Homeಕರ್ನಾಟಕಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

'ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ.

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದಲ್ಲಿ ಕೊರಚ ಸಮುದಾಯಕ್ಕೆ ಸೇರಿದ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ, ಆರೋಪಿಗಳ ಪತ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಅಲೆಮಾರಿ, ಅರೆ-ಅಲೆಮಾರಿ ಬುಡಕಟ್ಟು SC/ST ಮಹಾಸಭಾ, ಕರ್ನಾಟಕ ಶಾಂತಿ ಸೌಹಾರ್ದ ವೇದಿಕೆ ಮತ್ತು ಜಿಲ್ಲಾ ಸಿಳ್ಳೆ ಕ್ಯಾತಾರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರಗಳು ದಲಿತರ ಹಕ್ಕುಗಳನ್ನು ದಮನ ಮಾಡುತ್ತಿವೆ. ದಲಿತರು ಕುಡಿಯಲು ನೀರು ಕೇಳಿದ್ರೆ ಜಾತಿ ನಿಂದನೆ ಮಾಡಿ ಅವಮಾನ ಮಾಡುತ್ತಿದ್ದಾರೆ. ಪೆಟ್ರೋಲ್ ಕೇಳಿದರೆ ಕಂಬಕ್ಕೆ ಕಟ್ಟಿ ಹೊಡೆಯುತ್ತಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಾಯಕನಹಟ್ಟಿಯಲ್ಲಿ ನಡೆದಿರುವ ಕೊಲೆ ಪ್ರಕರಣವು ಅಮಾನವೀಯ ಕೃತ್ಯವಾಗಿದೆ. ಈ ಕೂಡಲೇ ದೌರ್ಜನ್ಯ ಪ್ರಕರಣ ದಾಖಲಿಸಿ ನ್ಯಾಯಯುತ ತನಿಖೆ ನಡೆಸಬೇಕು. ಆರೋಪಿಗಳನ್ನು ಬಂಧಿಸುವ ಮೂಲಕ ನೊಂದವರಿಗೆ ನ್ಯಾಯ ಮತ್ತು ರಕ್ಷಣೆ ನೀಡಬೇಕೆಂದು ಅವರು ಆಗ್ರಹಿಸಿದರು.

ಪ್ರಗತಿಪರ ಹೋರಾಟಗಾರರಾದ ವಿಶ್ವಸಾಗರ್ ಮಾತನಾಡಿ “ನಾಯಕನಹಟ್ಟಿ ಕೊಲೆ ಪ್ರಕರಣವು ರಾಜ್ಯವೇ ಬೆಚ್ಚಿ ಬೀಳಿಸಿದ ಘಟನೆಯಾಗಿದೆ. ಪೊಲೀಸರು ತ್ವರಿತ ತನಿಖೆ ನಡೆಸಬೇಕು. ಶೋಷಿತರಿಗೆ ರಕ್ಷಣೆ ಕೊಡುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ” ಎಂದರು.

ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ ‘ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ನೀಡಿ ಎಲ್ಲಾ ಹಂದಿ ಸಾಕುವವರನ್ನು ನಗರದಿಂದ ಹೊರಗೆ ಹಾಕಲಾಗಿದೆ. ಅವರಿಗೆ ನಗರ ಸಭೆ, ಪುರಸಭೆಗಳಿಂದ ಕಿರುಕುಳ ಕೊಡಲಾಗುತ್ತಿದೆ. ಲಾಕ್‌ಡೌನ್‌ ಕಾರಣದಿಂದ ಈಗಾಗಲೇ ಸಂಕಷ್ಟದಲ್ಲಿರುವ ಕೊರಚ ಸಮುದಾಯದ ಅಲೆಮಾರಿಗಳಿಗೆ ಬೇರೆ ಉದ್ಯೋಗವಿಲ್ಲ. ಹಾಗಾಗಿ ಊರ ಹೊರಗಿರುವವರಿಗೆ ಪೊಲೀಸ್ ರಕ್ಷಣೆ ನೀಡಬೇಕು. ಕೊಲೆಗೆ ಸಂಬಂಧಿಸಿದಂತೆ ಎಸ್‌ಎಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ರಾಧಿಕಾ “ಕೊರಚ ಸಮುದಾಯದ ಕಗ್ಗೂಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು. ತೀವ್ರಗತಿಯಲ್ಲಿ ತನಿಖೆ ನಡೆಸಲಿದ್ದ, ಆರೋಪಿಗಳ ಬಂಧನಕ್ಕೆ ಪ್ರಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ” ಎಂದರು.

ಪ್ರತಿಭಟನೆಯಲ್ಲಿ ಅಲೆಮಾರಿ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜ್, ಕೃಷ್ಣಪ್ಪ, ಗುರುಮೂರ್ತಿ,  ಸಿಳ್ಳೆಕ್ಯಾತಾರ್ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ, ರವಿಕುಮಾರ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕಟೇ ಶ್ಐಹೊಳೆ, ಎನ್. ಪ್ರಕಾಶ್ ಹೊಳಲ್ಕೆರೆ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...