Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...