Homeಮುಖಪುಟಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ಇದೇ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವಿದ್ದು, ಆ ದಿನವನ್ನು "ನಿರುದ್ಯೋಗ ದಿನ"ವನ್ನಾಗಿ ಆಚರಿಸಲು ಕರೆ ನೀಡಲಾಗುತ್ತಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯ ಈ ಬಾರಿಯ ಮನ್‌ಕೀ ಬಾತ್‌ನಿಂದ ಶುರುವಾದ ಡಿಸ್‌ಲೈಕ್‌ಗಳ ಸಮರದ ಜೊತೆಗೆ ಇಂದು ಟ್ವೀಟ್ಟರ್‌ನಲ್ಲಿ #NoMoreBJP, #unemploymentday ಭಾರಿ ಟ್ರೇಂಡಿಂಗ್‌ ನಲ್ಲಿದೆ. ಪ್ರಧಾನಿ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಆಡಳಿತದ ನ್ಯೂನತೆಗಳನ್ನು ಟ್ವೀಟ್ಟಿಗರು ಪೋಸ್ಟ್‌ ಮಾಡುತ್ತಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಯುವ ಸಮೂಹ ಬೀದಿಗೆ ಬಂದಿದೆ ಆದರೂ ಪ್ರಧಾನಿ ಮೋದಿ ಯಾವುದೇ ಕ್ರಮ ಕೈಗೊಳ್ಳದೇ ಕೇವಲ ಬೇಡದ ವಿಚಾರಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್

ಬೆಳಗ್ಗೆಯಿಂದಲೇ ’#NoMoreBJP’ ಟ್ರೇಂಡಿಂಗ್‌ ನಲ್ಲಿದ್ದು, ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಪ್ರತಿಭಟನೆ ಮಾಡುತ್ತಿರುವ ಪೋಸ್ಟರ್‌ಗಳು, ಪತ್ರಿಕೆಗಳ ಕಟಿಂಗ್ಸ್‌ಗಳು, ಉದ್ಯೋಗ ನೀಡಿ ಎಂಬ ಮೀಮ್ಸ್‌ಗಳನ್ನು ಹಂಚಿಲಾಗುತ್ತಿದೆ.

ಇದರ ಜೊತೆಗೆ ಬದಲಾವಣೆ ಒಳ್ಳೆಯ ದಿನಗಳನ್ನು ತರುತ್ತದೆ. ನಾವು ಈ ಸರ್ಕಾರವನ್ನೂ ಬದಲಿಸಬೇಕಿದೆ ಎಂಬ ಟ್ವೀಟ್‌ಗಳು ಹರಿದಾಡುತ್ತಿವೆ. ನಿಮ್ಮ ಸುಳ್ಳು ಭರಸವೆಗಳು ಬೇಡ, ನಮಗೆ ಉದ್ಯೋಗ ಬೇಕು. ನಿಮ್ಮ ಹುಟ್ಟುಹಬ್ಬದ ದಿನ ನಿರುದ್ಯೋಗ ದಿನ ಆಚರಿಸುತ್ತವೆ ಎಂದು ಟ್ವೀಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದೇ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವಿದ್ದು, ಆ ದಿನವನ್ನು “ನಿರುದ್ಯೋಗ ದಿನ”ವನ್ನಾಗಿ ಆಚರಿಸಲು ಕರೆ ನೀಡಲಾಗುತ್ತಿದೆ. ಈ ವಾರ ಮೋದಿಯವರ ಹುಟ್ಟುಹಬ್ಬವಿರುವುದರಿಂದ ದೇಶದ ಎಲ್ಲಾ ನಿರುದ್ಯೋಗಿ ಯುವಜನತೆ #unemploymentday ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ “ನಿರುದ್ಯೋಗ ದಿನ” ವನ್ನು ಆಚರಿಸಬೇಕು ಎಂಬ ಟ್ವೀಟ್‌ಗಳು ಕಾಣಿಸುತ್ತಿವೆ.

#NoMoreBJP ಜೊತೆಗೆ #बेरोजगार_सप्ताह, #unemploymentday ಹ್ಯಾಶ್‌ಟ್ಯಾಗ್‌ಗಳು ಇಂದು ಟ್ರೆಂಡ್ ಆಗುತ್ತಲೇ ಇವೆ. ಸೆ.17ರಂದು ನಿರುದ್ಯೋಗ ದಿವಸ ಮಾಡಲು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿದೆ.

ಜಿಡಿಪಿ ಕುಸಿತ, ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ, ನಿರುದ್ಯೋಗ ಸಮಸ್ಯೆ, ಕೊರೊನಾ ನಡುವೆ ನಡೆದ ಜೆಇಇ, ನೀಟ್ ಪ್ರವೇಶ ಪರೀಕ್ಷೆಗಳು,ವಿದ್ಯಾರ್ಥಿಗಳ ಆತ್ಮಹತ್ಯೆಗಳು, ರೈತರ ಆತ್ಮಹತ್ಯೆ, ಪ್ರವಾಹ ಪೀಡಿತ ರಾಜ್ಯಗಳಿಗೆ ಪರಿಹಾರ ನಿಡದಿರುವುದು, ಜಿಎಸ್‌ಟಿಯಲ್ಲಿ ರಾಜ್ಯಗಳ ಪಾಲು ನೀಡದಿರುವುದು ಮೋದಿ ಸರ್ಕಾರದ ವಿರುದ್ಧ ಯುವ ಸಮೂಹ ಸಿಡಿದೆಳಲು ಕಾರಣವಾಗಿದೆ.

ಇವುಗಳ ಜೊತೆಗೆ ಪ್ರಧಾನಿ ಒಂದು ಬಾರಿಯೂ ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ. ಯುವಕರಿಗಾಗಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಬಂದ ಸರ್ಕಾರ ಅದರ ಬದಲಾಗಿ ವಿದ್ಯಾರ್ಥಿಗಳಿಗೆ ಪಕೋಡ ಮಾರಿ, ಚಹಾ ಮಾರಿ ಎಂಬ ಮಾತುಗಳನ್ನು ವಿರೋಧಿಸಿ ಯುವಕರು ತಮ್ಮ ಆಕ್ರೋಶವೆಲ್ಲಾ ಸಾಮಾಜಿಕ ಜಾಲತಾಣಗಳ ಮೂಲಕ ಹೊರಹಾಕುತ್ತಿದ್ದಾರೆ.


ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...