Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...