Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...