HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...