Homeಮುಖಪುಟದೆಹಲಿ ಮುನ್ಸಿಪಲ್ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಹಾಕುವಂತಿಲ್ಲ: ಸುಪ್ರೀಂ ಆದೇಶದಿಂದ ಎಎಪಿಗೆ ಗೆಲುವು

ದೆಹಲಿ ಮುನ್ಸಿಪಲ್ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಹಾಕುವಂತಿಲ್ಲ: ಸುಪ್ರೀಂ ಆದೇಶದಿಂದ ಎಎಪಿಗೆ ಗೆಲುವು

- Advertisement -
- Advertisement -

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಯ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಿದ್ದು, ಆಮ್‌ ಆದ್ಮಿ ಪಕ್ಷಕ್ಕೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ.

ಮೇಯರ್ ಆಯ್ಕೆಗಾಗಿ ಚುನಾವಣೆಯ ದಿನಾಂಕವನ್ನು 24 ಗಂಟೆಗಳ ಒಳಗೆ ಪ್ರಕಟಿಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ಪೀಠವು ಸೂಚಿಸಿದೆ.

ಸ್ಥಳೀಯ ಸಂಸ್ಥೆಯ ಚುನಾವಣೆಗಳು ನಡೆದು ಎರಡು ತಿಂಗಳಾದರೂ ದೆಹಲಿಯ ಮೇಯರ್ ಆಯ್ಕೆಯಾಗಿಲ್ಲ. ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ಬಿಕ್ಕಟ್ಟಿನಿಂದಾಗಿ ಈ ಚುನಾವಣೆ ವಿಳಂಬವಾಗುತ್ತಿದೆ.

ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬಿಜೆಪಿಯನ್ನು ಸೋಲಿಸಿತು. ಬಿಜೆಪಿ ವಶದಲ್ಲಿದ್ದ ಮುನ್ಸಿಪಲ್‌ ಕಾರ್ಪೊರೇಷನ್‌ 15 ವರ್ಷಗಳ ನಂತರ ಆಮ್‌ ಆದ್ಮಿ ವಶವಾಯಿತು. ಆದರೆ ಪೌರಾಯುಕ್ತರನ್ನು ಆಯ್ಕೆ ಮಾಡುವ ಚುನಾವಣೆಯು ಮೂರು ಬಾರಿ ಸ್ಥಗಿತಗೊಂಡಿದೆ. ಮುನ್ಸಿಪಲ್‌ನ ನಾಮನಿರ್ದೇಶಿತ ಸದಸ್ಯರು ಅಥವಾ ಹಿರಿಯರು ಮತ ಚಲಾಯಿಸಬಹುದು ಎಂದು ಅಧ್ಯಕ್ಷೀಯ ಅಧಿಕಾರಿ ಹೇಳಿದ್ದರು.

ಮುನ್ಸಿಪಲ್ ಆಡಳಿತದ ಕುರಿತು ವಿಶೇಷ ಜ್ಞಾನವನ್ನು ಹೊಂದಿರುವ ನಾಮನಿರ್ದೇಶಿತ ಕೌನ್ಸಿಲರ್‌ಗಳು ಸಾರ್ವಜನಿಕರಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳಲ್ಲಿ ಸದನಕ್ಕೆ ಸಹಾಯ ಮಾಡುವ ಕೆಲಸ ಮಾಡುತ್ತಾರೆ. ಅವರನ್ನು ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡುತ್ತಾರೆ.

ಚುನಾವಣೆಯಲ್ಲಿ ಸೋತರೂ ಮುನ್ಸಿಪಲ್‌ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ನಾಮನಿರ್ದೇಶಿತ ಕೌನ್ಸಿಲರ್‌ಗಳು ಬಿಜೆಪಿ ಬೆಂಬಲಿಗರು ಎಂದು ಆರೋಪಿಸಿದೆ. ಆಮ್ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಅವರು ಜನವರಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮೇಯರ್ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸಬೇಕೆಂದು ಕೋರಿದ್ದರು.

ಸಂವಿಧಾನದ 243 ಆರ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆಯ ಸೆಕ್ಷನ್ 3 (3)ರ ಪ್ರಕಾರ ನಾಮನಿರ್ದೇಶನಗೊಂಡ ವ್ಯಕ್ತಿಗಳು ಈ ಸಂದರ್ಭದಲ್ಲಿ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಮೇಯರ್ ಆಯ್ಕೆಯಾದ ನಂತರ ಉಪಮೇಯರ್ ಚುನಾವಣೆಯಲ್ಲಿ ಮೇಯರ್‌ ಅವರೇ ಅಧ್ಯಕ್ಷರಾಗುತ್ತಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬಾರದು ಎಂದು ಒಬೆರಾಯ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದು, “ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು. ನ್ಯಾಯಾಲಯದ ನಿರ್ಧಾರವು ಪ್ರಜಾಪ್ರಭುತ್ವದ ವಿಜಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ಎಲ್‌ಜಿ ಮತ್ತು ಬಿಜೆಪಿಯು ಅಕ್ರಮ, ಅಸಂವಿಧಾನಿಕ ಆದೇಶಗಳನ್ನು ಪ್ರತಿ ದಿನವೂ ಒಪ್ಪಂದ ಮಾಡಿಕೊಳ್ಳುತ್ತಿವೆ ಎಂಬುದು ಸಾಬೀತಾಗಿದೆ” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...