Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...