HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...