Homeಮುಖಪುಟಉತ್ತರಾಖಂಡ | 'ಹಿಂದೂಯೇತರರಿಗೆ' ಪ್ರವೇಶ ನಿಷೇಧಿಸಿ ಹಲವು ಗ್ರಾಮಗಳಲ್ಲಿ ಫಲಕ ಅಳವಡಿಕೆ : ವರದಿ

ಉತ್ತರಾಖಂಡ | ‘ಹಿಂದೂಯೇತರರಿಗೆ’ ಪ್ರವೇಶ ನಿಷೇಧಿಸಿ ಹಲವು ಗ್ರಾಮಗಳಲ್ಲಿ ಫಲಕ ಅಳವಡಿಕೆ : ವರದಿ

- Advertisement -
- Advertisement -

ಉತ್ತರಾಖಂಡದ ರುದ್ರಪಯಾಗ್ ಜಿಲ್ಲೆಯಾದ್ಯಂತ ಹಲವೆಡೆ ‘ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರು ಮತ್ತು ಬೀದಿ ಬದಿ ವ್ಯಾಪಾರಿ’ಗಳ ಪ್ರವೇಶವನ್ನು ನಿಷೇಧಿಸುವ ಫಲಕವನ್ನು ಹಾಕಲಾಗಿದೆ ಎಂದು ವರದಿಯಾಗಿದೆ. ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಫಲಕವೊಂದರ ಫೋಟೋ ಹರಿದಾಡಿದೆ.

“ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರು ಮತ್ತು ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದನ್ನು ಮತ್ತು ಗ್ರಾಮದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಗ್ರಾಮದಲ್ಲಿ ಎಲ್ಲಿಯಾದರೂ ಕಂಡು ಬಂದರೆ ದಂಡದ ಕ್ರಮ ಕೈಗೊಳ್ಳಲಾಗುವುದು” ಎಂದು ಫಲಕದಲ್ಲಿ ಬರೆಯಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿದೆ.

ಆರಂಭದಲ್ಲಿ, ಸೂಚನಾ ಫಲಕ ಅಳವಡಿಸಲು ಗ್ರಾಮ ಪಂಚಾಯತ್‌ನಿಂದ ನಿರ್ದೇಶನ ಬಂದಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಮಾತನಾಡಿರುವ ನ್ಯಾಲ್ಸು ಗ್ರಾಮದ ಮುಖ್ಯಸ್ಥ ಪ್ರಮೋದ್ ಸಿಂಗ್, “ಗ್ರಾಮಸ್ಥರು ತಮ್ಮ ಗ್ರಾಮದ ಹೊರಗೆ ಸೂಚನಾ ಫಲಕ ಅಳವಡಿಸಿದ್ದಾರೆ. ಗ್ರಾಮ ಪಂಚಾಯಿತಿ ಅಲ್ಲ” ಎಂದು ಹೇಳಿದ್ದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ತಿಳಿಸಿದೆ.

ಶೇರ್ಸಿ, ಗೌರಿಕುಂಡ್, ತ್ರಿಯುಗಿನಾರಾಯಣ, ಸೋನ್‌ಪ್ರಯಾಗ, ಬರಸು, ಜಾಮು, ಆರಿಯಾ, ರವಿಗ್ರಾಮ್ ಮತ್ತು ಮೈಖಂಡ ಸೇರಿದಂತೆ ಉತ್ತರಾಖಂಡದ ಬಹುತೇಕ ಎಲ್ಲಾ ಹಳ್ಳಿಗಳಲ್ಲಿ ಇದೇ ರೀತಿಯ ಸೂಚನಾ ಫಲಕಗಳನ್ನು ಹಾಕಲಾಗಿದೆ ಎಂದು ವರದಿ ಹೇಳಿದೆ.

ಮುಸ್ಲಿಂ ಸೇವಾ ಸಂಘಟನೆ ಮತ್ತು ಎಐಎಂಐಎಂನಿಂದ ಎರಡು ಮುಸ್ಲಿಂ ನಿಯೋಗಗಳು ಸೆಪ್ಟೆಂಬರ್ 5ರಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಭಿನವ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಲ್ಪಸಂಖ್ಯಾತ ವಿರೋಧಿ ಘಟನೆಗಳ ಬಗ್ಗೆ ತಮ್ಮ ಕಳವಳವನ್ನು ತಿಳಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ವಿವಾದಾತ್ಮಕ ಸೂಚನಾ ಫಲಕಗಳ ಪೈಕಿ ಹಲವನ್ನು ತೆಗೆಯಲಾಗಿದೆ. ಇನ್ನೂ ಕೆಲವು ತೆರವುಗೊಳಿಸಲು ಬಾಕಿಯಿದೆ. ಫಲಕ ಅಳವಡಿಸಿದ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ರುದ್ರಪ್ರಯಾಗ ಸರ್ಕಲ್ ಅಧಿಕಾರಿ ಪ್ರಬೋಧ್ ಕುಮಾರ್ ಗಿಲ್ಡಿಯಾಲ್ ಹೇಳಿದ್ದಾರೆ.

ಈ ನಡುವೆ, ಎಲ್ಲೆಲ್ಲಿ ವಿವಾದಾತ್ಮಕ ಫಲಕಗಳನ್ನು ಅಳವಡಿಸಲಾಗಿದೆ ಎಂದು ಪರಿಶೀಲಿಸಲು ಸ್ಥಳೀಯ ಪೊಲೀಸ್ ಮತ್ತು ಗುಪ್ತಚರ ಘಟಕಗಳಿಗೆ ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಭಿನವ್ ಕುಮಾರ್ ಅವರು ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಯುಪಿ ಪೊಲೀಸರಿಂದ ‘ಯಾದವ ವ್ಯಕ್ತಿ’ಯ ಎನ್‌ಕೌಂಟರ್ : “ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ” ಎಂದ ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...