Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...