Homeಮುಖಪುಟಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

- Advertisement -
- Advertisement -

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಅಲೆಮಾರಿ ಸಮುದಾಯವಾದ ಬೇಡ ಬುಡಗ ಜಂಗಮದ 23 ವರ್ಷದ ಮಹಿಳೆ ಉಬಿದಿ ರೇಖಾ ಅವರ ಹೆರಿಗೆ ದಿನಾಂಕ ಸಮೀಪಿಸುತ್ತಿದ್ದು, ಆಸ್ಪತ್ರೆಗೆ ದಾಖಲಾಗಲು ಆಧಾರ್ ಕಾರ್ಡ್‌ ಇಲ್ಲದಿರುವುದು ಆಕೆಗೆ ದೊಡ್ಡ ಸಮಸ್ಯೆಯಾಗಿದೆ. ಯಾವುದೇ ಆಸ್ಪತ್ರೆಗೆ ಹೋದರೂ, ಆಧಾರ್ ಕಾರ್ಡ್ ಇಲ್ಲದೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.

ರೇಖಾ ಮೂಲತಃ ಕರೀಂನಗರ ಜಿಲ್ಲೆಯ ತಿಮ್ಮಾಪುರ ಮಂಡಲದ ರಾಮಕೃಷ್ಣ ಕಾಲೋನಿ ಗ್ರಾಮದವರು. ಆದರೆ, ಅವರು ಈ ಗ್ರಾಮದ ಶಾಶ್ವತ ನಿವಾಸಿ ಎನ್ನಲಾಗದು. ಏಕೆಂದರೆ, ಗ್ರಾಮದ ಇತರ ಹಲವರಂತೆ ಇವರ ಪೋಷಕರೂ ಕೂಡ ರಾಜ್ಯದಾದ್ಯಂತ ಅಲೆದಾಡಿ ಜೀವನೋಪಾಯ ಕಂಡುಕೊಳ್ಳುವವರು. ವರದಿಯ ಪ್ರಕಾರ, ಪೋಷಕರು ರಾಜ್ಯದ ಯಾವುದೋ ಮೂಲೆಯಲ್ಲಿ ಇದ್ದಾಗ ರೇಖಾ ಅವರ ಜನನ ಆಗಿತ್ತು. ಹಾಗಾಗಿ, ಅವರ ಜನನ ಎಲ್ಲೂ ನೋಂದಣಿ ಆಗಿಲ್ಲ.

ಜನನ ನೋಂದಣಿ ಆಗದ ಕಾರಣ ರೇಖಾ ಅವರಿಗೆ ಆಧಾರ್ ಕಾರ್ಡ್ ದೊರೆತಿಲ್ಲ. ಪರಿಣಾಮ ಈಗ ಆಕೆಯ ಗರ್ಭಾವಸ್ಥೆಯಲ್ಲಿ ಸರ್ಕಾರದ ಯಾವುದೇ ಕಲ್ಯಾಣ ಯೋಜನೆಗಳನ್ನು ಪಡೆಯಲು ಆಗಿಲ್ಲ. ದಿನನಿತ್ಯದ ಆರೋಗ್ಯ ರಕ್ಷಣೆ ಮತ್ತು ಈಗ ಸುರಕ್ಷಿತ ಹೆರಿಗೆಯ ಹಕ್ಕನ್ನೂ ಪಡೆಯಲು ಹೆಣಗಾಡುವಂತಾಗಿದೆ.

ವೈದ್ಯರ ನಿರ್ದೇಶನಗಳು ಇಲ್ಲದಿದ್ದರೂ, ಸಹಜವಾಗಿ ಹೆರಿಗೆಯ ದಿನಾಂಕ ಸಮೀಪಿಸುತ್ತಿರುವುದು ಗೊತ್ತಾದ ಕಾರಣ ರೇಖಾ ಅವರು ಇತ್ತೀಚೆಗೆ ಕರೀಂನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹೋಗಿದ್ದರು. ಆದರೆ, ಅಲ್ಲಿ ಆಧಾರ್ ಕಾರ್ಡ್‌ ಇಲ್ಲದೆ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ರೇಖಾ ಜಿಲ್ಲೆಯ ಇತರ ಸರ್ಕಾರಿ ಆಸ್ಪತ್ರೆಗಳಿಗೂ ಹೋಗಿ ಬಂದಿದ್ದಾರೆ. ಎಲ್ಲೂ ಆಕೆಯನ್ನು ಸೇರಿಸಿಕೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲೆಮಾರಿ ಸಮುದಾಯವಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗುವುದು ಆಕೆಗೆ ಕನಸಿನ ಮಾತಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಆಧಾರ್ ಕಾರ್ಡ್‌ ಅನ್ನು ಕೇವಲ ಗುರುತಿಸುವಿಕೆಗಾಗಿ ಮಾತ್ರ ಕೇಳಲಾಗುತ್ತದೆ. ಅದು ಇಲ್ಲ ಎಂಬ ಕಾರಣಕ್ಕೆ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಒಂದು ವೇಳೆ ಆಧಾರ್ ಕಾರ್ಡ್ ಇಲ್ಲದಿದ್ದರೆ, ಅಂತವರನ್ನು ‘ಅಜ್ಞಾತ ಅಥವಾ ಅಪರಿಚತ ವ್ಯಕ್ತಿ’ ಎಂದು ಪರಿಗಣಿಸಲಾಗುತ್ತದೆ. ಅವರ ಬಗ್ಗೆ ಪೊಲೀಸರಿಗೆ ವರದಿ ಮಾಡಲಾಗುತ್ತದೆ. ಆದರೆ, ಅವರಿಗೆ ಚಿಕಿತ್ಸೆ ನಿರಾಕರಿಸಲಾಗುವುದಿಲ್ಲ” ಎಂದು ಜಿಲ್ಲಾ ಜನರಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಜಿ. ವೀರಾ ರೆಡ್ಡಿ ಹೇಳಿದ್ದಾರೆ. ಒಂದು ವೇಳೆ ಇಂತಹ ಯಾವುದೇ ಸಮಸ್ಯೆ ಅಥವಾ ತೊಂದರೆ ಉಂಟಾದರೆ, ಅದನ್ನು ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಅವರು ಕೇಳಿಕೊಂಡಿದ್ದಾರೆ.

ಹಿರಿಯ ಅಧಿಕಾರಿ ಹೇಳಿಕೆ ಕೊಟ್ಟರೂ ತಳಮಟ್ಟದಲ್ಲಿ ನೈಜತೆ ಬೇರೆಯೇ ಇದೆ. ಅಲ್ಲಿ ನಿಯಮ ಮತ್ತು ಅದರ ಅನುಷ್ಠಾನದ ನಡುವೆ ಅಂತರವಿದೆ. ಯಾವುದೇ ಆಸ್ಪತ್ರೆಗೆ ಹೋದರೂ ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವುದು ಬಡ, ಅನಕ್ಷರಸ್ಥ, ಆರ್ಥಿಕವಾಗಿ ಸಬಲರಲ್ಲದ ರೇಖಾ ಅವರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಹೆರಿಗೆಯ ದಿನಾಂಕ ಸಮೀಪಿಸಿದರೂ, ಆಕೆಗೆ ಎಲ್ಲಿ ಹೆರಿಗೆಯಾಗಲಿದೆ ಎಂಬ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ನನ್ನ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ, ನಾನು ತಾಯಿಯಾಗಲು ಸಾಧ್ಯವಿಲ್ಲವೇ?” ಎಂದು ಆಕೆ ಕೇಳುತ್ತಾರೆ ಎಂದು ವರದಿ ಹೇಳಿದೆ.

ಸ್ಥಳೀಯ ಬಿಜೆಪಿ ಮುಖಂಡ ಸುಗುರ್ತಿ ಜಗದೀಶ್ವರಚಾರಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದ್ದರು. ಅವರು ಗ್ರಾಮ ಪಂಚಾಯತ್‌ನಿಂದ ವಾಸಸ್ಥಳದ ಪ್ರಮಾಣಪತ್ರವನ್ನು ಪಡೆಯಲು ರೇಖಾ ಅವರಿಗೆ ಸಹಾಯ ಮಾಡಿದ್ದರು. ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಆಧಾರ್ ಪೋರ್ಟಲ್ ರೇಖಾ ಅವರ ವಿವರಗಳನ್ನು ಸ್ವೀಕರಿಸಿಲ್ಲ. ಅವರ ಅರ್ಜಿ ಸ್ಥಗಿತಗೊಂಡಿದೆ.

ರೇಖಾ ಅವರ ಪ್ರಕರಣವು ದೊಡ್ಡ ಸಮಸ್ಯೆಯನ್ನು ಪ್ರತಿಬಿಂಬಿಸುತ್ತದೆ ಎಂದು ಜಗದೀಶ್ವರಚಾರಿ ಹೇಳಿದ್ದಾರೆ.

ಅಲೆಮಾರಿ ಸಮುದಾಯಗಳ ಅನೇಕ ಮಹಿಳೆಯರು ಮತ್ತು ಮಕ್ಕಳು, ಮನೆ ಜನನ, ವಲಸೆ ನೋಂದಣಿಗಳ ಕೊರತೆಯಿಂದಾಗಿ ಔಪಚಾರಿಕ ದಾಖಲೆಗಳಿಂದ ಹೊರಗೆ ಉಳಿದಿದ್ದಾರೆ. ಪರಿಣಾಮ ಅವರ ಮಕ್ಕಳು ಶಿಕ್ಷಣದಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಕಲ್ಯಾಣ ಯೋಜನೆಗಳು ಆ ಸಮುದಾಯದ ಜನರಿಗೆ ಸಿಗುತ್ತಿಲ್ಲ. ಅಲೆಮಾರಿ ಸಮುದಾಯಕ್ಕೆಂದೇ ಮೀಸಲಾದ ಯೋಜನೆಗಳ ಲಾಭವನ್ನೂ ಪಡೆಯಲು ಆಗುತ್ತಿಲ್ಲ ಎಂದು ಜಗದೀಶ್ವರಚಾರಿ ವಿಷಾದ ವ್ಯಕ್ತಪಡಿಸಿದ್ದಾರೆ.

ತುರ್ತು ಆಸ್ಪತ್ರೆ ದಾಖಲಾತಿಗಳಿಗೆ ಆಧಾರ್ ಕಡ್ಡಾಯಗೊಳಿಸುವ ಕಾನೂನುಬದ್ಧತೆಯ ಬಗ್ಗೆ ತೆಲಂಗಾಣ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ಆಧಾರ್ ಇಲ್ಲದ ಕಾರಣಕ್ಕೆ ತೆಲಂಗಾಣದಲ್ಲಿ ಕುಟುಂಬಗಳನ್ನು ಮಹಾಲಕ್ಷ್ಮಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಮತ್ತು ಕಲ್ಯಾಣ ಲಕ್ಷ್ಮಿಯಂತಹ ಯೋಜನೆಗಳಿಂದ ಹೊರಗಿಡಲಾಗುತ್ತದೆ ಎಂದು ವರದಿಯಾಗಿದೆ.

ಈ ಸಮಸ್ಯೆಗಳನ್ನು ತಗ್ಗಿಸಲು, ತೆಲಂಗಾಣ ಸರ್ಕಾರ ಜನವರಿ 2026ರಲ್ಲಿ ಉಚಿತ ಮಹಿಳಾ ಬಸ್ ಪ್ರಯಾಣಕ್ಕಾಗಿ ಸ್ಮಾರ್ಟ್ ಐಡಿ ಕಾರ್ಡ್‌ಗಳನ್ನು ಪರಿಚಯಿಸಿದೆ. ಇದು ಆಧಾರ್ ಪರಿಶೀಲನೆಯಲ್ಲಿ ತೊಂದರೆ ಎದುರಿಸಬಹುದಾದವರಿಗೆ ಪರಿಹಾರವನ್ನು ನೀಡುವ ಗುರಿಯನ್ನು ಹೊಂದಿದೆ.

Courtesy : newindianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...