Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...