Homeಕರ್ನಾಟಕಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

- Advertisement -
- Advertisement -

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ತಿಳಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯೋಗದ ವತಿಯಿಂದ ಮೂರು ವಿಚಾರಗಳನ್ನು ಮಂಡಿಸಲಾಗಿದೆ. ಡಾ. ನಾಗಮೋಹನ್‌ದಾಸ್‌ ವರದಿ ಶಿಫಾರಸ್ಸಿನಂತೆ ಎ ಕೆಟಗರಿಯಲ್ಲಿ ಶೇ. 1 ಮೀಸಲಾತಿ ಜಾರಿ ಮಾಡುವುದು, 59 ಅಲೆಮಾರಿ ಜಾತಿಗಳಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪನೆ ಮತ್ತು ದೊಡ್ಡ ಪ್ರಮಾಣದಲ್ಲಿ ಕಡಗಡೆಗಣನೆಗೆ ಒಳಗಾಗಿರುವ ಸಮುದಾಯವನ್ನು ಸಮಗ್ರ ರೀತಿಯಲ್ಲಿ ಮೇಲೆತ್ತುವ ಸಲುವಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬೇಕು ಸಮಿತಿಯ ಸರ್ಕಾರವನ್ನು ಒತ್ತಾಯಿಸಿತು.

ಈಗ ಸೃಷ್ಠಿಯಾಗಿರುವ ಇಕ್ಕಟ್ಟಿಗೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನು ಎನ್ನುವುದರ ಕುರಿತೂ ಸರ್ಕಾರದ ಮುಂದೆ ನಿಯೋಗದ ವತಿಯಿಂದ ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಪರವಾಗಿ ಮುಖಂಡರಾದ ಶೇಷಪ್ಪರ ಮತ್ತು ಅಲೆಮಾರಿ ಸಮುದಾಯಗಳ ಪರವಾಗಿ ಗಟ್ಟಿಯಾಗಿ ನಿಂತು ಹೋರಾಟ ಮಾಡುತ್ತಿರುವ ಸಮಾಜಿಕ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು ವಿಷಯ ಮಂಡಿಸಿದರು.

ಮೂರು ವಿಚಾರಗಳನ್ನು ಕುಲಂಕುಶವಾಗಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌.ಸಿ ಮಹಾದೇವಪ್ಪ, “ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟವನ್ನು ಅಭಿನಂದಿಸಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇಷ್ಟೆಲ್ಲಾ ನಡೆದಿದ್ದರೂ ನೀವು ಬಹಳ ಜವಾಬ್ದಾರಿಯಿಂದ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ, ಸಮಸ್ಯೆನ್ನು ಪರಿಹರಿಸುವ ಸೂಕ್ತ ಮಾರ್ಗೋಪಾಯಗಳನ್ನು ಹುಡುಕಿ ಸರ್ಕಾರಕ್ಕೂ ಸಲಹೆ ಕೊಡುತ್ತಿದ್ದೀರಿ, ನೀವು ಬಹಳ ತಾಳ್ಮೆ ಮತ್ತು ಸಂಯಮದಿಂದ ಈ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ. ಅದಕ್ಕಾಗಿ ಸಮುದಾಯದವರಿಗೂ ಮತ್ತು ಸಮಿತಿಗೂ ಧನ್ಯವಾದಗಳು” ಎಂದರು.

“ನೀವು ಇಟ್ಟಿರುವ ಮೂರೂ ಹಕ್ಕೊತ್ತಾಯಗಳಿಗೆ ನಮ್ಮ ತಾತ್ವಿಕವಾದ ಒಪ್ಪಿಗೆ ಇದೆ. ನೀವು ಹೇಳಿದಹಾಗೆ ಖಂಡಿತವಾಗಿ ಪ್ರತ್ಯೇಕ ನಿಗಮವನ್ನು ಮಾಡಬಹುದು ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬಹುದು; ನೀಡಲೇಬೇಕು ಅದು ನಮ್ಮ ಕರ್ತವ್ಯ ಅದನ್ನು ನಾವು ಖಂಡಿತ ಮಾಡುತ್ತೇವು. ಈಗ ಆಗಿರುವ ಒಳ ಮೀಸಲಾತಿ ವರ್ಗೀಕರಣವೂ ನಾವು ಸಂತಸದಿಂದ ಮಾಡಿದ್ದಲ್ಲ, ಈ ಸಮಸ್ಯೆನ್ನು ಬಗೆಹರಿಸಲು ಒಂದು ಇಕ್ಕಟ್ಟಿನ ಸಂದರ್ಭದಲ್ಲಿ ನಾವು ಮಾಡಿದ ತಾತ್ಕಾಲಿಕ ತೀರ್ಮಾನವಾಗಿತ್ತು. ಅದನ್ನು ಶಾಶ್ವತ ಆಯೋಗದ ಮುಂದೆ ಇಟ್ಟು ಚರ್ಚಿಸಿ ಸೂಕ್ತವಾದ ಬದಲಾವಣೆ ಮಾಡಬೇಕು ಎನ್ನುವುದು ಸರ್ಕಾರದ ನಿಲುವಾಗಿತ್ತು. ಈಗ ನೀವು ಹೇಳಿದಂತೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ವಿಚಾರವನ್ನು ಹೇಗೆ ಬಗೆಹರಿಸಬೇಕು ಎನ್ನುವ ಮಾರ್ಗೋಪಾಯಗಳನ್ನು ಸೂಚಿಸಿದ್ದೀರಿ, ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲು ನಮಗೆ ಸ್ವಲ್ಪ ಕಾಲಾವಕಾಶ ಬೇಕು. ಸರ್ಕಾರದ ಮೇಲೆ ವಿಶ್ವಾಸ ಇಡಿ” ಎಂದು ನಿಯೋಗಕ್ಕೆ ಮನವಿ ಮನಾಡಿದರು.

“ಸರ್ಕಾರದ ನಿಲುವನ್ನು ಸ್ವಾಗತಿಸುತ್ತೇವೆ. ಆದರೆ, ಈ ಕೆಲಸ ಬಹಳ ತ್ವರಿತವಾಗಿ ಆಗಬೇಕು. ಈಗಿರುವ ಬಾಕಿ ಉದ್ಯೋಗಗಳನ್ನು ಭರ್ತಿ ಮಾಡಿ ನಂತರದಲ್ಲಿ ಇದನ್ನು ಜಾರಿ ಮಾಡಿದರೆ ಇದಕ್ಕೆ ಅರ್ಥ ಬರುವುದಿಲ್ಲ. ಇರುವ ಉದ್ಯೋಗಗಳು ಖಾಲಿಯಾಗಿರುತ್ತದೆ ಆಗ ಸಮುದಾಯಕ್ಕೆ ಏನು ಸಿಗುವುದಿಲ್ಲ. ಒಳಮೀಸಲಾತಿ ಜಾರಿಗೊಳಿಸುವುದಕ್ಕಿಂತ ಮೊದಲು ಅಲೆಮಾರಿಗಳಿಗೆ ಶೇ.1 ಮೀಸಲಾತಿ ಸಿಗಬೇಕು” ಎಂದು ನಿಯೋಗ ವಾದವನ್ನು ಸಿಎಂ ಮುಂದಿಟ್ಟರು.

ಸಭೆಯಲ್ಲಿ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, “ಖಂಡಿತವಾಗಿಯೂ ನಿಮ್ಮ ಆತಂಕವನ್ನು ಗಮನದಲ್ಲಿಟ್ಟುಕೊಂಡು ರೆಕ್ರ್ಯೂಟ್ಮೆಂಟ್ ಆಗೋದಕ್ಕಿಂತ ಮೊದಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ” ಎಂದರು.

ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿಗಳು, “ದಯವಿಟ್ಟು ಸರ್ಕಾರದ ಮೇಲೆ ವಿಶ್ವಾಸ ಇಡಿ, ಹೈಕೋರ್ಟ್ ನಲ್ಲಿ ಹಾಕಿರುವ ಮೊಕದ್ದಮೆ ವಾಪಸ್ ಪಡೆದುಕೊಳ್ಳಿ, ನಾವು ಖಂಡಿತವಾಗಿಯೂ ಸಮುದಾಯವನ್ನು ಕೈ ಬಿಡದೆ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.

“ನಾವು ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಆದರೆ ಸರ್ಕಾರದಿಂದ ನಮಗೆ ಸ್ಪಷ್ಟವಾದ ಖಚಿತವಾದ ಆದೇಶ ಬರಬೇಕು. ಅಲ್ಲಿಯತನಕ ನೀವು ಯಾವುದೇ ರೀತಿಯ ಉದ್ಯೋಗ ಭರ್ತಿ ಮಾಡಬಾರದು” ಎಂದು ಹೋರಾಟಗಾರರು ತಿಳಿಸಿದರು.

ಕೋರ್ಟಿನಲ್ಲಿ ಈ ಪ್ರಕರಣವನ್ನು ಹಿಂಪಡೆದುಕೊಳ್ಳಬೇಕಾ? ಎಂದು ಚರ್ಚೆ ಮಾಡುವುದಕ್ಕೆ ಸಮಿತಿ ನಮ್ಮ ಸಂಬಂಧ ಪಟ್ಟ ವಕೀಲರು ಮತ್ತು ಸರ್ಕಾರಿ ವಕೀಲರು ಇವರಿಬ್ಬರ ಮಧ್ಯೆ ಸಮಲೋಚನೆ ಮಾಡಿ ಮ್ಯೂಚುಯಲ್ ಕಮಿಟ್ಮೆಂಟ್ ಮೇಲೆ ಈ ಸಮಸ್ಯೆಯನ್ನು ಶೇಕಡ ಒಂದರಷ್ಟು ಮೀಸಲಾತಿ ಕೊಡುವುದು ಜಾರಿಯಾಗಬೇಕು. ಮತ್ತೊಂದು ಕಡೆ ಕಾನೂನು ತೊಡಕನ್ನು ನಿವಾರಣೆ ಮಾಡಬೇಕು. ಅದಕ್ಕೆ ಇರುವಂತಹ ಸರಿಯಾದ ಮಾರ್ಗವೇನು? ಎನ್ನುವುದರ ಬಗ್ಗೆ ಸರ್ಕಾರಿ ವಕೀಲರ ಜೊತೆಗೂ ಚರ್ಚೆ ಮಾಡಿ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿ ತೀರ್ಮಾನ ಮಾಡಿದೆ.

ಒಟ್ಟಿನಲ್ಲಿ ಇದು ಅಲೆಮಾರಿ ಸಮುದಾಯಕ್ಕೆ ದಕ್ಕ ಅತಿ ದೊಡ್ಡ ವಿಜಯವಾಗಿದೆ. ಚದುರು ಹೋಗಿದ್ದ ಸಮುದಾಯ ಒಟ್ಟುಗೂಡಿ ದೊಡ್ಡ ಹೋರಾಟ ಮಾಡಿ, ಡೆಲ್ಲಿ ತನಕ ಹೋಗಿ ಮತ್ತೆ ಬಂದು ಸರ್ಕಾರಕ್ಕೆ ಮನವರಿಕೆ ಮಾಡುವುದರಲ್ಲಿ ಸಮುದಾಯ ಯಶಸ್ವಿಗೊಂಡಿದೆ. ಇದಕ್ಕಾಗಿ ದುಡಿದ ಸಮುದಾಯದ ಎಲ್ಲರಿಗೂ, ಸಮುದಾಯದ ಪರವಾಗಿ ಕೆಲಸ ಮಾಡಿದ ಇತರೆ ಒಳ ಮೀಸಲಾತಿ ಹೋರಾಟಗಾರರಿಗೂ, ಜನಪರ ಚಿಂತಕರಿಗೂ, ಕಲಾವಿದರು ಸಾಹಿತಿಗರಿಗೂ, ಮಾಧ್ಯಮದವರಿಗೂ ವಿಶೇಷ ಧನ್ಯವಾದಗಳನ್ನು ಹೇಳಬಯಸುತ್ತದೆ ಅಲೆಮಾರಿ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ಇದರ ಮೂಲಕ ಫ್ರೀಡಂಪಾರ್ಕನಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತೇವೆ. ಸರಕಾರ ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿಯನ್ನು ಪ್ರಾರಂಭ ಮಾಡುವುದಕ್ಕೂ ಮೊದಲು ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತದೆಂದು ನಂಬುತ್ತೇವೆ. ಕನಿಷ್ಠ ಚಳಿಗಾಳಿ ಅಧಿವೇಶನಕ್ಕಿಂದ ಮೊದಲು ಈ ಸಮಸ್ಯೆಗೆ ಸರ್ಕಾರ ಪರಿಹಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ನಮ್ಮ ನಿರೀಕ್ಷೆಗೂ ಮೀರಿ ಮತ್ತೆ ನಮ್ಮ ಸಮಸ್ಯೆ ಬಗೆಹರಿಸದೆ ಉದ್ಯೋಗ ಬರ್ತಿ ಮಾಡಲು ಸರ್ಕಾರ ಮುಂದಾದರೆ ಖಂಡಿತವಾಗಿಯೂ ನಮ್ಮ ಹಕ್ಕಿಗಾಗಿ ನಮ್ಮ ಸಮುದಾಯ ಮತ್ತೆ ಬೇದಿಗೆ ಇಳಿಯುವುದು ಖಚಿತವೆಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ.

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...