Homeಕರ್ನಾಟಕಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಈ ಕೂಡಲೇ ಬದಲಾಯಿಸುವಂತೆ ಸಚಿವ ಸಂಪುಟಕ್ಕೆ ಸೂಚಿಸಬೇಕು. ಅಲೆಮಾರಿ ಸಮುದಾಯಗಳನ್ನು ಪ್ರವರ್ಗ 1 ರಲ್ಲಿ ಇರಿಸಿ, ಪ್ರಥಮ ಆದ್ಯತೆಯ ಪ್ರತ್ಯೇಕ ಶೇ.1 ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ನಮ್ಮ ಬೇಡಿಕೆ ಸಲ್ಲಿಸುತ್ತೇವೆ ಎಂದರು.

‘ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಆಯೋಗವನ್ನು ರಚಿಸಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ಬಹುತೇಕ ಎಲ್ಲ ಮೂಲಭೂತ ಹಕ್ಕುಗಳಿಂದ ವಂಚಿಸಲ್ಪಟ್ಟಿರುವ ಅಲೆಮಾರಿ ಸಮುದಾಯಗಳಿಗೆ ಈಗಲಾದರೂ ಸೂಕ್ತ ನೆಲೆ, ಶಿಕ್ಷಣ, ಉದ್ಯೋಗ ಮತ್ತು ಪ್ರಾತಿನಿಧ್ಯವನ್ನು ಒದಗಿಸಲು ತ್ವರಿತಗತಿಯ ಮತ್ತು ಪರಿಣಾಮಕಾರಿಯಾದ ಪ್ಯಾಕೇಜ್ ಅನ್ನು ಘೋಷಿಸಬೇಕು’ ಎಂದು ಹೋರಾಟಗಾರರು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ, ನಾವು ದೆಹಲಿಯನ್ನು ಮುಟ್ಟಿಬರಲು ಹೋಗುತ್ತಿಲ್ಲ. ಹೈಕಮಾಂಡಿನ ಬಾಗಿಲುಗಳನ್ನು ತಟ್ಟಿ ತೆಗೆಸಲು ಹೊರಟಿದ್ದೇವೆ. ದೆಹಲಿಯಲ್ಲಿ ಮೇಲೆ ಉಲ್ಲೇಖಿಸಿರುವ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಷ್ಟ ಪರಿಹಾರ ದೊರಕದೆ ನಾವು ಹಿಂತಿರುಗುವುದಿಲ್ಲ. ಕೆಲದಿನ ದೆಹಲಿಯಲ್ಲೇ ಉಳಿಯಬೇಕಾದರೂ, ಎಐಸಿಸಿ ಕಛೇರಿಯ ಮುಂದೆಯೇ ಬೀಡುಬಿಟ್ಟು ನ್ಯಾಯ ಸಿಗುವ ತನಕ ಕಾಯುತ್ತೇವೆ. ಬೀದಿಯ ಮೇಲೆಯೇ ಬದುಕಿದ ಜನಕ್ಕೆ ಇದು ದೊಡ್ಡ ವಿಚಾರವೇ ಅಲ್ಲ ಎಂಬುದು ತಮಗೂ ಗೊತ್ತಿದೆ. ಇತ್ತ ಕರ್ನಾಟಕ ಸರಕಾರವು ತನ್ನ ಈಗಿನ ನಿಲುವನ್ನು ಪುನಾರವಲೋಕನ ಮಾಡಿಕೊಳ್ಳದೆ. ಇದೇ ತೀರ್ಮಾನದಲ್ಲಿ ಮುಂದುವರೆಯಲು ಬಯಸಿದಲ್ಲಿ ಮತ್ತು ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ನಮ್ಮ ಸಂಘಟನೆಯ ಮೂಲಕ ನ್ಯಾಯಾಲಯದ ಮೊರೆ ಹೋಗಿ ಇಡೀ ಒಳಮೀಸಲಾತಿ ಪ್ರಕ್ರಿಯೆಯ ಮೇಲೆ ತಡೆಯಾಜ್ಞೆ ತರುವುದು ಅನಿವಾರ್ಯವಾಗುತ್ತದೆ. ಅಲ್ಲದೆ ಮುಂದಿನ ಚಳಿಗಾಲದ ಅಧಿವೇಶನಕ್ಕೆ ಕರ್ನಾಟಕದ ಸಮಸ್ತ ಅಲೆಮಾರಿ ಸಮುದಾಯಗಳು ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ. ನಮ್ಮನ್ನು ನಿಷ್ಟೂರ ಸ್ವರೂಪದ ಹೋರಾಟಗಳಿಗೆ ತಳ್ಳಬೇಡಿ ಎಂದು ಮತ್ತೊಮ್ಮೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಲ್ಲದೆ, ಒಂದು ಸಾವಿರ ಅಲೆಮಾರಿ ಸಮುದಾಯಗಳ ಜನ ಭಾಗವಹಿಸಲಿದ್ದಾರೆ. ಜೊತೆಗೆ ಜಿ. ಎನ್. ದೇವಿ, ಸುರೇಶ್ ಮಹಾಲ್‌ ರಂತಹ ಅನೇಕ ಬುದ್ದಿಜೀವಿಗಳು, ದೇಶದ ಮತ್ತು ರಾಜ್ಯದ ಹಲವು ಪ್ರಗತಿ ಚಳುವಳಿಯ ಮುಖಂಡರು ಮತ್ತು ಒಳಮೀಸಲಾತಿ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನಿಡಿದರು.

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...