Homeಕರ್ನಾಟಕಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಈ ಕೂಡಲೇ ಬದಲಾಯಿಸುವಂತೆ ಸಚಿವ ಸಂಪುಟಕ್ಕೆ ಸೂಚಿಸಬೇಕು. ಅಲೆಮಾರಿ ಸಮುದಾಯಗಳನ್ನು ಪ್ರವರ್ಗ 1 ರಲ್ಲಿ ಇರಿಸಿ, ಪ್ರಥಮ ಆದ್ಯತೆಯ ಪ್ರತ್ಯೇಕ ಶೇ.1 ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ನಮ್ಮ ಬೇಡಿಕೆ ಸಲ್ಲಿಸುತ್ತೇವೆ ಎಂದರು.

‘ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಆಯೋಗವನ್ನು ರಚಿಸಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ಬಹುತೇಕ ಎಲ್ಲ ಮೂಲಭೂತ ಹಕ್ಕುಗಳಿಂದ ವಂಚಿಸಲ್ಪಟ್ಟಿರುವ ಅಲೆಮಾರಿ ಸಮುದಾಯಗಳಿಗೆ ಈಗಲಾದರೂ ಸೂಕ್ತ ನೆಲೆ, ಶಿಕ್ಷಣ, ಉದ್ಯೋಗ ಮತ್ತು ಪ್ರಾತಿನಿಧ್ಯವನ್ನು ಒದಗಿಸಲು ತ್ವರಿತಗತಿಯ ಮತ್ತು ಪರಿಣಾಮಕಾರಿಯಾದ ಪ್ಯಾಕೇಜ್ ಅನ್ನು ಘೋಷಿಸಬೇಕು’ ಎಂದು ಹೋರಾಟಗಾರರು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ, ನಾವು ದೆಹಲಿಯನ್ನು ಮುಟ್ಟಿಬರಲು ಹೋಗುತ್ತಿಲ್ಲ. ಹೈಕಮಾಂಡಿನ ಬಾಗಿಲುಗಳನ್ನು ತಟ್ಟಿ ತೆಗೆಸಲು ಹೊರಟಿದ್ದೇವೆ. ದೆಹಲಿಯಲ್ಲಿ ಮೇಲೆ ಉಲ್ಲೇಖಿಸಿರುವ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಷ್ಟ ಪರಿಹಾರ ದೊರಕದೆ ನಾವು ಹಿಂತಿರುಗುವುದಿಲ್ಲ. ಕೆಲದಿನ ದೆಹಲಿಯಲ್ಲೇ ಉಳಿಯಬೇಕಾದರೂ, ಎಐಸಿಸಿ ಕಛೇರಿಯ ಮುಂದೆಯೇ ಬೀಡುಬಿಟ್ಟು ನ್ಯಾಯ ಸಿಗುವ ತನಕ ಕಾಯುತ್ತೇವೆ. ಬೀದಿಯ ಮೇಲೆಯೇ ಬದುಕಿದ ಜನಕ್ಕೆ ಇದು ದೊಡ್ಡ ವಿಚಾರವೇ ಅಲ್ಲ ಎಂಬುದು ತಮಗೂ ಗೊತ್ತಿದೆ. ಇತ್ತ ಕರ್ನಾಟಕ ಸರಕಾರವು ತನ್ನ ಈಗಿನ ನಿಲುವನ್ನು ಪುನಾರವಲೋಕನ ಮಾಡಿಕೊಳ್ಳದೆ. ಇದೇ ತೀರ್ಮಾನದಲ್ಲಿ ಮುಂದುವರೆಯಲು ಬಯಸಿದಲ್ಲಿ ಮತ್ತು ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ನಮ್ಮ ಸಂಘಟನೆಯ ಮೂಲಕ ನ್ಯಾಯಾಲಯದ ಮೊರೆ ಹೋಗಿ ಇಡೀ ಒಳಮೀಸಲಾತಿ ಪ್ರಕ್ರಿಯೆಯ ಮೇಲೆ ತಡೆಯಾಜ್ಞೆ ತರುವುದು ಅನಿವಾರ್ಯವಾಗುತ್ತದೆ. ಅಲ್ಲದೆ ಮುಂದಿನ ಚಳಿಗಾಲದ ಅಧಿವೇಶನಕ್ಕೆ ಕರ್ನಾಟಕದ ಸಮಸ್ತ ಅಲೆಮಾರಿ ಸಮುದಾಯಗಳು ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ. ನಮ್ಮನ್ನು ನಿಷ್ಟೂರ ಸ್ವರೂಪದ ಹೋರಾಟಗಳಿಗೆ ತಳ್ಳಬೇಡಿ ಎಂದು ಮತ್ತೊಮ್ಮೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಲ್ಲದೆ, ಒಂದು ಸಾವಿರ ಅಲೆಮಾರಿ ಸಮುದಾಯಗಳ ಜನ ಭಾಗವಹಿಸಲಿದ್ದಾರೆ. ಜೊತೆಗೆ ಜಿ. ಎನ್. ದೇವಿ, ಸುರೇಶ್ ಮಹಾಲ್‌ ರಂತಹ ಅನೇಕ ಬುದ್ದಿಜೀವಿಗಳು, ದೇಶದ ಮತ್ತು ರಾಜ್ಯದ ಹಲವು ಪ್ರಗತಿ ಚಳುವಳಿಯ ಮುಖಂಡರು ಮತ್ತು ಒಳಮೀಸಲಾತಿ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನಿಡಿದರು.

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...