Homeಕರ್ನಾಟಕಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

ಅಲೆಮಾರಿಗಳ ಮೀಸಲಾತಿ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಕಾರಾತ್ಮಕ ಭರವಸೆ

- Advertisement -
- Advertisement -

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ತಿಳಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯೋಗದ ವತಿಯಿಂದ ಮೂರು ವಿಚಾರಗಳನ್ನು ಮಂಡಿಸಲಾಗಿದೆ. ಡಾ. ನಾಗಮೋಹನ್‌ದಾಸ್‌ ವರದಿ ಶಿಫಾರಸ್ಸಿನಂತೆ ಎ ಕೆಟಗರಿಯಲ್ಲಿ ಶೇ. 1 ಮೀಸಲಾತಿ ಜಾರಿ ಮಾಡುವುದು, 59 ಅಲೆಮಾರಿ ಜಾತಿಗಳಿಗೆ ಪ್ರತ್ಯೇಕ ನಿಗಮವನ್ನು ಸ್ಥಾಪನೆ ಮತ್ತು ದೊಡ್ಡ ಪ್ರಮಾಣದಲ್ಲಿ ಕಡಗಡೆಗಣನೆಗೆ ಒಳಗಾಗಿರುವ ಸಮುದಾಯವನ್ನು ಸಮಗ್ರ ರೀತಿಯಲ್ಲಿ ಮೇಲೆತ್ತುವ ಸಲುವಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬೇಕು ಸಮಿತಿಯ ಸರ್ಕಾರವನ್ನು ಒತ್ತಾಯಿಸಿತು.

ಈಗ ಸೃಷ್ಠಿಯಾಗಿರುವ ಇಕ್ಕಟ್ಟಿಗೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನು ಎನ್ನುವುದರ ಕುರಿತೂ ಸರ್ಕಾರದ ಮುಂದೆ ನಿಯೋಗದ ವತಿಯಿಂದ ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಪರವಾಗಿ ಮುಖಂಡರಾದ ಶೇಷಪ್ಪರ ಮತ್ತು ಅಲೆಮಾರಿ ಸಮುದಾಯಗಳ ಪರವಾಗಿ ಗಟ್ಟಿಯಾಗಿ ನಿಂತು ಹೋರಾಟ ಮಾಡುತ್ತಿರುವ ಸಮಾಜಿಕ ಹೋರಾಟಗಾರರಾದ ನೂರ್‌ ಶ್ರೀಧರ್‌ ಅವರು ವಿಷಯ ಮಂಡಿಸಿದರು.

ಮೂರು ವಿಚಾರಗಳನ್ನು ಕುಲಂಕುಶವಾಗಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌.ಸಿ ಮಹಾದೇವಪ್ಪ, “ಅಸ್ಫೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟವನ್ನು ಅಭಿನಂದಿಸಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇಷ್ಟೆಲ್ಲಾ ನಡೆದಿದ್ದರೂ ನೀವು ಬಹಳ ಜವಾಬ್ದಾರಿಯಿಂದ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ, ಸಮಸ್ಯೆನ್ನು ಪರಿಹರಿಸುವ ಸೂಕ್ತ ಮಾರ್ಗೋಪಾಯಗಳನ್ನು ಹುಡುಕಿ ಸರ್ಕಾರಕ್ಕೂ ಸಲಹೆ ಕೊಡುತ್ತಿದ್ದೀರಿ, ನೀವು ಬಹಳ ತಾಳ್ಮೆ ಮತ್ತು ಸಂಯಮದಿಂದ ಈ ಹೋರಾಟವನ್ನು ನಡೆಸಿಕೊಂಡು ಬಂದಿದ್ದೀರಿ. ಅದಕ್ಕಾಗಿ ಸಮುದಾಯದವರಿಗೂ ಮತ್ತು ಸಮಿತಿಗೂ ಧನ್ಯವಾದಗಳು” ಎಂದರು.

“ನೀವು ಇಟ್ಟಿರುವ ಮೂರೂ ಹಕ್ಕೊತ್ತಾಯಗಳಿಗೆ ನಮ್ಮ ತಾತ್ವಿಕವಾದ ಒಪ್ಪಿಗೆ ಇದೆ. ನೀವು ಹೇಳಿದಹಾಗೆ ಖಂಡಿತವಾಗಿ ಪ್ರತ್ಯೇಕ ನಿಗಮವನ್ನು ಮಾಡಬಹುದು ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ನೀಡಬಹುದು; ನೀಡಲೇಬೇಕು ಅದು ನಮ್ಮ ಕರ್ತವ್ಯ ಅದನ್ನು ನಾವು ಖಂಡಿತ ಮಾಡುತ್ತೇವು. ಈಗ ಆಗಿರುವ ಒಳ ಮೀಸಲಾತಿ ವರ್ಗೀಕರಣವೂ ನಾವು ಸಂತಸದಿಂದ ಮಾಡಿದ್ದಲ್ಲ, ಈ ಸಮಸ್ಯೆನ್ನು ಬಗೆಹರಿಸಲು ಒಂದು ಇಕ್ಕಟ್ಟಿನ ಸಂದರ್ಭದಲ್ಲಿ ನಾವು ಮಾಡಿದ ತಾತ್ಕಾಲಿಕ ತೀರ್ಮಾನವಾಗಿತ್ತು. ಅದನ್ನು ಶಾಶ್ವತ ಆಯೋಗದ ಮುಂದೆ ಇಟ್ಟು ಚರ್ಚಿಸಿ ಸೂಕ್ತವಾದ ಬದಲಾವಣೆ ಮಾಡಬೇಕು ಎನ್ನುವುದು ಸರ್ಕಾರದ ನಿಲುವಾಗಿತ್ತು. ಈಗ ನೀವು ಹೇಳಿದಂತೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ವಿಚಾರವನ್ನು ಹೇಗೆ ಬಗೆಹರಿಸಬೇಕು ಎನ್ನುವ ಮಾರ್ಗೋಪಾಯಗಳನ್ನು ಸೂಚಿಸಿದ್ದೀರಿ, ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲು ನಮಗೆ ಸ್ವಲ್ಪ ಕಾಲಾವಕಾಶ ಬೇಕು. ಸರ್ಕಾರದ ಮೇಲೆ ವಿಶ್ವಾಸ ಇಡಿ” ಎಂದು ನಿಯೋಗಕ್ಕೆ ಮನವಿ ಮನಾಡಿದರು.

“ಸರ್ಕಾರದ ನಿಲುವನ್ನು ಸ್ವಾಗತಿಸುತ್ತೇವೆ. ಆದರೆ, ಈ ಕೆಲಸ ಬಹಳ ತ್ವರಿತವಾಗಿ ಆಗಬೇಕು. ಈಗಿರುವ ಬಾಕಿ ಉದ್ಯೋಗಗಳನ್ನು ಭರ್ತಿ ಮಾಡಿ ನಂತರದಲ್ಲಿ ಇದನ್ನು ಜಾರಿ ಮಾಡಿದರೆ ಇದಕ್ಕೆ ಅರ್ಥ ಬರುವುದಿಲ್ಲ. ಇರುವ ಉದ್ಯೋಗಗಳು ಖಾಲಿಯಾಗಿರುತ್ತದೆ ಆಗ ಸಮುದಾಯಕ್ಕೆ ಏನು ಸಿಗುವುದಿಲ್ಲ. ಒಳಮೀಸಲಾತಿ ಜಾರಿಗೊಳಿಸುವುದಕ್ಕಿಂತ ಮೊದಲು ಅಲೆಮಾರಿಗಳಿಗೆ ಶೇ.1 ಮೀಸಲಾತಿ ಸಿಗಬೇಕು” ಎಂದು ನಿಯೋಗ ವಾದವನ್ನು ಸಿಎಂ ಮುಂದಿಟ್ಟರು.

ಸಭೆಯಲ್ಲಿ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, “ಖಂಡಿತವಾಗಿಯೂ ನಿಮ್ಮ ಆತಂಕವನ್ನು ಗಮನದಲ್ಲಿಟ್ಟುಕೊಂಡು ರೆಕ್ರ್ಯೂಟ್ಮೆಂಟ್ ಆಗೋದಕ್ಕಿಂತ ಮೊದಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ” ಎಂದರು.

ಮತ್ತೊಮ್ಮೆ ಮಾತನಾಡಿದ ಮುಖ್ಯಮಂತ್ರಿಗಳು, “ದಯವಿಟ್ಟು ಸರ್ಕಾರದ ಮೇಲೆ ವಿಶ್ವಾಸ ಇಡಿ, ಹೈಕೋರ್ಟ್ ನಲ್ಲಿ ಹಾಕಿರುವ ಮೊಕದ್ದಮೆ ವಾಪಸ್ ಪಡೆದುಕೊಳ್ಳಿ, ನಾವು ಖಂಡಿತವಾಗಿಯೂ ಸಮುದಾಯವನ್ನು ಕೈ ಬಿಡದೆ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.

“ನಾವು ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಆದರೆ ಸರ್ಕಾರದಿಂದ ನಮಗೆ ಸ್ಪಷ್ಟವಾದ ಖಚಿತವಾದ ಆದೇಶ ಬರಬೇಕು. ಅಲ್ಲಿಯತನಕ ನೀವು ಯಾವುದೇ ರೀತಿಯ ಉದ್ಯೋಗ ಭರ್ತಿ ಮಾಡಬಾರದು” ಎಂದು ಹೋರಾಟಗಾರರು ತಿಳಿಸಿದರು.

ಕೋರ್ಟಿನಲ್ಲಿ ಈ ಪ್ರಕರಣವನ್ನು ಹಿಂಪಡೆದುಕೊಳ್ಳಬೇಕಾ? ಎಂದು ಚರ್ಚೆ ಮಾಡುವುದಕ್ಕೆ ಸಮಿತಿ ನಮ್ಮ ಸಂಬಂಧ ಪಟ್ಟ ವಕೀಲರು ಮತ್ತು ಸರ್ಕಾರಿ ವಕೀಲರು ಇವರಿಬ್ಬರ ಮಧ್ಯೆ ಸಮಲೋಚನೆ ಮಾಡಿ ಮ್ಯೂಚುಯಲ್ ಕಮಿಟ್ಮೆಂಟ್ ಮೇಲೆ ಈ ಸಮಸ್ಯೆಯನ್ನು ಶೇಕಡ ಒಂದರಷ್ಟು ಮೀಸಲಾತಿ ಕೊಡುವುದು ಜಾರಿಯಾಗಬೇಕು. ಮತ್ತೊಂದು ಕಡೆ ಕಾನೂನು ತೊಡಕನ್ನು ನಿವಾರಣೆ ಮಾಡಬೇಕು. ಅದಕ್ಕೆ ಇರುವಂತಹ ಸರಿಯಾದ ಮಾರ್ಗವೇನು? ಎನ್ನುವುದರ ಬಗ್ಗೆ ಸರ್ಕಾರಿ ವಕೀಲರ ಜೊತೆಗೂ ಚರ್ಚೆ ಮಾಡಿ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿ ತೀರ್ಮಾನ ಮಾಡಿದೆ.

ಒಟ್ಟಿನಲ್ಲಿ ಇದು ಅಲೆಮಾರಿ ಸಮುದಾಯಕ್ಕೆ ದಕ್ಕ ಅತಿ ದೊಡ್ಡ ವಿಜಯವಾಗಿದೆ. ಚದುರು ಹೋಗಿದ್ದ ಸಮುದಾಯ ಒಟ್ಟುಗೂಡಿ ದೊಡ್ಡ ಹೋರಾಟ ಮಾಡಿ, ಡೆಲ್ಲಿ ತನಕ ಹೋಗಿ ಮತ್ತೆ ಬಂದು ಸರ್ಕಾರಕ್ಕೆ ಮನವರಿಕೆ ಮಾಡುವುದರಲ್ಲಿ ಸಮುದಾಯ ಯಶಸ್ವಿಗೊಂಡಿದೆ. ಇದಕ್ಕಾಗಿ ದುಡಿದ ಸಮುದಾಯದ ಎಲ್ಲರಿಗೂ, ಸಮುದಾಯದ ಪರವಾಗಿ ಕೆಲಸ ಮಾಡಿದ ಇತರೆ ಒಳ ಮೀಸಲಾತಿ ಹೋರಾಟಗಾರರಿಗೂ, ಜನಪರ ಚಿಂತಕರಿಗೂ, ಕಲಾವಿದರು ಸಾಹಿತಿಗರಿಗೂ, ಮಾಧ್ಯಮದವರಿಗೂ ವಿಶೇಷ ಧನ್ಯವಾದಗಳನ್ನು ಹೇಳಬಯಸುತ್ತದೆ ಅಲೆಮಾರಿ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ಇದರ ಮೂಲಕ ಫ್ರೀಡಂಪಾರ್ಕನಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತೇವೆ. ಸರಕಾರ ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿಯನ್ನು ಪ್ರಾರಂಭ ಮಾಡುವುದಕ್ಕೂ ಮೊದಲು ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತದೆಂದು ನಂಬುತ್ತೇವೆ. ಕನಿಷ್ಠ ಚಳಿಗಾಳಿ ಅಧಿವೇಶನಕ್ಕಿಂದ ಮೊದಲು ಈ ಸಮಸ್ಯೆಗೆ ಸರ್ಕಾರ ಪರಿಹಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ನಮ್ಮ ನಿರೀಕ್ಷೆಗೂ ಮೀರಿ ಮತ್ತೆ ನಮ್ಮ ಸಮಸ್ಯೆ ಬಗೆಹರಿಸದೆ ಉದ್ಯೋಗ ಬರ್ತಿ ಮಾಡಲು ಸರ್ಕಾರ ಮುಂದಾದರೆ ಖಂಡಿತವಾಗಿಯೂ ನಮ್ಮ ಹಕ್ಕಿಗಾಗಿ ನಮ್ಮ ಸಮುದಾಯ ಮತ್ತೆ ಬೇದಿಗೆ ಇಳಿಯುವುದು ಖಚಿತವೆಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ.

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...