HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...