ನೇ ನಂಬಿ ಬದುಕುವ ಶ್ರಮಜೀವಿಗಳು. ಇಬ್ಬರೂ ಉತ್ಪಾದಕರು. ರೈತ ಹೊಲಗದ್ದೆಗಳಲ್ಲಿ ಉತ್ಪಾದಿಸಿದರೆ, ಕಾರ್ಮಿಕರು ಗಿರಣಿಗಳಲ್ಲಿ ಉತ್ಪಾದನೆಯಲ್ಲಿ ತೊಡಗಿಕೊಂಡವರು. ಸರ್ಕಾರಗಳು ಈ ಇಬ್ಬರ ಹಕ್ಕುಗಳನ್ನೂ ಬಿಕರಿಗಿಟ್ಟಿದೆ. ಸರ್ಕಾರಿ ಉದ್ಯಮಗಳು ಕಂಪನಿಗಳನ್ನು ಮಾರಾಟಕ್ಕಿಡಲಾಗಿದೆ. ಹೀಗಾಗಿ ಇಬ್ಬರೂ ಒಟ್ಟಾಗಿ ಹೋರಾಡಬೇಕಿದೆ. ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದಿದ್ದರೆ, ರೈತರ ವಿರೋಧೀ ಕಾನೂನುಗಳನ್ನು ರದ್ದು ಮಾಡದೆ ಹೋದರೆ ನಾವು ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ನಿಲ್ಲಿಸುತ್ತೇವೆ. ಕಂಪನಿಗಳಿಗೆ ಬೀಗ ಹಾಕಿಸುತ್ತೇವೆ ಎಂಬ ನೌದೀಪ್ ಹೇಳಿಕೆ ಕಾರ್ಖಾನೆಗಳ ಮಾಲೀಕರನ್ನು ಕೆರಳಿಸಿತ್ತು.

ದಲಿತ ಜಾತಿ ಮತ್ತು ಬಡವರ್ಗಕ್ಕೆ ಸೇರಿದ ಕಾರಣವೇ ಮುಖ್ಯವಾಹಿನಿ ಮಾಧ್ಯಮಗಳು ನೌದೀಪ್ ಅವರ ಬಂಧನ ಮತ್ತು ಚಿತ್ರಹಿಂಸೆಯನ್ನು ನಿರ್ಲಕ್ಷಿಸಿದವು. ಭಾರತದಲ್ಲಿ ದಲಿತರು ಆದಿವಾಸಿಗಳು ಹಾಗೂ ಮುಸಲ್ಮಾನರ ಪ್ರಮಾಣ ಶೇ.39. ದೇಶದ ಜೈಲು ಪಾಲಾಗಿರುವ ಬಂದಿಗಳು ಮತ್ತು ವಿಚಾರಣಾಧೀನ ಕೈದಿಗಳ ಪೈಕಿ ಈ ಸಮುದಾಯಗಳ ಪ್ರಮಾಣ ಶೇ.51.

ಶೋಷಣೆ, ಬಡತನ, ಪೂರ್ವಗ್ರಹಗಳು, ಅನಕ್ಷರತೆ, ತಾರತಮ್ಯಕ್ಕೆ ಬಲಿಯಾಗುತ್ತಿರುವ, ದನಿ ಸತ್ತ ಜನಸಮುದಾಯಗಳಿವು.

ಇತ್ತೀಚೆಗೆ ಬಿಡುಗಡೆಯಾದ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ ಸರ್ಕಾರಿ ಅಂಕಿಅಂಶ ಕಟುಸತ್ಯದ ಕತೆಯನ್ನು ಕಿರುಚಿ ಹೇಳುತ್ತಿದೆ. ಉಳ್ಳವರ ಕಿವಿಗಳ ಮೇಲೆ ಅದು ಬೀಳುತ್ತಿಲ್ಲ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...