Homeಕರ್ನಾಟಕಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ ಪ್ರತಿಭಟನೆ

'ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ.

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದಲ್ಲಿ ಕೊರಚ ಸಮುದಾಯಕ್ಕೆ ಸೇರಿದ ಅಲೆಮಾರಿ ಜನಾಂಗದ ಮೂವರ ಕಗ್ಗೊಲೆ ಖಂಡಿಸಿ, ಆರೋಪಿಗಳ ಪತ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಅಲೆಮಾರಿ, ಅರೆ-ಅಲೆಮಾರಿ ಬುಡಕಟ್ಟು SC/ST ಮಹಾಸಭಾ, ಕರ್ನಾಟಕ ಶಾಂತಿ ಸೌಹಾರ್ದ ವೇದಿಕೆ ಮತ್ತು ಜಿಲ್ಲಾ ಸಿಳ್ಳೆ ಕ್ಯಾತಾರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರಗಳು ದಲಿತರ ಹಕ್ಕುಗಳನ್ನು ದಮನ ಮಾಡುತ್ತಿವೆ. ದಲಿತರು ಕುಡಿಯಲು ನೀರು ಕೇಳಿದ್ರೆ ಜಾತಿ ನಿಂದನೆ ಮಾಡಿ ಅವಮಾನ ಮಾಡುತ್ತಿದ್ದಾರೆ. ಪೆಟ್ರೋಲ್ ಕೇಳಿದರೆ ಕಂಬಕ್ಕೆ ಕಟ್ಟಿ ಹೊಡೆಯುತ್ತಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಾಯಕನಹಟ್ಟಿಯಲ್ಲಿ ನಡೆದಿರುವ ಕೊಲೆ ಪ್ರಕರಣವು ಅಮಾನವೀಯ ಕೃತ್ಯವಾಗಿದೆ. ಈ ಕೂಡಲೇ ದೌರ್ಜನ್ಯ ಪ್ರಕರಣ ದಾಖಲಿಸಿ ನ್ಯಾಯಯುತ ತನಿಖೆ ನಡೆಸಬೇಕು. ಆರೋಪಿಗಳನ್ನು ಬಂಧಿಸುವ ಮೂಲಕ ನೊಂದವರಿಗೆ ನ್ಯಾಯ ಮತ್ತು ರಕ್ಷಣೆ ನೀಡಬೇಕೆಂದು ಅವರು ಆಗ್ರಹಿಸಿದರು.

ಪ್ರಗತಿಪರ ಹೋರಾಟಗಾರರಾದ ವಿಶ್ವಸಾಗರ್ ಮಾತನಾಡಿ “ನಾಯಕನಹಟ್ಟಿ ಕೊಲೆ ಪ್ರಕರಣವು ರಾಜ್ಯವೇ ಬೆಚ್ಚಿ ಬೀಳಿಸಿದ ಘಟನೆಯಾಗಿದೆ. ಪೊಲೀಸರು ತ್ವರಿತ ತನಿಖೆ ನಡೆಸಬೇಕು. ಶೋಷಿತರಿಗೆ ರಕ್ಷಣೆ ಕೊಡುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ” ಎಂದರು.

ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ ‘ಕೊಲೆಗೀಡಾದ ವ್ಯಕ್ತಿಗಳು ಹಂದಿ ಸಾಕಾಣಿಕೆ ಕಸುಬು ಮಾಡುತ್ತಿದ್ದರು. ಹಂದಿ ಕಳ್ಳತನ ಮಾಡುವ ಉದ್ದೇಶದಿಂದಲೇ ಅವರನ್ನು ಕಗ್ಗೊಲೆ ಮಾಡಲಾಗಿದೆ. ಅವರ ಜೀವಕ್ಕೆ ಬೆಲೆ ಇಲ್ಲವೇ? ಜಿಲ್ಲೆಯಲ್ಲಿ ಕಳ್ಳತನ ಮಾಡಲು ಕೊಲೆ ಮಾಡುವಂತಹ ಹೀನ ಪರಿಸ್ಥಿತಿ ಬಂದಿದೆಯೆಂದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ನೀಡಿ ಎಲ್ಲಾ ಹಂದಿ ಸಾಕುವವರನ್ನು ನಗರದಿಂದ ಹೊರಗೆ ಹಾಕಲಾಗಿದೆ. ಅವರಿಗೆ ನಗರ ಸಭೆ, ಪುರಸಭೆಗಳಿಂದ ಕಿರುಕುಳ ಕೊಡಲಾಗುತ್ತಿದೆ. ಲಾಕ್‌ಡೌನ್‌ ಕಾರಣದಿಂದ ಈಗಾಗಲೇ ಸಂಕಷ್ಟದಲ್ಲಿರುವ ಕೊರಚ ಸಮುದಾಯದ ಅಲೆಮಾರಿಗಳಿಗೆ ಬೇರೆ ಉದ್ಯೋಗವಿಲ್ಲ. ಹಾಗಾಗಿ ಊರ ಹೊರಗಿರುವವರಿಗೆ ಪೊಲೀಸ್ ರಕ್ಷಣೆ ನೀಡಬೇಕು. ಕೊಲೆಗೆ ಸಂಬಂಧಿಸಿದಂತೆ ಎಸ್‌ಎಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ರಾಧಿಕಾ “ಕೊರಚ ಸಮುದಾಯದ ಕಗ್ಗೂಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು. ತೀವ್ರಗತಿಯಲ್ಲಿ ತನಿಖೆ ನಡೆಸಲಿದ್ದ, ಆರೋಪಿಗಳ ಬಂಧನಕ್ಕೆ ಪ್ರಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ” ಎಂದರು.

ಪ್ರತಿಭಟನೆಯಲ್ಲಿ ಅಲೆಮಾರಿ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜ್, ಕೃಷ್ಣಪ್ಪ, ಗುರುಮೂರ್ತಿ,  ಸಿಳ್ಳೆಕ್ಯಾತಾರ್ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ, ರವಿಕುಮಾರ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕಟೇ ಶ್ಐಹೊಳೆ, ಎನ್. ಪ್ರಕಾಶ್ ಹೊಳಲ್ಕೆರೆ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...