HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...