HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...