Homeಮುಖಪುಟ‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಆ ಹಲ್ಲೆಯನ್ನು ಸಮರ್ಥಿಸಿಕೊಂಡು ಈ ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ.

- Advertisement -
- Advertisement -

ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ಮಾರ್ಚ್ 20 ಮತ್ತು 21 ರಂದು 150-200 ದೇವಾಲಯಗಳ ಹೊರಭಾಗದಲ್ಲಿ, ‘ಹಿಂದೂಗಳಲ್ಲದವರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ’ ಎಂಬ ಪೋಸ್ಟರ್‌ಗಳನ್ನು ಹಾಕಿದ ಆರೋಪದಲ್ಲಿ ಹಿಂದೂ ಯುವ ವಾಹಿನಿ ಎಂಬ ಬಲಪಂಥೀಯ ಸಂಘಟನೆಯ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ದಾಸ್ನಾ ಊರಿನ ದೇವಸ್ಥಾನವೊಂದರಲ್ಲಿ ನಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಆ ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದ ಈ ಸಂಘಟನೆ ಇತ್ತೀಚೆಗೆ ಈ ಪೋಸ್ಟರ್ ‘ಅಭಿಯಾನ’ ನಡೆಸಲು ನಿರ್ಧರಿಸಿದೆ.

ಕೊಟ್ವಾಲಿಯ ಠಾಣಾಣಾಧಿಕಾರಿ (ಎಸ್‌ಎಚ್‌ಒ) ಶಿಶುಪಾಲ್ ಸಿಂಗ್ ನೇಗಿ ಅವರು ಮಾರ್ಚ್ 21 ರ ಸಂಜೆ ಈ ವಿವಾದಾತ್ಮಕ ಪೋಸ್ಟರ್‌ಗಳನ್ನು ತೆಗೆದುಹಾಕಲು ಸಂಘಟನೆಯ ಸದಸ್ಯರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಅವರ ಸಭೆ ಮುಗಿದ ಕೂಡಲೇ ಹಿಂದೂ ಯುವ ವಾಹಿನಿಯ ಪ್ರಧಾನ ಕಾರ್ಯದರ್ಶಿ ಜೀತು ರಾಂಧವ ದಿ ಕ್ವಿಂಟ್ ವರದಿಗಾರರ ಜೊತೆ ಮಾತನಾಡಿದ್ದು, ‘ನಗರದಲ್ಲಿ ಇಂತಹ ಪೋಸ್ಟರ್‌ಗಳನ್ನು ಹಾಕದಂತೆ ಪೊಲೀಸರು ಬೆದರಿಕೆ ಹಾಕಿದ್ದಾರೆ. ಅವರು ಈ ರೀತಿ ಮುಸ್ಲಿಮರ ಪರವಾಗಿರಲು ಏಕೆ ಪ್ರಯತ್ನಿಸುತ್ತಿದ್ದಾರೆ? ಉತ್ತರಾಖಂಡದಂತಹ ಸ್ಥಳದಲ್ಲಿ ಇದು ನಡೆಯುತ್ತಿದೆ ಎಂದು ನಾನು ನಂಬಲು ಸಾಧ್ಯವಿಲ್ಲ. ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ ನಾನೇನು ಹೆದರುವುದಿಲ್ಲ, ಆದರೆ ಉತ್ತರಾಖಂಡದ ಪ್ರತಿಯೊಂದು ದೇವಾಲಯದ ಹೊರಗೆ ಈ ಪೋಸ್ಟರ್‌ಗಳು ಇರುವುದನ್ನು ನಾನು ಖಚಿತಪಡಿಸಿಕೊಳ್ಳಲಿದ್ದೇನೆ ” ಎಂದು ಅವರು ಕೋಪದಿಂದ ಹೇಳಿದ್ದರು.

ಐಪಿಸಿಯ ಸೆಕ್ಷನ್ 153 ಎ ಅಡಿಯಲ್ಲಿ (ಧರ್ಮ, ಜನಾಂಗ, ಜನ್ಮಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಿಂದೂ ಯುವ ವಾಹಿನಿ ಸದಸ್ಯರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಕ್ವಿಂಟ್ ಎಸ್‌ಎಚ್‌ಒ ನೇಗಿ ಮೂಲಕ ದೃಢಪಡಿಸಿಕೊಂಡಿದೆ.

ದಿ ಕ್ವಿಂಟ್ ಡೆಹ್ರಾಡೂನ್ ಎಸ್‌ಎಸ್‌ಪಿ ಕಚೇರಿಯನ್ನು ಸಂಪರ್ಕಿಸಿ, ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಪ್ರದೀಪ್ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿತ್ತು. ಆಗ ‘ಈ ಪೋಸ್ಟರ್‌ಗಳ ಸುದ್ದಿ ಬೆಳಕಿಗೆ ಬಂದಿದೆ, ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ ಮತ್ತು ಮಾರ್ಚ್ 21 ರ ಮಧ್ಯಾಹ್ನದ ವೇಳೆಗೆ ಹಲವಾರು ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ರಾವತ್ ಹೇಳಿದ್ದರು.

ಎಲ್ಲಾ ಪೋಸ್ಟರ್‌ಗಳನ್ನು ತೆಗೆಯಲಾಗಿದೆಯೆ ಎಂದು ಪುನರ್ ದೃಢಪಡಿಸಿಕೊಳ್ಳಲು ನಾವು ಹಿಂದೂ ಯುವ ವಾಹಿನಿಯ ರಾಂಧವಾ ಅವರಿಗೆ ಕರೆ ಮಾಡಿದೆವು. ಕೆಲವು ಪೋಸ್ಟರ್‌ಗಳನ್ನು ತೆಗೆದಿರುವುದು ನಿಜ, ಆದರೆ ಅನೇಕರು ಪೋಸ್ಟರ್ ಹಾಕುವ ಕೆಲಸ ಮುಂದುವರೆಸಿದ್ದಾರೆ ಎಂದು ಹೇಳಿದರು. “ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ನಾನು ಹೆದರುವುದಿಲ್ಲ, ಪೋಸ್ಟರ್‌ಗಳನ್ನು ತೆಗೆಯದಂತೆ ನಾವು ನೋಡಿಕೊಳ್ಳುತ್ತೇವೆ. ನನ್ನ ಸಮುದಾಯದ ಜನರು ನನ್ನೊಂದಿಗೆ ನಿಲ್ಲುತ್ತಾರೆ, ಇಡೀ ಹಿಂದೂ ಸಮುದಾಯವು ನನ್ನೊಂದಿಗೆ ನಿಲ್ಲುತ್ತದೆ. ನೀವು ನೋಡುತ್ತೀರಿ!’ ಎಂದು ತಿಳಿಸಿದರು.

ಬ್ಯಾನರ್‌ಗಳನ್ನು ಏಕೆ ಹಾಕಲಾಯಿತು? ಇದಕ್ಕೆ ಪ್ರೇರಣೆ ಏನು?

“ಈ ತಾಣವು ಹಿಂದೂಗಳಿಗೆ ಪವಿತ್ರ ಸ್ಥಳವಾಗಿದೆ, ಹಿಂದೂಗಳಲ್ಲದವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ” ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸ್ನಾದ ದೇವಸ್ಥಾನದ ಎದುರು ಅಲ್ಲಿನ ಅರ್ಚಕ ನರಸಿಂಗಾನಂದ ಇಂಥದ್ದೇ ಪೋಸ್ಟರ್ ಹಾಕಿದ್ದಾರೆ. ಇದು 14 ವರ್ಷದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆಗೆ ಕಾರಣವಾಯಿತು. ಈ ಘಟನೆಯ ನಂತರ ಹಿಂದೂ ಯುವ ವಾಹಿನಿ ಸದಸ್ಯರು ಮುಖ್ಯ ಅರ್ಚಕ ನರಸಿಂಗಾನಂದರನ್ನು ಭೇಟಿಯಾಗಿ ಬೆಂಬಲಿಸಿದ್ದರು.

ದೆಹಲಿ ಗಲಭೆ ಮತ್ತು ನರಸಿಂಗಾನಂದ ಸ್ವಾಮಿ

ದೆಹಲಿ ಗಲಭೆಯ ಅಸಲಿ ಪಿತೂರಿಕೋರರು ಭಾಗ 2ರಲ್ಲಿ ನಾನುಗೌರಿ.ಕಾಂ ದಿ ವೈರ್ ಉಲ್ಲೇಖಿಸಿ ಈ ಸ್ವಾಮಿಯ ಪ್ರಚೋದನೆ, ಪಾತ್ರಗಳ ಕುರಿತು ಬರೆದಿತ್ತು. ಈ ವರದಿಯಲ್ಲಿ, ತಾವು ಪೋಸ್ಟರ್ ಹಾಕಲು ನರಸಿಂಗಾನಂದ ಸ್ವಾಮಿಯೇ ಪ್ರೇರಣೆ ಎಂದು ಹಿಂದೂ ಯುವ ವಾಹಿನಿ ಹೇಳಿದೆ. ಯಾರೀತ? ಉತ್ತರಪ್ರದೇಶದ ದಾಸ್ನಾದ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕೆ ಮುಸ್ಲಿಂ ಬಾಲಕನ ಮೇಲೆ ಹಲ್ಲೆ ಮಾಡಲಾಗಿತು. ಆ ದೇವಸ್ಥಾನದ ಪ್ರಧಾನ ಅರ್ಚಕ ಈ ನರಸಿಂಗಾನಂದ ಸ್ವಾಮಿಯೇ. ಈತನಿಗೆ ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಇರುವುದುನ್ನು, ದೆಹಲಿ ಗಲಭೆಗೆ ಕಾರಣವಾದ ಪ್ರಚೋದನಾಕಾರಿ ಭಾಷಣಗಳ ವಿಡಿಯೋಗಳನ್ನು ಈತ ವೈರಲ್ ಮಾಡಿದ್ದನ್ನು ದಿ ವೈರ್ ಸಾಬೀತು ಮಾಡಿತ್ತು. ನಾನುಗೌರಿ ಕೂಡ ಅದನ್ನು ಪ್ರಕಟಿಸಿತ್ತು.

ಮಾರ್ಚ್ 20 ರಂದು ಅಭಿಯಾನ ಪ್ರಾರಂಭವಾಯಿತು ಎಂದು ಹಿಂದೂ ಯುವ ವಾಹಿನಿ ಅಧ್ಯಕ್ಷ 47 ವರ್ಷದ ಗೋವಿಂದ್ ವಾಧ್ವಾ ಹೇಳಿದ್ದಾರೆ. 150-200 ದೇವಾಲಯಗಳಲ್ಲಿ ಸ್ವಯಂಸೇವಕರು ಈಗಾಗಲೇ ಸ್ಥಳೀಯರ ಸಹಾಯದಿಂದ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತು ಮುಂದಿನ ವಾರದಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. “ಕೆಲವೊಮ್ಮೆ ನಮ್ಮ ವಿಗ್ರಹಗಳು ಒಡೆಯಲ್ಪಡುತ್ತವೆ, ಅಥವಾ ಜನರು ಶಿವ ವಿಗ್ರಹಗಳ ಮೇಲೆ ಇಣುಕಿ ನೋಡುತ್ತಾರೆ, ನೀವು ಇದನ್ನೆಲ್ಲಾ ನೋಡಿರಬೇಕು. ಅದು ಪದೇ ಪದೇ ಸಂಭವಿಸುತ್ತದೆ. ಇದನ್ನು ಹಿಂದೂ ಸಮುದಾಯದ ಸದಸ್ಯರು ಎಂದಿಗೂ ಮಾಡುವುದಿಲ್ಲ, ಆದರೆ ಹಿಂದೂಯೇತರರು ಮಾಡುತ್ತಾರೆ. ಅಂತಹ ಹಿಂದೂಯೇತರರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹಿಂದೂಗಳಲ್ಲದವರು ಬರದಂತೆ ಮತ್ತು ದೇವಾಲಯಗಳ ಪಾವಿತ್ರ‍್ಯವು ಅಳಿಯದಂತೆ ನೋಡಿಕೊಳ್ಳಲು ಈ ಬ್ಯಾನರ್‌ಗಳನ್ನು ಹಾಕಿದ್ದೇವೆ’ ಎಂದರು.

ಹಿಂದೂಯೇತರರು ಆಕ್ಷೇಪಾರ್ಹವಾದುದನ್ನು ಮಾಡಿದ್ದಾರೆಯೇ ಮತ್ತು ಅಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿವೆಯೇ ಎಂಬ ಪ್ರಶ್ನೆಗೆ ವಾಧ್ವಾ, “ಇತ್ತೀಚೆಗೆ ಡೆಹ್ರಾಡೂನ್ ಅಥವಾ ಉತ್ತರಾಖಂಡದಲ್ಲಿ ಎಲ್ಲಿಯೂ ಈ ರೀತಿಯ ಪ್ರಕರಣಗಳು ಸಂಭವಿಸಿಲ್ಲ. ಆದರೆ ರಕ್ಷಣೆಯ ಉದ್ದೇಶದಿಂದ ನಾವು ಇದನ್ನು ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ತಪ್ಪು ಮಾಡಿಲ್ಲ” ಎಂದಿದ್ದಾರೆ.

ಡೆಹ್ರಾಡೂನ್‌ನ ದೇವಾಲಯಗಳಿಗಷ್ಟೇ ಇದು ಸಿಮೀತವಲ್ಲ ಎಂದು ವಾಧ್ವಾ ಹೇಳಿದ್ದಾರೆ. “ಉತ್ತರಾಖಂಡದಾದ್ಯಂತದ ನಾಲ್ಕು ಮಹತ್ವದ ದೇವಾಲಯಗಳಲ್ಲಿ ಒಂದೇ ರೀತಿಯ ಪೋಸ್ಟರ್‌ಗಳನ್ನು ಹಾಕುವ ಯೋಜನೆ ನಮ್ಮಲ್ಲಿದೆ. ಇದಕ್ಕಾಗಿ ನಾವು ಒಂದು ಯೋಜನೆಯನ್ನು ರೂಪಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಉತ್ತರಾಖಂಡದ ಸಿಎಂ ಅವರನ್ನು ಭೇಟಿ ಮಾಡಲಿದ್ದೇವೆ ಎನ್ನುವ ಅವರು, ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದ್ರಿನಾಥ್ ನಾಲ್ಕು ಪವಿತ್ರ ಹಿಂದೂ ಕ್ಷೇತ್ರಗಳು ಎಂದು ಉಲ್ಲೇಖಿಸಿದರು.

ಈ ಪೋಸ್ಟರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ಕೇಳಿದಾಗ, “ನನ್ನ ಮನೆಯನ್ನು ರಕ್ಷಿಸಲು ನನಗೆ ಪೊಲೀಸರಿಂದ ಅನುಮತಿ ಬೇಕೇ?” ಎಂದಿದ್ದಾರೆ. ‘ಈ ದೇವಾಲಯಗಳು ಯಾರ ವ್ಯಾಪ್ತಿಗೆ ಬರುತ್ತವೆ, ಅವು ಸರ್ಕಾರಿ ಸ್ವಾಮ್ಯದಲ್ಲಿವೆಯೇ ಅಥವಾ ಖಾಸಗಿ ಟ್ರಸ್ಟ್‌ನವರ ಕೈಯಲ್ಲಿವೆಯೇ?’ ಎಂದು ಕೇಳಿದಾಗ, “ಇದು ಹಿಂದೂ ಸಮುದಾಯದ ಆಸ್ತಿ ಮತ್ತು ಯಾವುದೇ ಒಬ್ಬ ವ್ಯಕ್ತಿಗೆ ಸೇರಿಲ್ಲ. ಇಲ್ಲಿ ಪೋಸ್ಟರ್ ಹಾಕಲು ಯಾವ ಅನುಮತಿಯೂ ಬೇಕಿಲ್ಲ’ ಎಂದಿದ್ದಾರೆ. ಅಲ್ಲದೇ ನಮ್ಮದು 2002 ರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸ್ಥಾಪಿಸಿದ ಹಿಂದೂ ಯುವ ವಾಹಿನಿ ಅಲ್ಲ, ಇದೇ ಬೇರೆ ಎಂದು ವಾಧ್ವಾ ಸ್ಪಷ್ಟಪಡಿಸಿದರು.

ಪಶ್ಚಿಮ ಯುಪಿಯ ದಾಸ್ನಾದಲ್ಲಿ ದೇವಾಲಯದಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸಿದ ನಂತರ, ಬಿಎಸ್ಪಿಯ ಧೌಲಾನಾ ಅಸ್ಲಂ ಚೌಧರಿ ದಾಸ್ನಾದಲ್ಲಿನ ದೇವಾಲಯವು ತನ್ನ ಪೂರ್ವಜರಿಗೆ ಸೇರಿದ್ದು ಮತ್ತು ಆಡಳಿತ ಮಂಡಳಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳಿದ್ದಾರೆ. ಚೌಧರಿ ಹೀಗೆ ಹೇಳಿದ ನಂತರ, ವಾಧ್ವಾ ದಾಸ್ನಾದ ದೇವಾಲಯದ ಪ್ರಧಾನ ಅರ್ಚಕನನ್ನು ಭೇಟಿಯಾದರು ಮತ್ತು ಉತ್ತರಾಖಂಡದ ಇನ್ನೂ ಹಲವಾರು ದೇವಾಲಯಗಳ ಹೊರಗೆ ಇಂತಹ ಪೋಸ್ಟರ್‌ಗಳನ್ನು ಹಾಕುವುದಾಗಿ ಹೇಳಿದರು.

(ಕೃಪೆ: ದಿ ಕ್ವಿಂಟ್)


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...