Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...