Homeಮುಖಪುಟ‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಆ ಹಲ್ಲೆಯನ್ನು ಸಮರ್ಥಿಸಿಕೊಂಡು ಈ ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ.

- Advertisement -
- Advertisement -

ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ಮಾರ್ಚ್ 20 ಮತ್ತು 21 ರಂದು 150-200 ದೇವಾಲಯಗಳ ಹೊರಭಾಗದಲ್ಲಿ, ‘ಹಿಂದೂಗಳಲ್ಲದವರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ’ ಎಂಬ ಪೋಸ್ಟರ್‌ಗಳನ್ನು ಹಾಕಿದ ಆರೋಪದಲ್ಲಿ ಹಿಂದೂ ಯುವ ವಾಹಿನಿ ಎಂಬ ಬಲಪಂಥೀಯ ಸಂಘಟನೆಯ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ದಾಸ್ನಾ ಊರಿನ ದೇವಸ್ಥಾನವೊಂದರಲ್ಲಿ ನಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಆ ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದ ಈ ಸಂಘಟನೆ ಇತ್ತೀಚೆಗೆ ಈ ಪೋಸ್ಟರ್ ‘ಅಭಿಯಾನ’ ನಡೆಸಲು ನಿರ್ಧರಿಸಿದೆ.

ಕೊಟ್ವಾಲಿಯ ಠಾಣಾಣಾಧಿಕಾರಿ (ಎಸ್‌ಎಚ್‌ಒ) ಶಿಶುಪಾಲ್ ಸಿಂಗ್ ನೇಗಿ ಅವರು ಮಾರ್ಚ್ 21 ರ ಸಂಜೆ ಈ ವಿವಾದಾತ್ಮಕ ಪೋಸ್ಟರ್‌ಗಳನ್ನು ತೆಗೆದುಹಾಕಲು ಸಂಘಟನೆಯ ಸದಸ್ಯರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಅವರ ಸಭೆ ಮುಗಿದ ಕೂಡಲೇ ಹಿಂದೂ ಯುವ ವಾಹಿನಿಯ ಪ್ರಧಾನ ಕಾರ್ಯದರ್ಶಿ ಜೀತು ರಾಂಧವ ದಿ ಕ್ವಿಂಟ್ ವರದಿಗಾರರ ಜೊತೆ ಮಾತನಾಡಿದ್ದು, ‘ನಗರದಲ್ಲಿ ಇಂತಹ ಪೋಸ್ಟರ್‌ಗಳನ್ನು ಹಾಕದಂತೆ ಪೊಲೀಸರು ಬೆದರಿಕೆ ಹಾಕಿದ್ದಾರೆ. ಅವರು ಈ ರೀತಿ ಮುಸ್ಲಿಮರ ಪರವಾಗಿರಲು ಏಕೆ ಪ್ರಯತ್ನಿಸುತ್ತಿದ್ದಾರೆ? ಉತ್ತರಾಖಂಡದಂತಹ ಸ್ಥಳದಲ್ಲಿ ಇದು ನಡೆಯುತ್ತಿದೆ ಎಂದು ನಾನು ನಂಬಲು ಸಾಧ್ಯವಿಲ್ಲ. ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ ನಾನೇನು ಹೆದರುವುದಿಲ್ಲ, ಆದರೆ ಉತ್ತರಾಖಂಡದ ಪ್ರತಿಯೊಂದು ದೇವಾಲಯದ ಹೊರಗೆ ಈ ಪೋಸ್ಟರ್‌ಗಳು ಇರುವುದನ್ನು ನಾನು ಖಚಿತಪಡಿಸಿಕೊಳ್ಳಲಿದ್ದೇನೆ ” ಎಂದು ಅವರು ಕೋಪದಿಂದ ಹೇಳಿದ್ದರು.

ಐಪಿಸಿಯ ಸೆಕ್ಷನ್ 153 ಎ ಅಡಿಯಲ್ಲಿ (ಧರ್ಮ, ಜನಾಂಗ, ಜನ್ಮಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಿಂದೂ ಯುವ ವಾಹಿನಿ ಸದಸ್ಯರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಕ್ವಿಂಟ್ ಎಸ್‌ಎಚ್‌ಒ ನೇಗಿ ಮೂಲಕ ದೃಢಪಡಿಸಿಕೊಂಡಿದೆ.

ದಿ ಕ್ವಿಂಟ್ ಡೆಹ್ರಾಡೂನ್ ಎಸ್‌ಎಸ್‌ಪಿ ಕಚೇರಿಯನ್ನು ಸಂಪರ್ಕಿಸಿ, ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಪ್ರದೀಪ್ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿತ್ತು. ಆಗ ‘ಈ ಪೋಸ್ಟರ್‌ಗಳ ಸುದ್ದಿ ಬೆಳಕಿಗೆ ಬಂದಿದೆ, ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ ಮತ್ತು ಮಾರ್ಚ್ 21 ರ ಮಧ್ಯಾಹ್ನದ ವೇಳೆಗೆ ಹಲವಾರು ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ರಾವತ್ ಹೇಳಿದ್ದರು.

ಎಲ್ಲಾ ಪೋಸ್ಟರ್‌ಗಳನ್ನು ತೆಗೆಯಲಾಗಿದೆಯೆ ಎಂದು ಪುನರ್ ದೃಢಪಡಿಸಿಕೊಳ್ಳಲು ನಾವು ಹಿಂದೂ ಯುವ ವಾಹಿನಿಯ ರಾಂಧವಾ ಅವರಿಗೆ ಕರೆ ಮಾಡಿದೆವು. ಕೆಲವು ಪೋಸ್ಟರ್‌ಗಳನ್ನು ತೆಗೆದಿರುವುದು ನಿಜ, ಆದರೆ ಅನೇಕರು ಪೋಸ್ಟರ್ ಹಾಕುವ ಕೆಲಸ ಮುಂದುವರೆಸಿದ್ದಾರೆ ಎಂದು ಹೇಳಿದರು. “ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ನಾನು ಹೆದರುವುದಿಲ್ಲ, ಪೋಸ್ಟರ್‌ಗಳನ್ನು ತೆಗೆಯದಂತೆ ನಾವು ನೋಡಿಕೊಳ್ಳುತ್ತೇವೆ. ನನ್ನ ಸಮುದಾಯದ ಜನರು ನನ್ನೊಂದಿಗೆ ನಿಲ್ಲುತ್ತಾರೆ, ಇಡೀ ಹಿಂದೂ ಸಮುದಾಯವು ನನ್ನೊಂದಿಗೆ ನಿಲ್ಲುತ್ತದೆ. ನೀವು ನೋಡುತ್ತೀರಿ!’ ಎಂದು ತಿಳಿಸಿದರು.

ಬ್ಯಾನರ್‌ಗಳನ್ನು ಏಕೆ ಹಾಕಲಾಯಿತು? ಇದಕ್ಕೆ ಪ್ರೇರಣೆ ಏನು?

“ಈ ತಾಣವು ಹಿಂದೂಗಳಿಗೆ ಪವಿತ್ರ ಸ್ಥಳವಾಗಿದೆ, ಹಿಂದೂಗಳಲ್ಲದವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ” ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸ್ನಾದ ದೇವಸ್ಥಾನದ ಎದುರು ಅಲ್ಲಿನ ಅರ್ಚಕ ನರಸಿಂಗಾನಂದ ಇಂಥದ್ದೇ ಪೋಸ್ಟರ್ ಹಾಕಿದ್ದಾರೆ. ಇದು 14 ವರ್ಷದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆಗೆ ಕಾರಣವಾಯಿತು. ಈ ಘಟನೆಯ ನಂತರ ಹಿಂದೂ ಯುವ ವಾಹಿನಿ ಸದಸ್ಯರು ಮುಖ್ಯ ಅರ್ಚಕ ನರಸಿಂಗಾನಂದರನ್ನು ಭೇಟಿಯಾಗಿ ಬೆಂಬಲಿಸಿದ್ದರು.

ದೆಹಲಿ ಗಲಭೆ ಮತ್ತು ನರಸಿಂಗಾನಂದ ಸ್ವಾಮಿ

ದೆಹಲಿ ಗಲಭೆಯ ಅಸಲಿ ಪಿತೂರಿಕೋರರು ಭಾಗ 2ರಲ್ಲಿ ನಾನುಗೌರಿ.ಕಾಂ ದಿ ವೈರ್ ಉಲ್ಲೇಖಿಸಿ ಈ ಸ್ವಾಮಿಯ ಪ್ರಚೋದನೆ, ಪಾತ್ರಗಳ ಕುರಿತು ಬರೆದಿತ್ತು. ಈ ವರದಿಯಲ್ಲಿ, ತಾವು ಪೋಸ್ಟರ್ ಹಾಕಲು ನರಸಿಂಗಾನಂದ ಸ್ವಾಮಿಯೇ ಪ್ರೇರಣೆ ಎಂದು ಹಿಂದೂ ಯುವ ವಾಹಿನಿ ಹೇಳಿದೆ. ಯಾರೀತ? ಉತ್ತರಪ್ರದೇಶದ ದಾಸ್ನಾದ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕೆ ಮುಸ್ಲಿಂ ಬಾಲಕನ ಮೇಲೆ ಹಲ್ಲೆ ಮಾಡಲಾಗಿತು. ಆ ದೇವಸ್ಥಾನದ ಪ್ರಧಾನ ಅರ್ಚಕ ಈ ನರಸಿಂಗಾನಂದ ಸ್ವಾಮಿಯೇ. ಈತನಿಗೆ ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಇರುವುದುನ್ನು, ದೆಹಲಿ ಗಲಭೆಗೆ ಕಾರಣವಾದ ಪ್ರಚೋದನಾಕಾರಿ ಭಾಷಣಗಳ ವಿಡಿಯೋಗಳನ್ನು ಈತ ವೈರಲ್ ಮಾಡಿದ್ದನ್ನು ದಿ ವೈರ್ ಸಾಬೀತು ಮಾಡಿತ್ತು. ನಾನುಗೌರಿ ಕೂಡ ಅದನ್ನು ಪ್ರಕಟಿಸಿತ್ತು.

ಮಾರ್ಚ್ 20 ರಂದು ಅಭಿಯಾನ ಪ್ರಾರಂಭವಾಯಿತು ಎಂದು ಹಿಂದೂ ಯುವ ವಾಹಿನಿ ಅಧ್ಯಕ್ಷ 47 ವರ್ಷದ ಗೋವಿಂದ್ ವಾಧ್ವಾ ಹೇಳಿದ್ದಾರೆ. 150-200 ದೇವಾಲಯಗಳಲ್ಲಿ ಸ್ವಯಂಸೇವಕರು ಈಗಾಗಲೇ ಸ್ಥಳೀಯರ ಸಹಾಯದಿಂದ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತು ಮುಂದಿನ ವಾರದಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. “ಕೆಲವೊಮ್ಮೆ ನಮ್ಮ ವಿಗ್ರಹಗಳು ಒಡೆಯಲ್ಪಡುತ್ತವೆ, ಅಥವಾ ಜನರು ಶಿವ ವಿಗ್ರಹಗಳ ಮೇಲೆ ಇಣುಕಿ ನೋಡುತ್ತಾರೆ, ನೀವು ಇದನ್ನೆಲ್ಲಾ ನೋಡಿರಬೇಕು. ಅದು ಪದೇ ಪದೇ ಸಂಭವಿಸುತ್ತದೆ. ಇದನ್ನು ಹಿಂದೂ ಸಮುದಾಯದ ಸದಸ್ಯರು ಎಂದಿಗೂ ಮಾಡುವುದಿಲ್ಲ, ಆದರೆ ಹಿಂದೂಯೇತರರು ಮಾಡುತ್ತಾರೆ. ಅಂತಹ ಹಿಂದೂಯೇತರರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹಿಂದೂಗಳಲ್ಲದವರು ಬರದಂತೆ ಮತ್ತು ದೇವಾಲಯಗಳ ಪಾವಿತ್ರ‍್ಯವು ಅಳಿಯದಂತೆ ನೋಡಿಕೊಳ್ಳಲು ಈ ಬ್ಯಾನರ್‌ಗಳನ್ನು ಹಾಕಿದ್ದೇವೆ’ ಎಂದರು.

ಹಿಂದೂಯೇತರರು ಆಕ್ಷೇಪಾರ್ಹವಾದುದನ್ನು ಮಾಡಿದ್ದಾರೆಯೇ ಮತ್ತು ಅಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿವೆಯೇ ಎಂಬ ಪ್ರಶ್ನೆಗೆ ವಾಧ್ವಾ, “ಇತ್ತೀಚೆಗೆ ಡೆಹ್ರಾಡೂನ್ ಅಥವಾ ಉತ್ತರಾಖಂಡದಲ್ಲಿ ಎಲ್ಲಿಯೂ ಈ ರೀತಿಯ ಪ್ರಕರಣಗಳು ಸಂಭವಿಸಿಲ್ಲ. ಆದರೆ ರಕ್ಷಣೆಯ ಉದ್ದೇಶದಿಂದ ನಾವು ಇದನ್ನು ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ತಪ್ಪು ಮಾಡಿಲ್ಲ” ಎಂದಿದ್ದಾರೆ.

ಡೆಹ್ರಾಡೂನ್‌ನ ದೇವಾಲಯಗಳಿಗಷ್ಟೇ ಇದು ಸಿಮೀತವಲ್ಲ ಎಂದು ವಾಧ್ವಾ ಹೇಳಿದ್ದಾರೆ. “ಉತ್ತರಾಖಂಡದಾದ್ಯಂತದ ನಾಲ್ಕು ಮಹತ್ವದ ದೇವಾಲಯಗಳಲ್ಲಿ ಒಂದೇ ರೀತಿಯ ಪೋಸ್ಟರ್‌ಗಳನ್ನು ಹಾಕುವ ಯೋಜನೆ ನಮ್ಮಲ್ಲಿದೆ. ಇದಕ್ಕಾಗಿ ನಾವು ಒಂದು ಯೋಜನೆಯನ್ನು ರೂಪಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಉತ್ತರಾಖಂಡದ ಸಿಎಂ ಅವರನ್ನು ಭೇಟಿ ಮಾಡಲಿದ್ದೇವೆ ಎನ್ನುವ ಅವರು, ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದ್ರಿನಾಥ್ ನಾಲ್ಕು ಪವಿತ್ರ ಹಿಂದೂ ಕ್ಷೇತ್ರಗಳು ಎಂದು ಉಲ್ಲೇಖಿಸಿದರು.

ಈ ಪೋಸ್ಟರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ಕೇಳಿದಾಗ, “ನನ್ನ ಮನೆಯನ್ನು ರಕ್ಷಿಸಲು ನನಗೆ ಪೊಲೀಸರಿಂದ ಅನುಮತಿ ಬೇಕೇ?” ಎಂದಿದ್ದಾರೆ. ‘ಈ ದೇವಾಲಯಗಳು ಯಾರ ವ್ಯಾಪ್ತಿಗೆ ಬರುತ್ತವೆ, ಅವು ಸರ್ಕಾರಿ ಸ್ವಾಮ್ಯದಲ್ಲಿವೆಯೇ ಅಥವಾ ಖಾಸಗಿ ಟ್ರಸ್ಟ್‌ನವರ ಕೈಯಲ್ಲಿವೆಯೇ?’ ಎಂದು ಕೇಳಿದಾಗ, “ಇದು ಹಿಂದೂ ಸಮುದಾಯದ ಆಸ್ತಿ ಮತ್ತು ಯಾವುದೇ ಒಬ್ಬ ವ್ಯಕ್ತಿಗೆ ಸೇರಿಲ್ಲ. ಇಲ್ಲಿ ಪೋಸ್ಟರ್ ಹಾಕಲು ಯಾವ ಅನುಮತಿಯೂ ಬೇಕಿಲ್ಲ’ ಎಂದಿದ್ದಾರೆ. ಅಲ್ಲದೇ ನಮ್ಮದು 2002 ರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸ್ಥಾಪಿಸಿದ ಹಿಂದೂ ಯುವ ವಾಹಿನಿ ಅಲ್ಲ, ಇದೇ ಬೇರೆ ಎಂದು ವಾಧ್ವಾ ಸ್ಪಷ್ಟಪಡಿಸಿದರು.

ಪಶ್ಚಿಮ ಯುಪಿಯ ದಾಸ್ನಾದಲ್ಲಿ ದೇವಾಲಯದಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸಿದ ನಂತರ, ಬಿಎಸ್ಪಿಯ ಧೌಲಾನಾ ಅಸ್ಲಂ ಚೌಧರಿ ದಾಸ್ನಾದಲ್ಲಿನ ದೇವಾಲಯವು ತನ್ನ ಪೂರ್ವಜರಿಗೆ ಸೇರಿದ್ದು ಮತ್ತು ಆಡಳಿತ ಮಂಡಳಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳಿದ್ದಾರೆ. ಚೌಧರಿ ಹೀಗೆ ಹೇಳಿದ ನಂತರ, ವಾಧ್ವಾ ದಾಸ್ನಾದ ದೇವಾಲಯದ ಪ್ರಧಾನ ಅರ್ಚಕನನ್ನು ಭೇಟಿಯಾದರು ಮತ್ತು ಉತ್ತರಾಖಂಡದ ಇನ್ನೂ ಹಲವಾರು ದೇವಾಲಯಗಳ ಹೊರಗೆ ಇಂತಹ ಪೋಸ್ಟರ್‌ಗಳನ್ನು ಹಾಕುವುದಾಗಿ ಹೇಳಿದರು.

(ಕೃಪೆ: ದಿ ಕ್ವಿಂಟ್)


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...