Homeಕರ್ನಾಟಕಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

'ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ.

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದಲ್ಲಿ ಕೊರಚ ಸಮುದಾಯಕ್ಕೆ ಸೇರಿದ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ, ಆರೋಪಿಗಳ ಪತ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಅಲೆಮಾರಿ, ಅರೆ-ಅಲೆಮಾರಿ ಬುಡಕಟ್ಟು SC/ST ಮಹಾಸಭಾ, ಕರ್ನಾಟಕ ಶಾಂತಿ ಸೌಹಾರ್ದ ವೇದಿಕೆ ಮತ್ತು ಜಿಲ್ಲಾ ಸಿಳ್ಳೆ ಕ್ಯಾತಾರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರಗಳು ದಲಿತರ ಹಕ್ಕುಗಳನ್ನು ದಮನ ಮಾಡುತ್ತಿವೆ. ದಲಿತರು ಕುಡಿಯಲು ನೀರು ಕೇಳಿದ್ರೆ ಜಾತಿ ನಿಂದನೆ ಮಾಡಿ ಅವಮಾನ ಮಾಡುತ್ತಿದ್ದಾರೆ. ಪೆಟ್ರೋಲ್ ಕೇಳಿದರೆ ಕಂಬಕ್ಕೆ ಕಟ್ಟಿ ಹೊಡೆಯುತ್ತಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಾಯಕನಹಟ್ಟಿಯಲ್ಲಿ ನಡೆದಿರುವ ಕೊಲೆ ಪ್ರಕರಣವು ಅಮಾನವೀಯ ಕೃತ್ಯವಾಗಿದೆ. ಈ ಕೂಡಲೇ ದೌರ್ಜನ್ಯ ಪ್ರಕರಣ ದಾಖಲಿಸಿ ನ್ಯಾಯಯುತ ತನಿಖೆ ನಡೆಸಬೇಕು. ಆರೋಪಿಗಳನ್ನು ಬಂಧಿಸುವ ಮೂಲಕ ನೊಂದವರಿಗೆ ನ್ಯಾಯ ಮತ್ತು ರಕ್ಷಣೆ ನೀಡಬೇಕೆಂದು ಅವರು ಆಗ್ರಹಿಸಿದರು.

ಪ್ರಗತಿಪರ ಹೋರಾಟಗಾರರಾದ ವಿಶ್ವಸಾಗರ್ ಮಾತನಾಡಿ “ನಾಯಕನಹಟ್ಟಿ ಕೊಲೆ ಪ್ರಕರಣವು ರಾಜ್ಯವೇ ಬೆಚ್ಚಿ ಬೀಳಿಸಿದ ಘಟನೆಯಾಗಿದೆ. ಪೊಲೀಸರು ತ್ವರಿತ ತನಿಖೆ ನಡೆಸಬೇಕು. ಶೋಷಿತರಿಗೆ ರಕ್ಷಣೆ ಕೊಡುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ” ಎಂದರು.

ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ ‘ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ನೀಡಿ ಎಲ್ಲಾ ಹಂದಿ ಸಾಕುವವರನ್ನು ನಗರದಿಂದ ಹೊರಗೆ ಹಾಕಲಾಗಿದೆ. ಅವರಿಗೆ ನಗರ ಸಭೆ, ಪುರಸಭೆಗಳಿಂದ ಕಿರುಕುಳ ಕೊಡಲಾಗುತ್ತಿದೆ. ಲಾಕ್‌ಡೌನ್‌ ಕಾರಣದಿಂದ ಈಗಾಗಲೇ ಸಂಕಷ್ಟದಲ್ಲಿರುವ ಕೊರಚ ಸಮುದಾಯದ ಅಲೆಮಾರಿಗಳಿಗೆ ಬೇರೆ ಉದ್ಯೋಗವಿಲ್ಲ. ಹಾಗಾಗಿ ಊರ ಹೊರಗಿರುವವರಿಗೆ ಪೊಲೀಸ್ ರಕ್ಷಣೆ ನೀಡಬೇಕು. ಕೊಲೆಗೆ ಸಂಬಂಧಿಸಿದಂತೆ ಎಸ್‌ಎಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ರಾಧಿಕಾ “ಕೊರಚ ಸಮುದಾಯದ ಕಗ್ಗೂಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು. ತೀವ್ರಗತಿಯಲ್ಲಿ ತನಿಖೆ ನಡೆಸಲಿದ್ದ, ಆರೋಪಿಗಳ ಬಂಧನಕ್ಕೆ ಪ್ರಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ” ಎಂದರು.

ಪ್ರತಿಭಟನೆಯಲ್ಲಿ ಅಲೆಮಾರಿ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜ್, ಕೃಷ್ಣಪ್ಪ, ಗುರುಮೂರ್ತಿ,  ಸಿಳ್ಳೆಕ್ಯಾತಾರ್ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ, ರವಿಕುಮಾರ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕಟೇ ಶ್ಐಹೊಳೆ, ಎನ್. ಪ್ರಕಾಶ್ ಹೊಳಲ್ಕೆರೆ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...