HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...