Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...