Homeಕರ್ನಾಟಕಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

- Advertisement -
- Advertisement -

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ತಿಳಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯೋಗದ ವತಿಯಿಂದ ಮೂರು ವಿಚಾರಗಳನ್ನು ಮಂಡಿಸಲಾಗಿದೆ. ಡಾ. ನಾಗಮೋಹನ್‌ದಾಸ್‌ ವರದಿ ಶಿಫಾರಸ್ಸಿನಂತೆ ಎ ಕೆಟಗರಿಯಲ್ಲಿ ಶೇ. 1 ಮೀಸಲಾತಿ ಜಾರಿ ಮಾಡುವುದು, 59 ಅಲೆಮಾರಿ ಜಾತಿಗಳಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪನೆ ಮತ್ತು ದೊಡ್ಡ ಪ್ರಮಾಣದಲ್ಲಿ ಕಡಗಡೆಗಣನೆಗೆ ಒಳಗಾಗಿರುವ ಸಮುದಾಯವನ್ನು ಸಮಗ್ರ ರೀತಿಯಲ್ಲಿ ಮೇಲೆತ್ತುವ ಸಲುವಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬೇಕು ಸಮಿತಿಯ ಸರ್ಕಾರವನ್ನು ಒತ್ತಾಯಿಸಿತು.

ಈಗ ಸೃಷ್ಠಿಯಾಗಿರುವ ಇಕ್ಕಟ್ಟಿಗೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನು ಎನ್ನುವುದರ ಕುರಿತೂ ಸರ್ಕಾರದ ಮುಂದೆ ನಿಯೋಗದ ವತಿಯಿಂದ ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಪರವಾಗಿ ಮುಖಂಡರಾದ ಶೇಷಪ್ಪರ ಮತ್ತು ಅಲೆಮಾರಿ ಸಮುದಾಯಗಳ ಪರವಾಗಿ ಗಟ್ಟಿಯಾಗಿ ನಿಂತು ಹೋರಾಟ ಮಾಡುತ್ತಿರುವ ಸಮಾಜಿಕ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು ವಿಷಯ ಮಂಡಿಸಿದರು.

ಮೂರು ವಿಚಾರಗಳನ್ನು ಕುಲಂಕುಶವಾಗಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌.ಸಿ ಮಹಾದೇವಪ್ಪ, “ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟವನ್ನು ಅಭಿನಂದಿಸಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇಷ್ಟೆಲ್ಲಾ ನಡೆದಿದ್ದರೂ ನೀವು ಬಹಳ ಜವಾಬ್ದಾರಿಯಿಂದ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ, ಸಮಸ್ಯೆನ್ನು ಪರಿಹರಿಸುವ ಸೂಕ್ತ ಮಾರ್ಗೋಪಾಯಗಳನ್ನು ಹುಡುಕಿ ಸರ್ಕಾರಕ್ಕೂ ಸಲಹೆ ಕೊಡುತ್ತಿದ್ದೀರಿ, ನೀವು ಬಹಳ ತಾಳ್ಮೆ ಮತ್ತು ಸಂಯಮದಿಂದ ಈ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ. ಅದಕ್ಕಾಗಿ ಸಮುದಾಯದವರಿಗೂ ಮತ್ತು ಸಮಿತಿಗೂ ಧನ್ಯವಾದಗಳು” ಎಂದರು.

“ನೀವು ಇಟ್ಟಿರುವ ಮೂರೂ ಹಕ್ಕೊತ್ತಾಯಗಳಿಗೆ ನಮ್ಮ ತಾತ್ವಿಕವಾದ ಒಪ್ಪಿಗೆ ಇದೆ. ನೀವು ಹೇಳಿದಹಾಗೆ ಖಂಡಿತವಾಗಿ ಪ್ರತ್ಯೇಕ ನಿಗಮವನ್ನು ಮಾಡಬಹುದು ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬಹುದು; ನೀಡಲೇಬೇಕು ಅದು ನಮ್ಮ ಕರ್ತವ್ಯ ಅದನ್ನು ನಾವು ಖಂಡಿತ ಮಾಡುತ್ತೇವು. ಈಗ ಆಗಿರುವ ಒಳ ಮೀಸಲಾತಿ ವರ್ಗೀಕರಣವೂ ನಾವು ಸಂತಸದಿಂದ ಮಾಡಿದ್ದಲ್ಲ, ಈ ಸಮಸ್ಯೆನ್ನು ಬಗೆಹರಿಸಲು ಒಂದು ಇಕ್ಕಟ್ಟಿನ ಸಂದರ್ಭದಲ್ಲಿ ನಾವು ಮಾಡಿದ ತಾತ್ಕಾಲಿಕ ತೀರ್ಮಾನವಾಗಿತ್ತು. ಅದನ್ನು ಶಾಶ್ವತ ಆಯೋಗದ ಮುಂದೆ ಇಟ್ಟು ಚರ್ಚಿಸಿ ಸೂಕ್ತವಾದ ಬದಲಾವಣೆ ಮಾಡಬೇಕು ಎನ್ನುವುದು ಸರ್ಕಾರದ ನಿಲುವಾಗಿತ್ತು. ಈಗ ನೀವು ಹೇಳಿದಂತೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ವಿಚಾರವನ್ನು ಹೇಗೆ ಬಗೆಹರಿಸಬೇಕು ಎನ್ನುವ ಮಾರ್ಗೋಪಾಯಗಳನ್ನು ಸೂಚಿಸಿದ್ದೀರಿ, ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲು ನಮಗೆ ಸ್ವಲ್ಪ ಕಾಲಾವಕಾಶ ಬೇಕು. ಸರ್ಕಾರದ ಮೇಲೆ ವಿಶ್ವಾಸ ಇಡಿ” ಎಂದು ನಿಯೋಗಕ್ಕೆ ಮನವಿ ಮನಾಡಿದರು.

“ಸರ್ಕಾರದ ನಿಲುವನ್ನು ಸ್ವಾಗತಿಸುತ್ತೇವೆ. ಆದರೆ, ಈ ಕೆಲಸ ಬಹಳ ತ್ವರಿತವಾಗಿ ಆಗಬೇಕು. ಈಗಿರುವ ಬಾಕಿ ಉದ್ಯೋಗಗಳನ್ನು ಭರ್ತಿ ಮಾಡಿ ನಂತರದಲ್ಲಿ ಇದನ್ನು ಜಾರಿ ಮಾಡಿದರೆ ಇದಕ್ಕೆ ಅರ್ಥ ಬರುವುದಿಲ್ಲ. ಇರುವ ಉದ್ಯೋಗಗಳು ಖಾಲಿಯಾಗಿರುತ್ತದೆ ಆಗ ಸಮುದಾಯಕ್ಕೆ ಏನು ಸಿಗುವುದಿಲ್ಲ. ಒಳಮೀಸಲಾತಿ ಜಾರಿಗೊಳಿಸುವುದಕ್ಕಿಂತ ಮೊದಲು ಅಲೆಮಾರಿಗಳಿಗೆ ಶೇ.1 ಮೀಸಲಾತಿ ಸಿಗಬೇಕು” ಎಂದು ನಿಯೋಗ ವಾದವನ್ನು ಸಿಎಂ ಮುಂದಿಟ್ಟರು.

ಸಭೆಯಲ್ಲಿ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, “ಖಂಡಿತವಾಗಿಯೂ ನಿಮ್ಮ ಆತಂಕವನ್ನು ಗಮನದಲ್ಲಿಟ್ಟುಕೊಂಡು ರೆಕ್ರ್ಯೂಟ್ಮೆಂಟ್ ಆಗೋದಕ್ಕಿಂತ ಮೊದಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ” ಎಂದರು.

ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿಗಳು, “ದಯವಿಟ್ಟು ಸರ್ಕಾರದ ಮೇಲೆ ವಿಶ್ವಾಸ ಇಡಿ, ಹೈಕೋರ್ಟ್ ನಲ್ಲಿ ಹಾಕಿರುವ ಮೊಕದ್ದಮೆ ವಾಪಸ್ ಪಡೆದುಕೊಳ್ಳಿ, ನಾವು ಖಂಡಿತವಾಗಿಯೂ ಸಮುದಾಯವನ್ನು ಕೈ ಬಿಡದೆ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.

“ನಾವು ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಆದರೆ ಸರ್ಕಾರದಿಂದ ನಮಗೆ ಸ್ಪಷ್ಟವಾದ ಖಚಿತವಾದ ಆದೇಶ ಬರಬೇಕು. ಅಲ್ಲಿಯತನಕ ನೀವು ಯಾವುದೇ ರೀತಿಯ ಉದ್ಯೋಗ ಭರ್ತಿ ಮಾಡಬಾರದು” ಎಂದು ಹೋರಾಟಗಾರರು ತಿಳಿಸಿದರು.

ಕೋರ್ಟಿನಲ್ಲಿ ಈ ಪ್ರಕರಣವನ್ನು ಹಿಂಪಡೆದುಕೊಳ್ಳಬೇಕಾ? ಎಂದು ಚರ್ಚೆ ಮಾಡುವುದಕ್ಕೆ ಸಮಿತಿ ನಮ್ಮ ಸಂಬಂಧ ಪಟ್ಟ ವಕೀಲರು ಮತ್ತು ಸರ್ಕಾರಿ ವಕೀಲರು ಇವರಿಬ್ಬರ ಮಧ್ಯೆ ಸಮಲೋಚನೆ ಮಾಡಿ ಮ್ಯೂಚುಯಲ್ ಕಮಿಟ್ಮೆಂಟ್ ಮೇಲೆ ಈ ಸಮಸ್ಯೆಯನ್ನು ಶೇಕಡ ಒಂದರಷ್ಟು ಮೀಸಲಾತಿ ಕೊಡುವುದು ಜಾರಿಯಾಗಬೇಕು. ಮತ್ತೊಂದು ಕಡೆ ಕಾನೂನು ತೊಡಕನ್ನು ನಿವಾರಣೆ ಮಾಡಬೇಕು. ಅದಕ್ಕೆ ಇರುವಂತಹ ಸರಿಯಾದ ಮಾರ್ಗವೇನು? ಎನ್ನುವುದರ ಬಗ್ಗೆ ಸರ್ಕಾರಿ ವಕೀಲರ ಜೊತೆಗೂ ಚರ್ಚೆ ಮಾಡಿ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿ ತೀರ್ಮಾನ ಮಾಡಿದೆ.

ಒಟ್ಟಿನಲ್ಲಿ ಇದು ಅಲೆಮಾರಿ ಸಮುದಾಯಕ್ಕೆ ದಕ್ಕ ಅತಿ ದೊಡ್ಡ ವಿಜಯವಾಗಿದೆ. ಚದುರು ಹೋಗಿದ್ದ ಸಮುದಾಯ ಒಟ್ಟುಗೂಡಿ ದೊಡ್ಡ ಹೋರಾಟ ಮಾಡಿ, ಡೆಲ್ಲಿ ತನಕ ಹೋಗಿ ಮತ್ತೆ ಬಂದು ಸರ್ಕಾರಕ್ಕೆ ಮನವರಿಕೆ ಮಾಡುವುದರಲ್ಲಿ ಸಮುದಾಯ ಯಶಸ್ವಿಗೊಂಡಿದೆ. ಇದಕ್ಕಾಗಿ ದುಡಿದ ಸಮುದಾಯದ ಎಲ್ಲರಿಗೂ, ಸಮುದಾಯದ ಪರವಾಗಿ ಕೆಲಸ ಮಾಡಿದ ಇತರೆ ಒಳ ಮೀಸಲಾತಿ ಹೋರಾಟಗಾರರಿಗೂ, ಜನಪರ ಚಿಂತಕರಿಗೂ, ಕಲಾವಿದರು ಸಾಹಿತಿಗರಿಗೂ, ಮಾಧ್ಯಮದವರಿಗೂ ವಿಶೇಷ ಧನ್ಯವಾದಗಳನ್ನು ಹೇಳಬಯಸುತ್ತದೆ ಅಲೆಮಾರಿ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ಇದರ ಮೂಲಕ ಫ್ರೀಡಂಪಾರ್ಕನಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತೇವೆ. ಸರಕಾರ ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿಯನ್ನು ಪ್ರಾರಂಭ ಮಾಡುವುದಕ್ಕೂ ಮೊದಲು ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತದೆಂದು ನಂಬುತ್ತೇವೆ. ಕನಿಷ್ಠ ಚಳಿಗಾಳಿ ಅಧಿವೇಶನಕ್ಕಿಂದ ಮೊದಲು ಈ ಸಮಸ್ಯೆಗೆ ಸರ್ಕಾರ ಪರಿಹಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ನಮ್ಮ ನಿರೀಕ್ಷೆಗೂ ಮೀರಿ ಮತ್ತೆ ನಮ್ಮ ಸಮಸ್ಯೆ ಬಗೆಹರಿಸದೆ ಉದ್ಯೋಗ ಬರ್ತಿ ಮಾಡಲು ಸರ್ಕಾರ ಮುಂದಾದರೆ ಖಂಡಿತವಾಗಿಯೂ ನಮ್ಮ ಹಕ್ಕಿಗಾಗಿ ನಮ್ಮ ಸಮುದಾಯ ಮತ್ತೆ ಬೇದಿಗೆ ಇಳಿಯುವುದು ಖಚಿತವೆಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ.

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...