HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...