Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...